Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠಾಣ್‌ಕೋಟ್, ಉರಿ, ಅಮರನಾಥದ ದಾಳಿಗಳು...

ಪಠಾಣ್‌ಕೋಟ್, ಉರಿ, ಅಮರನಾಥದ ದಾಳಿಗಳು ಏನು: ಕಾಂಗ್ರೆಸ್ ಪ್ರಶ್ನೆ

2014ರಿಂದೀಚೆಗೆ ದೇಶದಲ್ಲಿ ಉಗ್ರ ದಾಳಿ ನಡೆದಿಲ್ಲ ಎಂದ ರಕ್ಷಣಾ ಸಚಿವೆ

ವಾರ್ತಾಭಾರತಿವಾರ್ತಾಭಾರತಿ12 Jan 2019 10:20 PM IST
share
ಪಠಾಣ್‌ಕೋಟ್, ಉರಿ, ಅಮರನಾಥದ  ದಾಳಿಗಳು ಏನು: ಕಾಂಗ್ರೆಸ್ ಪ್ರಶ್ನೆ

ಹೊಸದಿಲ್ಲಿ,ಜ.12: 2014ರಿಂದೀಚೆಗೆ ದೇಶದಲ್ಲಿ ಯಾವುದೇ ದೊಡ್ಡ ಪ್ರಮಾಣದಲ್ಲಿ ಉಗ್ರರ ದಾಳಿ ನಡೆದಿಲ್ಲ ಎಂಬ ಹೇಳಿಕೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಹಾಗಾದರೆ ಪಠಾಣ್‌ಕೋಟ್ ಮತ್ತು ಉರಿಯಲ್ಲಿ ನಡೆದಿದ್ದು ಏನು ಎಂದು ಪ್ರಶ್ನಿಸಿದೆ.

ಸೀತಾರಾಮನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಅಹ್ಮದ್ ಪಟೇಲ್, 2014ರ ನಂತರ ದೇಶದಲ್ಲಿ ಉಗ್ರರ ದಾಳಿ ನಡೆದಿಲ್ಲ ಎಂಬ ರಕ್ಷಣಾ ಸಚಿವೆಯ ಹೇಳಿಕೆಯಿಂದ ಆಶ್ಚರ್ಯವಾಗಿದೆ. ಕಳೆದ 55 ತಿಂಗಳಲ್ಲಿ ಪಠಾಣ್‌ಕೋಟ್, ಉರಿ, ಅಮರನಾಥ ಹಾಗೂ ಇತರ ಕಡೆಗಳಲ್ಲಿ ನಡೆದ ಉಗ್ರರ ದಾಳಿಯಲ್ಲಿ 400 ಯೋಧರು ಹುತಾತ್ಮರಾಗಿದ್ದಾರೆ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಸೀತಾರಾಮನ್, ಉಗ್ರರು ಭಾರತದ ಶಾಂತಿಯನ್ನು ಕದಡಲು ಉಗ್ರರಿಗೆ ಯಾವುದೇ ಅವಕಾಶ ದೊರೆಯದಂತೆ ಪ್ರಧಾನಿ ಮೋದಿ ನೋಡಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ, ಮೋದಿ ಉದ್ದೇಶಪೂರ್ವಕವಾಗಿ ದೇಶದ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಕಳೆದ 55 ತಿಂಗಳಲ್ಲಿ ಉಗ್ರರ ದಾಳಿ ನಡೆದಿಲ್ಲವಾದರೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವೇನಿತ್ತು. ಪಠಾಣ್‌ಕೋಟ್ ಮತ್ತು ಉರಿಯಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಏನು ಹೇಳುವಿರಿ? ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪರಿಸ್ಥಿತಿಗೆ ಕಾರಣ ಯಾರು ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X