Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿ ವರ್ಷ ಕೊಡಗಿನಲ್ಲಿ ಪ್ರವಾಸಿ ಉತ್ಸವ...

ಪ್ರತಿ ವರ್ಷ ಕೊಡಗಿನಲ್ಲಿ ಪ್ರವಾಸಿ ಉತ್ಸವ ಆಚರಣೆ: ಸಚಿವ ಸಾ.ರಾ.ಮಹೇಶ್ ಭರವಸೆ

ಗಾಂಧಿ ಮೈದಾನದಲ್ಲಿ ವರ್ಣರಂಜಿತ ಉತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 Jan 2019 8:59 PM IST
share
ಪ್ರತಿ ವರ್ಷ ಕೊಡಗಿನಲ್ಲಿ ಪ್ರವಾಸಿ ಉತ್ಸವ ಆಚರಣೆ: ಸಚಿವ ಸಾ.ರಾ.ಮಹೇಶ್ ಭರವಸೆ

ಮಡಿಕೇರಿ, ಜ.12 : ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಗಳಿಸಿರುವ ಕಾವೇರಿ ನಾಡು ಕೊಡಗು ಜಿಲ್ಲೆ ಕಳೆದ ಆಗಸ್ಟ್ ತಿಂಗಳ ಮಹಾಮಳೆಯಿಂದ ನಲುಗಿ ಹೋಗಿತ್ತು. ಮತ್ತೆ ಹಿಂದಿನ ವೈಭವವನ್ನು ಮರಳಿ ತರಬೇಕೆನ್ನುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ಹೆಚ್ಚಿನ ಕಾಳಜಿ ವಹಿಸಿ ಕೊಡಗು ಪ್ರವಾಸಿ ಉತ್ಸವವನ್ನು ಆಯೋಜಿಸುವ ಮೂಲಕ ಪ್ರವಾಸಿಗರ ಗಮನ ಸೆಳೆದಿದ್ದಾರೆ. 

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ ಹಾಗೂ ವಿವಿಧ ಇಲಾಖೆಗಳಲ್ಲಿ ಸಹಯೋಗದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಪ್ರವಾಸಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಸಾ.ರಾ.ಮಹೇಶ್ ಪ್ರತಿ ವರ್ಷ ಕೊಡಗಿನಲ್ಲಿ ಪ್ರವಾಸಿ ಉತ್ಸವ ನಡೆಸುವ ಭರವಸೆ ನೀಡಿದರು. ಅತಿವೃಷ್ಟಿಯಿಂದ ಕಂಗೆಟ್ಟಿರುವ ಪ್ರವಾಸೋದ್ಯಮಕ್ಕೆ ಮರುಜೀವ ನೀಡುವ ಮೂಲಕ ಯುವ ಸಮೂಹ ಹಾಗೂ ವರ್ತಕರ ಆರ್ಥಿಕ ಸ್ಥಿತಿಯನ್ನು ಉತ್ತೇಜಿಸುವ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದರು.

ಗಮನ ಸೆಳೆದ ಸಂಗೀತ ಸುಧೆ
ಗಾಂಧಿ ಮೈದಾನದ ವರ್ಣರಂಜಿತ ವೇದಿಕೆಯಲ್ಲಿ ಚುಮು ಚುಮು ಚಳಿಯ ನಡುವೆ ನಡೆದ ವರ್ಣರಂಜಿತ ವಿಭಿನ್ನ ಕಾರ್ಯಕ್ರಮಗಳು ಸಾವಿರಾರು ಪ್ರವಾಸಿಗರ ಹೃದಯ ಗೆದ್ದಿತು. ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ ಮತ್ತು ತಂಡದವರ ಸಂಗೀತಸುಧೆಗೆ ಸಭಿಕರು ಭೇಷ್ ಎಂದರು. ಕೊಡಗು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸರಿಗಮಪ ಲಿಟಲ್ ಚಾಂಪ್ಸ್ ಮಕ್ಕಳಾದ ಅಭಿನವ್, ಸುಪ್ರಿಯಾ ಜೋಷಿ, ಆಧ್ಯ, ಜ್ಞಾನೇಶ್, ಕೀರ್ತನಾ, ಪುಟ್ಟರಾಜು ಹೂಗಾರ್ ಇವರಿಂದ ಸಂಗೀತ ಸಂಜೆ ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ಮಕ್ಕಳಿಂದ ನೃತ್ಯ ವೈಭವ ಕಲಾಪ್ರೇಮಿಗಳ ಗಮನ ಸೆಳೆಯಿತು. ವರ್ಣ ರಂಜಿತ ವಿದ್ಯುತ್ ಅಲಂಕೃತ ವೇದಿಕೆಯ ಆಕರ್ಷಣೆ ಮತ್ತು ಬಣ್ಣ ಬಣ್ಣದ ಸಿಡಿಮದ್ದು ಪ್ರದರ್ಶನ ಮಕ್ಕಳ ಮನಗೆದ್ದಿತು.  

ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ಕಾರ್ಯಕ್ರಮ ಮುಗಿಯುವವರೆಗೂ ಸಭಿಕರೊಂದಿಗಿದ್ದು ಗಮನ ಸೆಳೆದರು. 

ಜ.13ರ ಕಾರ್ಯಕ್ರಮ
ಜ.13 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ವರೆಗೆ ನಗರದ ರಾಜಾಸೀಟು ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್ ಜರುಗಲಿದೆ.  ಸಂಜೆ 5.30 ರಿಂದ 6.30 ರವರೆಗೆ ಅರೆಭಾಷೆ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6.30 ರಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ಸಂಗೀತ ರಸ ಸಂಜೆ (ವ್ಯಾಸರಾಜ್, ಅನುರಾಧ ಭಟ್, ಇಂದು ನಾಗರಾಜ್, ಲಕ್ಷ್ಮೀ ನಾಗರಾಜ್, ಸಂಜಿತ್ ಹೆಗ್ಡೆ, ಶ್ರೀನಿವಾಸ್), ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X