Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಧುಕರ್ ಶೆಟ್ಟಿ ಕಟ್ಟಿದ ಸೈನ್ಯದಿಂದ...

ಮಧುಕರ್ ಶೆಟ್ಟಿ ಕಟ್ಟಿದ ಸೈನ್ಯದಿಂದ ಇಲಾಖೆಯಲ್ಲಿ ಪರಿಣಾಮಕಾರಿ ಕೆಲಸ: ಐಜಿಪಿ ಅರುಣ್ ಚಕ್ರವರ್ತಿ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ನುಡಿ ಗೌರವ

ವಾರ್ತಾಭಾರತಿವಾರ್ತಾಭಾರತಿ11 Jan 2019 9:42 PM IST
share
ಮಧುಕರ್ ಶೆಟ್ಟಿ ಕಟ್ಟಿದ ಸೈನ್ಯದಿಂದ ಇಲಾಖೆಯಲ್ಲಿ ಪರಿಣಾಮಕಾರಿ ಕೆಲಸ: ಐಜಿಪಿ ಅರುಣ್ ಚಕ್ರವರ್ತಿ

ಉಡುಪಿ, ಜ.11: ಪ್ರಾಮಾಣಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ಧ ಮಧುಕರ್ ಶೆಟ್ಟಿ ಒಬ್ಬ ವ್ಯಕ್ತಿಯಾಗಿರದೆ ಅದ್ಭುತ ಆಗಿದ್ದರು. ಅವರು ಈಗಾಗಲೇ ಸೃಷ್ಠಿಸಿದ ತನ್ನದೇ ಆದ ಸೈನ್ಯವು ಅವರ ಹಾಗೆಯೇ ಸದ್ದಿಲ್ಲದೆ ಹಾಗೂ ಪರಿಣಾಮಕಾರಿಯಾಗಿ ಸಮಾಜ ಮತ್ತು ಇಲಾಖೆಯಲ್ಲಿ ಕೆಲಸ ಮಾಡುತ್ತಿದೆ ಎಂದು ಮಂಗಳೂರು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಶುಕ್ರವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾದ ಐಪಿಎಸ್ ಅಧಿಕಾರಿ ದಿವಂಗತ ಮಧುಕರ್ ಶೆಟ್ಟಿಗೆ ನುಡಿ ಗೌರವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಧುಕರ್ ಶೆಟ್ಟಿ ಭ್ರಷ್ಟಾಚಾರವನ್ನು ಒಂದು ಕಾಯಿಲೆಯಾಗಿ ನೋಡದೆ ಮಾನವೀಯ ದೃಷ್ಠಿಕೋನದಲ್ಲಿ ಕಂಡ ಏಕೈಕ ಹಾಗೂ ಪ್ರಥಮ ಅಧಿಕಾರಿಯಾಗಿದ್ದಾರೆ. ಲೋಕಾಯುಕ್ತದಲ್ಲಿ ಕೆಲಸ ಮಾಡುವುದು ಅಷ್ಟು ಸುಲಭ ಅಲ್ಲ. ಅದು ಬಹಳ ಸವಾಲಿನ ಕೆಲಸ ಆಗಿದೆ. ಅದಕ್ಕೆ ಪ್ರತಿದಿನ ತಪಸ್ಸು ಮಾಡಬೇಕು. ಆದುದರಿಂದ ಅವರು ದೊಡ್ಡ ತಪಸ್ವಿ ಅಧಿಕಾರಿಯಾಗಿದ್ದರು ಎಂದರು.

ಮಧುಕರ್ ಶೆಟ್ಟಿ ಎಲ್ಲರ ಸ್ನೇಹ ಬಯಸದೆ, ತನಗೆ ಬೇಕಾದ ಬಡವರು, ದೀನದಲಿತರನ್ನು ಹುಡುಕಿಕೊಂಡು ಹೋಗಿ ಅವರ ಸ್ನೇಹ ಬೆಳೆಸಿ ಅವರೊಂದಿಗೆ ಚರ್ಚಿಸಿ ಪ್ರಸ್ತುತ ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದರು. ಅವರ ಈ ವಿಚಾರ ಧಾರೆಯಿಂದಲೇ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು ಎಂದು ಐಜಿಪಿ ಹೇಳಿದರು.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಾತನಾಡಿ, ಓರ್ವ ಪೊಲೀಸ್ ಅಧಿಕಾರಿ ದಕ್ಷ, ಪ್ರಾಮಾಣಿಕನಾಗುವುದು ಬಹಳ ಕಷ್ಟದ ಕೆಲಸ. ಇಂದು ಯಾರು ದಕ್ಷ ಅಧಿಕಾರಿಗಳೆಂದು ಗುರುತಿಸಿ ಕೊಂಡಿದ್ದಾರೋ ಅವರೆಲ್ಲರೂ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದ ಇತಿಹಾಸದಲ್ಲಿ ಮರಣೋತ್ತರವಾಗಿ ಓರ್ವ ಅಧಿಕಾರಿಯನ್ನು ಗೌರವಿಸುತ್ತಿರುವುದು ಇದೇ ಪ್ರಥಮ. ಒಳ್ಳೆಯತನ, ದಕ್ಷತೆ ಹಾಗೂ ಪ್ರಾಮಾಣಿಕತೆಯನ್ನು ಗುರುತಿಸುವುದು ದೊಡ್ಡದು. ಪ್ರತಿಯೊಂದನ್ನು ಜಾತಿ, ಧರ್ಮದ ಕನ್ನಡಕ ಹಾಕಿಕೊಂಡು ನೋಡಬಾರದು. ಮಧುಕರ್ ಶೆಟ್ಟಿ ಈ ದೇಶದ ಸೊತ್ತು. ನೂರಾರು ಸಂಖ್ಯೆಯ ಮಧುಕರ್ ಶೆಟ್ಟಿ ಹುಟ್ಟಿಬರಬೇಕು ಎಂದು ತಿಳಿಸಿದರು.

ಉಡುಪಿ ರಥಬೀದಿ ಗೆಳೆಯರು ಅಧ್ಯಕ್ಷ ಮುರಳೀಧರ ಉಪಾಧ್ಯ ಮಾತನಾಡಿ, ಮಧುಕರ್ ಶೆಟ್ಟಿಯಂತಹ ಅಧಿಕಾರಿಗಳ ಆದರ್ಶಗಳನ್ನು ದಾಖಲೀಕರಣ ಮಾಡಬೇಕು. ಅವರ ಹೆಸರಿನಲ್ಲಿ ಕನ್ನಡದಲ್ಲಿ ಐಪಿಎಸ್ ಬರೆಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಬೇಕು ಎಂದರು.

ನಿವೃತ್ತ ಹೆಡ್‌ಕಾನ್ಸ್‌ಸ್ಟೇಬಲ್ ದಯಾನಂದ, ಉಡುಪಿ ಶೋಕಮಾತಾ ಇಗರ್ಜಿಯ ಧರ್ಮಗುರು ಫಾ.ವಲೇರಿಯನ್ ಮೆಂಡೋನ್ಸಾ, ಉಡುಪಿ ಬಂಟರ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಅಬೂಬಕರ್ ಸಿದ್ಧೀಕ್ ಮಸೀದಿಯ ಖತೀಬ್ ಮೌಲಾನ ಇಮ್ರಾನುಲ್ಲಾ ಖಾನ್ ಮನ್ಸೂರಿ, ಉದ್ಯಮಿ ಮನೋಹರ್ ಶೆಟ್ಟಿ ನುಡಿನಮನ ಸಲ್ಲಿಸಿದರು.

ಒಕ್ಕೂಟದ ಹಿರಿಯ ಉಪಾಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಎಂ.ಎ.ಮೌಲಾ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕ ಇಸ್ಮಾಯಿಲ್ ಹುಸೈನ್ ವಂದಿಸಿದರು. ಅಬ್ದುಲ್ ಅಝೀಝ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

ಹುದ್ದೆಗಳನ್ನು ಅವರೇ ಆರಿಸಿದರು
ಮಧುಕರ್ ಶೆಟ್ಟಿಗೆ ಬೇಕಾದ ಹುದ್ದೆ, ನ್ಯಾಯ ಸಿಕ್ಕಿಲ್ಲ ಎಂಬುದಕ್ಕಿಂತ ಅವರಾಗಿಯೇ ತನ್ನ ತತ್ವ, ಸಿದ್ಧಾಂತಕ್ಕೆ ಸರಿಹೊಂದುವ ಹುದ್ದೆಯನ್ನು ಹುಡುಕಿಕೊಂಡು ಹೋಗಿ ಆಯ್ಕೆ ಮಾಡಿಕೊಂಡರು. ಅದರಲ್ಲಿ ಪ್ರಥಮವಾಗಿ ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಸುವ ವಿಶೇಷ ಕಾರ್ಯ ಪಡೆ ಹಾಗೂ ಎರಡನೆ ಹುದ್ದೆ ನಕ್ಸಲ್ ನಿಗ್ರಹ ಪಡೆ. ಈ ಎರಡು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ ಪರಿಣಾಮ ಅವರು ಲೋಕಾಯುಕ್ತಕ್ಕೆ ಆಯ್ಕೆಯಾದರು ಎಂದು ಐಜಿಪಿ ಅರುಣ್ ಚಕ್ರವರ್ತಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X