ಸುದ್ದಿ ಪ್ರಕಟಿಸದಂತೆ ನಿರ್ಬಂಧ ಕೋರಿ ಸಚಿವರ ಅರ್ಜಿ, ತುರ್ತು ಅರ್ಜಿ ವಿಚಾರಣೆಗೆ ನಿರಾಕರಿಸಿದ ಕೋರ್ಟ್
ಬೆಂಗಳೂರು, ಜ.10: ವಿಧಾನಸೌಧ ಪಶ್ಚಿಮ ಗೇಟ್ನಲ್ಲಿ 25.76 ಲಕ್ಷ ಹಣ ಪತ್ತೆ ಪ್ರಕರಣ ಸಂಬಂಧ ಸಚಿವ ಪುಟ್ಟರಂಗಶೆಟ್ಟಿ, ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಜ.14ಕ್ಕೆ ಮುಂದೂಡಿದೆ.
ಈ ಸಂಬಂಧ ಸಚಿವ ಪುಟ್ಟರಂಗಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ನಿರ್ಧಾರವನ್ನು ಕೈಗೊಳ್ಳಲು ನಿರಾಕರಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ವಿಧಾನಸೌಧದ ಪಶ್ಚಿಮ ಗೇಟ್ನಲ್ಲಿ ಹಣ ಪತ್ತೆ ಪ್ರಕರಣ ಸಂಬಂಧ ಸುದ್ದಿ ಮಾಧ್ಯಮಗಳು ಸುದ್ದಿಯನ್ನು ಪ್ರಕಟಿಸುತ್ತಿದ್ದು, ಈ ಎಲ್ಲ ಪ್ರಕಟಣೆಗಳಿಗೆ ನಿರ್ಬಂಧ ಹೇರಬೇಕೆಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ತುರ್ತಾಗಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.
Next Story