Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ಓಪನ್: ಪ್ರಧಾನ ಸುತ್ತಿಗೆ...

ಆಸ್ಟ್ರೇಲಿಯ ಓಪನ್: ಪ್ರಧಾನ ಸುತ್ತಿಗೆ ಪ್ರಜ್ಞೇಶ್

ಈ ಸಾಧನೆ ಮಾಡಿದ ಭಾರತದ 3ನೇ ಟೆನಿಸ್ಪಟು

ವಾರ್ತಾಭಾರತಿವಾರ್ತಾಭಾರತಿ11 Jan 2019 11:41 PM IST
share
ಆಸ್ಟ್ರೇಲಿಯ ಓಪನ್: ಪ್ರಧಾನ ಸುತ್ತಿಗೆ ಪ್ರಜ್ಞೇಶ್

ಮೆಲ್ಬೋರ್ನ್, ಜ.11: ಜಪಾನ್‌ನ ಯೊಸುಕೆ ವಾಟನಕಿ ಅವರ ಸವಾಲನ್ನು ಮೆಟ್ಟಿನಿಂತು 6-7(5), 6-4, 6-4 ಸೆಟ್‌ಗಳಿಂದ ಜಯ ಸಾಧಿಸಿದ ಭಾರತದ ಪ್ರಜ್ಞೇಶ್ ಗುಣೇಶ್ವರನ್ ಆಸ್ಟ್ರೇಲಿಯ ಓಪನ್ ಟೆನಿಸ್ ಟೂರ್ನಿಯ ಪ್ರಧಾನ ಸುತ್ತಿಗೆ ಚೊಚ್ಚಲ ಪ್ರವೇಶ ಮಾಡಿದ್ದಾರೆ.

ಸೋಮದೇವ್ ದೇವವರ್ಮನ್ ಹಾಗೂ ಯೂಕಿ ಭಾಂಬ್ರಿ ನಂತರ 5 ವರ್ಷಗಳಲ್ಲಿ ಗ್ರಾನ್‌ಸ್ಲಾಮ್‌ವೊಂದರ ಪ್ರಧಾನ ಸುತ್ತಿಗೆ ಪ್ರವೇಶ ಪಡೆದ ಮೂರನೇ ಭಾರತೀಯ ಆಟಗಾರನಾಗಿದ್ದಾರೆ ಪ್ರಜ್ಞೇಶ್. 2018ರಲ್ಲಿ ಎಲ್ಲ ನಾಲ್ಕೂ ಗ್ರಾನ್‌ಸ್ಲಾಮ್‌ಗಳಲ್ಲಿ ಭಾಗವಹಿಸಿದ್ದ ಯೂಕಿ, ಮೊಣಕಾಲು ನೋವಿನ ಕಾರಣ ಋತುವನ್ನು ಅರ್ಧದಲ್ಲೇ ಮುಗಿಸಿದ್ದರು. 2013ರಲ್ಲಿ ಯುಎಸ್ ಓಪನ್‌ನಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದ ಸೋಮ್‌ದೇವ್ ಸದ್ಯ ನಿವೃತ್ತರಾಗಿದ್ದಾರೆ. ‘‘ನಾನು ಗ್ರಾನ್‌ಸ್ಲಾಮ್‌ವೊಂದರ ಪ್ರಧಾನ ಸುತ್ತಿಗೆ ಪ್ರವೇಶಿಸುವ ಕನಸು ಕಂಡಿದ್ದೆ. ಕನಸು ನನಸಾಗಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ವರ್ಣಿಸಲು ಪದಗಳೇ ಸಾಲುತ್ತಿಲ್ಲ. ಈ ಸಾಧನೆ ಮಾಡಲು ನಾನು ಪಟ್ಟ ಶ್ರಮದ ಬಗ್ಗೆ ಹೆಮ್ಮೆ ಇದೆ. ಸಾಧನೆ ತುಂಬಾ ತಡವಾಗಿ ಬಂದಿದೆ. ಸದ್ಯಕ್ಕೆ ವಿರಾಮ ತೆಗೆದುಕೊಂಡು ಪ್ರಧಾನ ಸುತ್ತಿನ ಪಂದ್ಯಗಳಿಗೆ ಸಿದ್ಧನಾಗುವೆ’’ ಎಂದು ಪಂದ್ಯದ ನಂತರ ಪ್ರಜ್ಞೇಶ್ ಹೇಳಿದರು. ಮೂರು ಅರ್ಹತಾ ಸುತ್ತುಗಳಲ್ಲಿ ಜಯಿಸಿದ ಹಿನ್ನೆಲೆಯಲ್ಲಿ ಪ್ರಜ್ಞೇಶ್‌ಗೆ ಈಗಾಗಲೇ 20 ಲಕ್ಷ ರೂ. ಕೈ ಸೇರಿದ್ದು, ಪ್ರಧಾನ ಸುತ್ತಿಗೆ ಪ್ರವೇಶ ಪಡೆದ ಬಹುಮಾನ ಮೊತ್ತವಾಗಿ ಇನ್ನೂ 38 ಲಕ್ಷ ರೂ. ಬರಲಿದೆ. ಇದು 2019ರಲ್ಲಿ ಅವರು ಆಡುವ ಟೂರ್ನಿಗಳ ಪ್ರಮುಖ ಖರ್ಚು , ವೆಚ್ಚ ನಿಭಾಯಿಸಲು ಅನುಕೂಲವಾಗುತ್ತದೆ.

ಆಸ್ಟ್ರೇಲಿಯ ಓಪನ್ ಪ್ರಧಾನ ಸುತ್ತಿನಲ್ಲಿ ಪ್ರಜ್ಞೇಶ್ ತಮ್ಮ ಮೊದಲ ಪಂದ್ಯದಲ್ಲಿ ವಿಶ್ವ ನಂ.39 ಅಮೆರಿಕದ ಫ್ರಾನ್ಸೆಸ್ ತೈಫೊಯ್‌ರನ್ನು ಎದುರಿಸಲಿದ್ದು, ಇಲ್ಲಿ ಯಶಸ್ಸು ಸಾಧಿಸಿದರೆ 5ನೇ ಶ್ರೇಯಾಂಕದ, ವಿಂಬಲ್ಡನ್ ಫೈನಲಿಸ್ಟ್ ಕೆವಿನ್ ಆ್ಯಂಡರ್ಸನ್‌ರನ್ನು ಎದುರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X