Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ಇಐಬಿಯೊಂದಿಗೆ 200 ಮಿಲಿಯನ್ ಯುರೋ...

"ಇಐಬಿಯೊಂದಿಗೆ 200 ಮಿಲಿಯನ್ ಯುರೋ ಒಪ್ಪಂದಕ್ಕೆ ಸಹಿ"

ಮೆಟ್ರೋ ರೈಲು ಯೋಜನೆ ಹಂತ-2

ವಾರ್ತಾಭಾರತಿವಾರ್ತಾಭಾರತಿ11 Jan 2019 8:20 PM IST
share
ಇಐಬಿಯೊಂದಿಗೆ 200 ಮಿಲಿಯನ್ ಯುರೋ ಒಪ್ಪಂದಕ್ಕೆ ಸಹಿ

ಬೆಂಗಳೂರು, ಜ.11: ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-2ರ ರೀಚ್-6ಕ್ಕೆ ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್(ಇಐಬಿ) ಜೊತೆ 200 ಮಿಲಿಯನ್ ಯುರೋ ಒಪ್ಪಂದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಸಹಿ ಹಾಕಿದರು.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ ನೀಡುತ್ತಿರುವ ನೆರವಿಗೆ ಸರಕಾರ ಆಭಾರಿಯಾಗಿದೆ ಎಂದರು. ಬೆಂಗಳೂರು ನಗರದಲ್ಲಿ 11 ದಶಲಕ್ಷ(1.10 ಕೋಟಿ) ಜನಸಂಖ್ಯೆ ಇದ್ದು, ಪರಿಸರ ಮಾಲಿನ್ಯಕ್ಕೆ ನೀಡುತ್ತಿರುವ ಕೊಡುಗೆಯನ್ನು ಹಾಗೂ ವಾಹನ ದಟ್ಟಣೆ ಕಡಿಮೆ ಮಾಡುವ, ಹಾಗೂ ಜನಸಾಮಾನ್ಯರ ಜೀವನಮಟ್ಟ ಉತ್ತಮಪಡಿಸುವ ನಿಟ್ಟಿನಲ್ಲಿ ಮೆಟ್ರೋ ಯೋಜನೆ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಮೆಟ್ರೋ 2ನೇ ಹಂತದ ಯೋಜನೆಯ ಅಂದಾಜು ಮೊತ್ತ 26,405 ಕೋಟಿ ರೂ.ಗಳಾಗಿದ್ದು, ಈ ಪೈಕಿ 12,141 ಕೋಟಿ ರೂ.ಗಳು ಸಾಲದ ಅಗತ್ಯವಿದೆ. ಇಐಬಿ 500 ಮಿಲಿಯನ್ ಯುರೋಗಳನ್ನು ಅಂದರೆ ಸುಮಾರು 3800 ಕೋಟಿ ರೂ.ಗಳ ನೆರವನ್ನು ಒದಗಿಸುತ್ತಿರುವುದು ಅಭಿನಂದನೀಯ ಎಂದು ಕುಮಾರಸ್ವಾಮಿ ತಿಳಿಸಿದರು.

ಉಪ ಮುಖ್ಯಮಂತ್ರಿ ಪರಮೇಶ್ವರ್ ಮಾತನಾಡಿ, ಗೊಟ್ಟಿಗೆರೆಯಿಂದ ನಾಗವಾರವರೆಗೆ ರೀಚ್-6 ಯೋಜನೆಗೆ ಇಐಬಿ ಅವರು 500 ಮಿಲಿಯನ್ ಯುರೋ ಅನ್ನು ಸಾಲವಾಗಿ ನೀಡಲು ಒಪ್ಪಿದ್ದಾರೆ. ಏಷಿಯನ್ ಇನ್‌ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್(ಎಐಐಬಿ) 300 ಮಿಲಿಯನ್ ಯುರೋ ಸಾಲ ನೀಡಲಿದ್ದು, ಒಟ್ಟಾರೆ ಈ ಯೋಜನೆಗೆ 800 ಯುರೋ ಮಿಲಿಯನ್ ಸಾಲ ನೀಡಲು ಮುಂದೆ ಬಂದಿದ್ದಾರೆ ಎಂದರು.

ನಮ್ಮ ಸರಕಾರ ಆರ್ಥಿಕವಾಗಿ ಸುಭದ್ರವಾಗಿರುವುದರಿಂದ ಇತರೆ ಬ್ಯಾಂಕ್‌ಗಳು ಸಾಲ ನೀಡಲು ಆಸಕ್ತಿ ತೋರುತ್ತಿವೆ. ಕೆಲವರು ಸರಕಾರದ ಬಗ್ಗೆ ಅನಗತ್ಯವಾಗಿ ಮಾತನಾಡುತ್ತಿದ್ದಾರೆ. ನಮ್ಮ ಸರಕಾರ ಆರ್ಥಿಕ ಭದ್ರತೆ ಸಾಧಿಸಿರುವುದರಿಂದ ಇತರೆ ಸಂಸ್ಥೆಗಳು ಸಾಲ ನೀಡಲು ಮುಂದೆ ಬಂದಿವೆ ಎಂದು ಪರಮೇಶ್ವರ್ ತಿಳಿಸಿದರು.

ಈ ಸಂದರ್ಭದಲ್ಲಿ ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ ನಿರ್ದೇಶಕಿ ಮರಿಯಾ, ಉಪನಿರ್ದೇಶಕಿ ಸುನೀತಾ, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X