Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ: 20 ದಿನಗಳ ಬಳಿಕ ಸಮುದ್ರಕ್ಕೆ...

ಮಲ್ಪೆ: 20 ದಿನಗಳ ಬಳಿಕ ಸಮುದ್ರಕ್ಕೆ ಇಳಿದ ಮೀನುಗಾರಿಕಾ ಬೋಟುಗಳು

ವಾರ್ತಾಭಾರತಿವಾರ್ತಾಭಾರತಿ12 Jan 2019 8:57 PM IST
share
ಮಲ್ಪೆ: 20 ದಿನಗಳ ಬಳಿಕ ಸಮುದ್ರಕ್ಕೆ ಇಳಿದ ಮೀನುಗಾರಿಕಾ ಬೋಟುಗಳು

ಮಲ್ಪೆ, ಜ.12: ಬೋಟು ಸಹಿತ ಏಳು ಮಂದಿ ಮೀನುಗಾರರು ನಾಪತ್ತೆ ಯಾಗಿರುವ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಮೀನುಗಾರಿಕೆ ಸ್ಥಗಿತಗೊಳಿಸಿ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಆಳಸಮುದ್ರ ಮೀನುಗಾರಿಕಾ ಬೋಟು ಗಳ ಪೈಕಿ ಸುಮಾರು 150 ಬೋಟುಗಳು ಇಂದು ರಾತ್ರಿಯಿಂದ ಸಮುದ್ರಕ್ಕೆ ಇಳಿದಿದ್ದು, ನಾಪತ್ತೆಯಾಗಿರುವ ಬೋಟು ಹಾಗೂ ಮೀನುಗಾರರನ್ನು ಹುಡು ಕುವ ಕೆಲಸ ಮಾಡಲಿವೆ.

ಡಿ.15ರಿಂದ ಏಳು ಮಂದಿ ಮೀನುಗಾರರ ಸಹಿತ ಸುವರ್ಣ ತ್ರಿಭುಜ ಬೋಟು ಸಂಪರ್ಕ ಸಿಗದೆ ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಡಿ.23ರಿಂದ ಮಲ್ಪೆಗೆ ಆಗಮಿಸಿದ್ದ ಬೋಟುಗಳು ಮರಳಿ ಮೀನುಗಾರಿಕೆಗೆ ತೆರಳದೆ ಬಂದರಿ ನಲ್ಲೇ ಲಂಗರು ಹಾಕಿದ್ದವು. ಅಂದಿನಿಂದ ಸುಮಾರು 1100 ಆಳಸಮುದ್ರ ಮೀನು ಗಾರಿಕಾ ಬೋಟುಗಳು ಮಲ್ಪೆ ಬಂದರಿನಲ್ಲೇ ಉಳಿದು ಕೊಂಡಿದ್ದವು.

ಜ.6ರ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟದ ಬಳಿಕ ಮರುದಿನ ಅಂದರೆ ಜ.7ರಂದು ಬೋಟುಗಳು ಮೀನುಗಾರಿಕೆ ಹೊರಡುವ ಬಗ್ಗೆ ಮೀನುಗಾರ ಮುಖಂಡರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಭಟ್ಕಳ, ಬೈಂದೂರು, ಕಾರವಾರದ ಮೀನುಗಾರ ಕಾರ್ಮಿಕರು ಮೀನುಗಾರಿಕೆಗೆ ತೆರಳಲು ಹಿಂದೇಟು ಹಾಕಿದ ಪರಿಣಾಮ ಯಾವುದೇ ಬೋಟುಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಕೇವಲ ತಮಿಳುನಾಡು ಕಾರ್ಮಿಕರನ್ನೊಳಗೊಂಡ ಬೋಟುಗಳು ವಾತ್ರ ಮೀನುಗಾರಿಕೆ ನಡೆಸುತ್ತಿತ್ತು.

ಇದೀಗ ಭಟ್ಕಳ, ಬೈಂದೂರು, ಹೊನ್ನಾವರ, ಕಾರವಾರದ ಮೀನುಗಾರ ಕಾರ್ಮಿಕರು ಮಲ್ಪೆಗೆ ಆಗಮಿಸಿದ್ದು, ಮೀನುಗಾರಿಕೆಗೆ ಹೊರಡಲು ಸಿದ್ಧರಾಗಿ ದ್ದಾರೆ. ಹಾಗೆ ಇಂದು ರಾತ್ರಿಯಿಂದ ಸುಮಾರು 150 ಬೋಟುಗಳು ಮೀನು ಗಾರಿಕೆಗೆ ಹೊರಡಲಿದ್ದು, ಎರಡು ಮೂರು ದಿನಗಳ ಕಾಲ ನಾಪತ್ತೆಯಾದ ಬೋಟಿಗಾಗಿ ಹುಡುಕಾಟ ನಡೆಸಲಿವೆ. ನಂತರ ಆ ಬೋಟುಗಳು ಮೀನು ಗಾರಿಕೆ ಮುಂದುವರೆಸಲಿವೆ. ಹೀಗೆ ಇಂದಿನಿಂದ ಪ್ರತಿದಿನ ಬೋಟುಗಳು ಸಮುದ್ರಕ್ಕೆ ಇಳಿಯ ಲಿವೆ ಎಂದು ಮಲ್ಪೆ ಮೀನುಗಾರ ಸಂಘದ ಅ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.

ಪ್ರತ್ಯೇಕ ಸಮಿತಿಯಿಂದ ಸಭೆ: ಬೋಟು ಸಹಿತ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ಮೀನುಗಾರರ ವಿವಿಧ ಸಂಘಟನೆಗಳ 25 ಮಂದಿ ಪದಾಧಿಕಾರಿಗಳ ಪ್ರತ್ಯೇಕ ಸಮಿತಿಯ ಸಭೆಯು ಶನಿವಾರ ಮಲ್ಪೆ ಮೀನುಗಾರ ಸಮುದಾಯ ಭವನದಲ್ಲಿ ಜರಗಿತು.

ಪ್ರತಿಭಟನೆಯಲ್ಲಿ ನಾಪತ್ತೆಯಾದವರನ್ನು ವಾರದೊಳಗೆ ಪತ್ತೆ ಹಚ್ಚುವಂತೆ ಗಡುವು ವಿಧಿಸಿದ್ದರೂ ಕಾರ್ಯಾಚರಣೆಯಲ್ಲಿ ಈವರೆಗೆ ಯಾವುದೆ ಪ್ರಗತಿ ಸಾಧಿಸದ ಹಿನ್ನೆಲೆಯಲ್ಲಿ ಮೀನುಗಾರರ ಮುಂದಿನ ಹೋರಾಟದ ನಿಲುವಿನ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮೀನುಗಾರರನ್ನು ಹುಡುಕಲು ಮಹಾರಾಷ್ಟ್ರ ಹಾಗೂ ಕೇರಳಕ್ಕೆ ಹೊರಟ ತಂಡ, ಇಸ್ರೋಗೆ ಮಾಹಿತಿ ನೀಡಿರುವ ಕುರಿತು, ಮಹಾರಾಷ್ಟ್ರ, ಗೋವಾ ಗೃಹ ಸಚಿವರೊಂದಿಗೆ ಸಭೆ ನಡೆಸುವ ಕುರಿತ ರಾಜ್ಯ ಗೃಹ ಸಚಿವ ಭರವಸೆ ಬಗ್ಗೆ ಚರ್ಚಿಸಲಾಯಿತು.

ಅಂತಿಮವಾಗಿ ಗೃಹ ಸಚಿವರೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ತೀರ್ಮಾನಿಸ ಲಾಯಿತು. ಸಭೆಯಲ್ಲಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕಾರ್ಯದರ್ಶಿ ಗೋಪಾಲ ಆರ್.ಕೆ., ಮುಖಂಡರಾದ ನಾಗರಾಜ್ ಸುವರ್ಣ, ಸೋಮನಾಥ್ ಕಾಂಚನ್, ರಮೇಶ್ ಕೊಟ್ಯಾನ್, ರಾಮಚಂದ್ರ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

ಮಲ್ದಿ ದ್ವೀಪದಲ್ಲಿ ವಿಶೇಷ ಪೂಜೆ
ನಾಪತ್ತೆಯಾಗಿರುವ ಮೀನುಗಾರರು ಸುರಕ್ಷಿತವಾಗಿ ಬರುವಂತೆ ಮಲ್ಪೆ ತಾಂಡೇಲರು ಮಲ್ಪೆ ಬಂದರಿನಿಂದ ಸೈಂಟ್ ಮೇರಿಸ್ ದ್ವೀಪದ ಮಧ್ಯಭಾಗದ ಸಮುದ್ರದಲ್ಲಿರುವ ಮಲ್ದಿ ದ್ವೀಪದಲ್ಲಿ ವಿಶೇಷ ಪೂಜೆಯನ್ನು ನಡೆಸಿದರು.

ದ್ವೀಪದಲ್ಲಿರುವ ಪ್ರಾಕೃತಿಕವಾದ ದೇವರ ಗುಡಿಯಲ್ಲಿ ಹತ್ತು ಸಮಸ್ತರ ಸಮ್ಮಖದಲ್ಲಿ ವಿಶೇಷ ಪೂಜೆ ನೆರವೇರಿಸಿ, ನಾಪತ್ತೆಯಾದ ಎಲ್ಲ ಮೀನುಗಾರರು ಶೀಘ್ರವೇ ಸುರಕ್ಷಿತವಾಗಿ ವುನೆ ಸೇರುವಂತೆ ಪ್ರಾರ್ಥಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X