Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪ್ರಸಿದ್ಧ ನಿರ್ದೇಶಕ ರಾಜ್ ಕುಮಾರ್...

ಪ್ರಸಿದ್ಧ ನಿರ್ದೇಶಕ ರಾಜ್ ಕುಮಾರ್ ಹಿರಾನಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Jan 2019 4:36 PM IST
share
ಪ್ರಸಿದ್ಧ ನಿರ್ದೇಶಕ ರಾಜ್ ಕುಮಾರ್ ಹಿರಾನಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮುಂಬೈ, ಜ.13: ಮುನ್ನಾಭಾಯಿ ಎಂಬಿಬಿಎಸ್, 3 ಈಡಿಯೆಟ್ಸ್, ಪಿಕೆ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿಯವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ಸಂಜು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಸಂದರ್ಭ ಹಿರಾನಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. 2018ರ ಜೂನ್ 29ರಂದು ಸಂಜು ಚಿತ್ರ ಬಿಡುಗಡೆಯಾಗಿತ್ತು.

ಈ ಆರೋಪಗಳನ್ನು ಹಿರಾನಿ ನಿರಾಕರಿಸಿದ್ದಾರೆ. ತನ್ನ ವಿರುದ್ಧದ ಆರೋಪಗಳು ಸುಳ್ಳು ಹಾಗು ಹೆಸರಿಗೆ ಮಸಿ ಬಳಿಯುವಂತಹದ್ದು ಎಂದು ಅವರು ಹೇಳಿದ್ದಾರೆ.

2018,ಮಾರ್ಚ್ ಮತ್ತು ಸೆಪ್ಟೆಂಬರ್ ನಡುವೆ ಒಂದಕ್ಕಿಂತ ಹೆಚ್ಚು ಬಾರಿ ಹಿರಾನಿ ಅವರು ತನ್ನನ್ನು ಲೈಂಗಿಕವಾಗಿ ಶೋಷಿಸಿದ್ದರು ಎಂದು ಸುದ್ದಿ ಜಾಲತಾಣವೊಂದರಲ್ಲಿ ಬರೆದಿರುವ ಲೇಖನದಲ್ಲಿ ಮಹಿಳೆ ಆರೋಪಿಸಿದ್ದಾರೆ. ತಾನು 2018,ನ.3ರಂದು ಹಿರಾನಿಯವರ ದೀರ್ಘಕಾಲದ ಸಹಭಾಗಿ ಮತು ‘ಸಂಜು’ ಚಿತ್ರದ ಸಹನಿರ್ಮಾಪಕ ವಿಧು ವಿನೋದ ಚೋಪ್ರಾ ಅವರಿಗೆ ಕಳುಹಿಸಿದ್ದ ಇ-ಮೇಲ್‌ನಲ್ಲಿಯೂ ಈ ಆರೋಪಗಳನ್ನು ಮಾಡಿದ್ದಾಗಿ ಮಹಿಳೆ ಬರೆದಿದ್ದಾರೆ. ಹಿರಾನಿ ಅವರನ್ನು ತಾನು ತಂದೆಯಂತೆ ಕಾಣುತ್ತಿದ್ದೆ ಎಂದೂ ಅವರು ಹೇಳಿದ್ದಾರೆ.

ಚೋಪ್ರಾರ ಪತ್ನಿ,ಚಿತ್ರ ವಿಮರ್ಶಕಿ ಮತ್ತು ನಿರ್ದೇಶಕಿ ಅನುಪಮಾ,‘ಸಂಜು’ ಚಿತ್ರಕಥಾ ಲೇಖಕ ಅಭಿಜಿತ್ ಜೋಶಿ ಹಾಗೂ ನಿರ್ಮಾಪಕಿ ಮತ್ತು ಚೋಪ್ರಾರ ಸೋದರಿ ಶೆಲ್ಲಿ ಚೋಪ್ರಾ ಅವರಿಗೂ ಮೇಲ್ ಕಳುಹಿಸಿದ್ದೆ ಎಂದಿದ್ದಾರೆ.

ತನ್ನ ತಂದೆ ತೀವ್ರ ಅನಾರೋಗ್ಯದಿಂದ ನರಳುತ್ತಿದ್ದರಿಂದ ತನಗೆ ಉದ್ಯೋಗದ ಅಗತ್ಯವಿತ್ತು,ಹೀಗಾಗಿ ಹಿರಾನಿಯವರ ಕಿರುಕುಳವನ್ನು ಅವುಡುಗಚ್ಚಿ ಸಹಿಸಿಕೊಂಡಿದ್ದೆ. ಅವರಿಗೆ ವಿಧೇಯಳಾಗಿರುವುದು ಬಿಟ್ಟರೆ ತನಗೆ ಬೇರೆ ಆಯ್ಕೆಯಿರಲಿಲ್ಲ. ತಾನು ಮಧ್ಯದಲ್ಲಿಯೇ ಕೆಲಸವನ್ನು ಬಿಟ್ಟರೆ ಮತ್ತು ಹಿರಾನಿ ಪ್ರಭಾವಶಾಲಿಯಾಗಿರುವುದರಿಂದ ಅವರು ತನ್ನ ವಿರುದ್ಧ ಮಾತನಾಡಿದರೆ ತನಗೆ ಚಿತ್ರರಂಗದಲ್ಲಿ ಇನ್ನೊಂದು ಉದ್ಯೋಗ ಕಂಡುಕೊಳ್ಳುವುದು ಅಸಾಧ್ಯವಾಗುತ್ತಿತ್ತು ಎಂದು ಆಕೆ ಲೇಖನದಲ್ಲಿ ಗೋಳು ತೋಡಿಕೊಂಡಿದ್ದ್ದಾರೆ.

ಮಹಿಳೆ ತನ್ನ ಸಂಕಷ್ಟವನ್ನು ತನ್ನ ಬಳಿ ಹಂಚಿಕೊಂಡಿದ್ದನ್ನು ಅನುಪಮಾ ಒಪ್ಪಿಕೊಂಡಿದ್ದಾರೆ. ಲೈಂಗಿಕ ಕಿರುಕುಳದ ದೂರುಗಳನ್ನು ಪರಿಶೀಲಿಸಲು ವಿನೋದ ಚೋಪ್ರಾ ಫಿಲ್ಮ್ಸ್ ಸಮಿತಿಯೊಂದನ್ನು ರಚಿಸಿದೆ. ‘ನಾನು ಮಹಿಳೆಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇನೆ. ನಾವು ಈ ವಿಷಯದಲ್ಲಿ ಮಧ್ಯಸ್ಥಿಕೆದಾರರು ಅಥವಾ ನ್ಯಾಯಾಧೀಶರಾಗಲು ಸಾಧ್ಯವಿಲ್ಲದ್ದರಿಂದ ಕಾನೂನಿನ ಮೊರೆ ಹೋಗುವಂತೆ ನಾವು ಸೂಚಿಸಿದ್ದೇವೆ ’ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X