Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಮೇಲ್ವರ್ಗಕ್ಕೆ ಶೇ.10 ಆರ್ಥಿಕ ಮೀಸಲಾತಿ...

"ಮೇಲ್ವರ್ಗಕ್ಕೆ ಶೇ.10 ಆರ್ಥಿಕ ಮೀಸಲಾತಿ ಸಂವಿಧಾನ ವಿರೋಧಿ"

ಮಸೂದೆಗೆ ಅಂಕಿತ ಹಾಕದಂತೆ ರಾಷ್ಟ್ರಪತಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ11 Jan 2019 7:21 PM IST
share
ಮೇಲ್ವರ್ಗಕ್ಕೆ ಶೇ.10 ಆರ್ಥಿಕ ಮೀಸಲಾತಿ ಸಂವಿಧಾನ ವಿರೋಧಿ

ಚಿಕ್ಕಮಗಳೂರು, ಜ.11: ಕೇಂದ್ರ ಸರಕಾರ ಇತ್ತೀಚೆಗೆ ಮಂಡಿಸಿರುವ ಮೇಲ್ವರ್ಗದವರಿಗೆ ಶೇ.10 ಆರ್ಥಿಕ ಮೀಸಲಾತಿ ಮಸೂದೆ ಅಂಬೇಡ್ಕರ್ ಅವರ ಮೀಸಲಾತಿ ಪರಿಕಲ್ಪನೆಗೆ ತದ್ವಿರುದ್ಧವಾಗಿದ್ದು, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ದಲಿತರು ಹಾಗೂ ತಳ ಸಮುದಾಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಮಸೂದೆಗೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದೆಂದು ಒತ್ತಾಯಿಸಿ ಶುಕ್ರವಾರ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದೆ.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬಳಿಕ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ್ ಹಾಗೂ ಸದಸ್ಯರಾದ ಬಸವರಾಜು, ಪರಮೇಶ್, ಉಮೇಶ್ ಮತ್ತು ರಮೇಶ್ ಪತ್ರಿಕೆಯೊಂದಿಗೆ ಮಾತನಾಡಿ, ಜಾತಿ ವ್ಯವಸ್ಥೆ ಈ ದೇಶದ ಬಹುದೊಡ್ಡ ತಳ ಸಮುದಾಯಗಳು ಬಹುದೊಡ್ಡ ಶೃತೃವಾಗಿದೆ. ಈ ಸಮುದಾಯಗಳಿಗೆ ಆರ್ಥಿಕ ಸಮಾನತೆ ನೀಡುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ಆಧರಿತ ಮೀಸಲಾತಿಯ ಪರಿಕಲ್ಪನೆಯ ಮಹತ್ವ ಪ್ರತಿಪಾದಿಸಿದರು.

ಸಂವಿಧಾನದ 16(4) ಪರಿಚ್ಛೇದದನ್ವಯ ಜಾತಿ ಆಧರಿತ ಮೀಸಲಾತಿ ವ್ಯವಸ್ಥೆಯನ್ನು ಜಾರಿ ಮಾಡಿರುವ ಅಂಬೇಡ್ಕರ್ ಅವರಿಗೆ ತುಳಿತಕ್ಕೊಳಗಾದ ಸಮುದಾಯಗಳನ್ನು ಸಾಮಾಜಿಕವಾಗಿ ಮೇಲೆತ್ತುವ ಉದ್ದೇಶ ಮಾತ್ರ ಇತ್ತು. ಆದರೆ ಅಂಬೇಡ್ಕರ್ ಅವರ ಮೀಸಲಾತಿ ಪರಿಕಲ್ಪನೆಯ ಉದ್ದೇಶವನ್ನೇ ಅಣಕಿಸುವ ರೀತಿಯಲ್ಲಿ ಕೇಂದ್ರ ಸರಕಾರ ಸಂಸತ್‍ನಲ್ಲಿ ಮೇಲ್ವರ್ಗದವರಿಗೆ ಶೇ.10 ಆರ್ಥಿಕ ಮೀಸಲಾತಿ ಖೋಟಾ ಮಸೂದೆ ಅಂಗೀಕರಿಸಿದೆ. ಈ ಮಸೂದೆ ಅಂಬೇಡ್ಕರ್ ಸಂವಿಧಾನಕ್ಕೆ ವಿರುದ್ಧವಾಗಿದ್ದು, ರಾಷ್ಟ್ರಪತಿಗಳು ಈ ಮಸೂದೆಗೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದೆಂದು ಅವರು ತಿಳಿಸಿದರು.

ಕೇಂದ್ರ ಸರಕಾರ ಜಾರಿ ಮಾಡಿರುವ ಆರ್ಥಿಕ ಮೀಸಲಾತಿ ಸಂವಿಧಾನದ 16(4) ಪರಿಚ್ಚೇದ ಹಾಗೂ 1932ರಲ್ಲಿ ಅಂಬೇಡ್ಕರ್-ಗಾಂಧಿ ನಡುವೆ ನಡೆದ ಪೂನಾ ಒಪ್ಪಂದಕ್ಕೆ ವಿರುದ್ಧವಾಗಿದೆ. ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ದಬ್ಬಾಳಿಕೆಗೆ ಗುರಿಯಾದ ಜನರನ್ನು ಸಾಮಾಜಿಕವಾಗಿ ಮೇಲೆತ್ತುವ ಪರಿಕಲ್ಪನೆ ಮೀಸಲಾತಿಯದ್ದಾಗಿದ್ದು, ಕೇಂದ್ರದ ಈ ಆರ್ಥಿಕ ಮೀಸಲಾತಿ ಮಸೂದೆ ಮೀಸಲಾತಿ ಸದಾಶಯಕ್ಕೆ ವಿರುದ್ಧವಾಗಿದೆ ಎಂದ ಅವರು, ಇದುವರೆಗೂ ಜಾರಿಯಾದ ಜಾತಿ ಆಧರಿತ ಮೀಸಲಾತಿಯಿಂದ ಎಸ್ಸಿ, ಎಸ್ಟಿ, ಹಿಂದುಳಿದ ಸಮುದಾಯಗಳಿಗೆ ಸಿಗಬೇಕಾದ ಸ್ಥಾನಮಾನ ಸಿಕ್ಕಿಲ್ಲ. ಈ ಸಮುದಾಯದವರು ಉನ್ನತ ಹುದ್ದೆಗಳಲ್ಲಿದ್ದರೂ ಅವರು ಜಾತಿ ತಾರತಮ್ಯ, ಅವಮಾನಗಳಿಂದ ಮುಕ್ತರಾಗಿಲ್ಲ. ಮೀಸಲಾತಿಯ   ಕೋಟವನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲ ಹಂತದಲ್ಲೂ ಭರ್ತಿ ಮಾಡಿಲ್ಲ. 1ನೇ ದರ್ಜೆಯ ಹುದ್ದೆಗಳಲ್ಲಿ ಈ ವರ್ಗಗಳ ಪ್ರಮಾಣ ಸಾಂಕೀತಿಕವಾಗಿದ್ದರೇ, 2ನೇ ದರ್ಜೆಯ ಹುದ್ದೆಗಳಲ್ಲಿ ಈ ವರ್ಗಗಳ ಪ್ರಮಾಣ ತೀರಾ ಕಡಿಮೆ ಇದೆ. 2ನೇ ದರ್ಜೆಯಲ್ಲಿ ಶೇ.20 ರಷ್ಟಿದ್ದು, 4ನೇ ದರ್ಜೆಯಲ್ಲಿ ಶೇ.70ರಷ್ಟಿದೆ. ಪೊಲೀಸ್, ಮಿಲಿಟರಿ, ನ್ಯಾಯಾಂಗದಂತಹ ಉನ್ನತಾಡಳಿತದಲ್ಲಿ ಮೇಲ್ವರ್ಗದವರೇ ಶೇ.90ರಷ್ಟಿದ್ದಾರೆ. ಹೀಗಿದ್ದೂ ಶೇ.10  ಆರ್ತಿಕ ಮೀಸಲಾತಿ ಘೋಷಣೆ ತಳ ಸಮುದಾಯಗಳಿಗೆ ಮಾಡಿದ ಅನ್ಯಾಯವಾಗಿದೆ ಎಂದು ಅವರು ಆರೋಪಿದರು.

ತಳ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಸಿಗುವವರೆಗೂ ಅಂಬೇಡ್ಕರ್ ಸಂವಿಧಾನದಂತೆ ಜಾತಿ ಆಧರಿತ ಮೀಸಲಾತಿ ಸಮರ್ಥನೀಯವಾಗಿದೆ ಎಂದ ಅವರು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವ ಆರ್ಥಿಕ ಮೀಸಲಾತಿಯನ್ನು ಜಾರಿಗೊಳಿಸುವುದು ದೇಶದ ಶೋಷಿತ ಸಮುದಾಯಗಳ ಹಕ್ಕನ್ನು ಕಿತ್ತುಕೊಂಡಂತಾಗುತ್ತದೆ. ಈ ಕಾರಣಕ್ಕೆ ಪಕ್ಷವು ಈ ಮಸೂದೆಯನ್ನು ವಿರೋಧಿಸುತ್ತಿದ್ದು, ರಾಷ್ಟ್ರಪತಿ ಕೋವಿಂದ್ ಅವರು ಈ ಮಸೂದೆಯ ಹಿಂದಿರುವ ಹುನ್ನಾರ ಅರ್ಥೈಸಿಕೊಂಡು ಅಂಕಿತ ಹಾಕಬಾರದೆಂದ ಒತ್ತಾಯಿಸಿರುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X