Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ಮೂರು ದಿನಗಳ ಹೆಲಿಟೂರಿಸಂಗೆ...

ಉಡುಪಿಯಲ್ಲಿ ಮೂರು ದಿನಗಳ ಹೆಲಿಟೂರಿಸಂಗೆ ಚಾಲನೆ

ಕರ್ನಾಟಕ ಕರಾವಳಿಯಲ್ಲಿ ಹೆಲಿಟೂರಿಸಂಗೆ ಒತ್ತು: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ11 Jan 2019 10:02 PM IST
share
ಉಡುಪಿಯಲ್ಲಿ ಮೂರು ದಿನಗಳ ಹೆಲಿಟೂರಿಸಂಗೆ ಚಾಲನೆ

ಉಡುಪಿ, ಜ.11: ಪ್ರಕೃತಿ ಸೌಂದರ್ಯಕ್ಕೆ ಹೆಸರಾದ, ಅನೇಕ ಸುಂದರ ರಮಣೀಯ ಸ್ಥಳಗಳನ್ನು ಹೊಂದಿರುವ, ವಿಶಾಲ ಕಡಲು, ಸುಂದರ ಬೀಚ್‌ಗಳನ್ನು ಹೊಂದಿರುವ ಕರ್ನಾಟಕದ ಕರಾವಳಿಯ ಮೂರು ಜಿಲ್ಲೆಗಳನ್ನು ಕೇಂದ್ರೀಕರಿಸಿದಂತೆ ಹೆಲಿಟೂರಿಸಂ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು, ಇದಕ್ಕಾಗಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ರೊಂದಿಗೆ ಚರ್ಚಿಸುವುದಾಗಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ನಗರದ ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಜಿಲ್ಲಾಡಳಿತದ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಲಾದ ಹೆಲಿಟೂರಿಸಂಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಮೂರು ಜಿಲ್ಲೆಗಳನ್ನು ಕೇಂದ್ರೀಕರಿಸಿದಂತೆ ಹಾಗೂ ಉಡುಪಿ ಜಿಲ್ಲೆಯೊಳಗೆ ಹೆಲಿಟೂರಿಸಂ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಇದನ್ನು ಶೀಘ್ರವೇ ಉಡುಪಿ ಜಿಲ್ಲೆಗೆ ಆಗಮಿಸುವ ಸಚಿವ ಮಹೇಶ್‌ರ ಗಮನಕ್ಕೆ ತಂದು, ಮುಖ್ಯವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ದಿಗೆ ಬೇಕಾದ ಕ್ರಮ ಕೈಗೊಳ್ಳುವುದಾಗಿ ರಘುಪತಿ ಭಟ್ ತಿಳಿಸಿದರು.

ಉಡುಪಿ ಹೆಲಿಟೂರಿಸಂನ ಆಯೋಜಕ ಸುದೇಶ್ ಶೆಟ್ಟಿ ಮಾತನಾಡಿ, 2016ರಲ್ಲಿ ಪ್ರಾರಂಭಗೊಂಡು ಇದೀಗ ಉಡುಪಿಯಲ್ಲಿ ನಾಲ್ಕನೇ ಬಾರಿಗೆ ಹೆಲಿಟೂರಿಸಂನ್ನು ಆಯೋಜಿಸಲಾಗುತ್ತಿದೆ. ಈ ಬಾರಿ ಜ.11,12 ಮತ್ತು 13 ರಂದು ಇದು ನಡೆಯಲಿದೆ. ಬೆಂಗಳೂರು ಮೂಲದ ಚಿಪ್ಸನ್ ಏವಿಯೇಷನ್‌ನ ಹೆಲಿಕಾಪ್ಟರ್ ಪ್ರತಿದಿನ 30ರಿಂದ 35 ಹಾರಾಟ ನಡೆಸಲಿದೆ ಎಂದರು.

ಹಾರಾಟದಲ್ಲಿ ಮೂರು ವಿಭಾಗಗಳಿದ್ದು, 8 ನಿಮಿಷದ ಸಾಮಾನ್ಯ ಹಾರಾಟ, 10 ನಿಮಿಷಗಳ ಅಡ್ವೆಂಚರ್ ಹಾರಾಟ ಮತ್ತು 13 ನಿಮಿಷಗಳ ದೀರ್ಘ ಹಾರಾಟದ ಪ್ಯಾಕೇಜ್‌ಗಳಿದ್ದು, ಇವುಗಳಿಗೆ ಕ್ರಮವಾಗಿ 2,500ರೂ., 3,000ರೂ. ಹಾಗೂ 3,500ರೂ. ಶುಲ್ಕ ವಿಧಿಸಲಾಗುತ್ತದೆ. 2ವರ್ಷದ ಕೆಳಗಿನ ಮಗುವಿಗೆ ಶುಲ್ಕವಿರುವುದಿಲ್ಲ. ಒಂದು ಹಾರಾಟದಲ್ಲಿ ಆರು ಮಂದಿಗೆ ಅವಕಾಶಗಳಿವೆ ಎಂದರು.

ಶನಿವಾರ ಮತ್ತು ರವಿವಾರಗಳ ಹಾರಾಟಕ್ಕೆ ಈಗಾಗಲೇ ಮುಂಗಡ ಬುಕ್ಕಿಂಗ್ ಆಗಿದೆ. ಆಸಕ್ತರು ದೂರವಾಣಿ ಸಂಖ್ಯೆ: 9741248716, 9741249328ನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬಹುದು. ಅಲ್ಲದೇ ಆದಿಉಡುಪಿ ಹೆಲಿಪ್ಯಾಡ್ ಬಳಿ ಸ್ಥಳದಲ್ಲೇ ಬುಕ್ಕಿಂಗ್‌ಗೂ ಅವಕಾಶವಿದೆ. ಕೋಟೇಶ್ವರದ ಯುವ ಮೆರಿಡಿಯನ್‌ನಲ್ಲಿ ಜ.4ರಿಂದ 6ರವರೆಗೆ ನಡೆದ ಹೆಲಿಟೂರಿಸಂ ಅತ್ಯಂತ ಯಶಸ್ವಿಯಾಗಿದೆ. ಉಡುಪಿಯಲ್ಲೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸುದೇಶ್ ಶೆಟ್ಟಿ ತಿಳಿಸಿದರು.

ಬೆಂಗಳೂರಿನ ಚಿಪ್ಸನ್ ಏವಿಯೇಷನ್ ಸಂಸ್ಥೆಯ ಪೈಲೆಟ್ ರಮೇಶ್ ಭೂಮಿನಾಥನ್ ಮಾತನಾಡಿ, ಸಾರ್ವಜನಿಕರು ಹೆಲಿಕಾಪ್ಟರ್ ಹಾರಾಟದ ರೋಚಕ ಅನುವವನ್ನು ಪಡೆದುಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಮೀನುಗಾರಿಕಾ ಪೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X