ಬೆಂಗಳೂರು, ಜ.12: ಮನೆಗಳನ್ನೆ ಗುರಿಯಾಗಿಸಿಕೊಂಡು ರಾತ್ರಿವೇಳೆ ಕಳವು ಮಾಡಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆನಂದ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನಿಂದ 480 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.