Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಿಂಗಳಾದರೂ ಪತ್ತೆಯಾಗದ ‘ಸುವರ್ಣ...

ತಿಂಗಳಾದರೂ ಪತ್ತೆಯಾಗದ ‘ಸುವರ್ಣ ತ್ರಿಭುಜ’ ಬೋಟು: ತನಿಖಾ ಪ್ರಗತಿ ಶೂನ್ಯ, ಹೆಚ್ಚಿದ ಆತಂಕ

ವಾರ್ತಾಭಾರತಿವಾರ್ತಾಭಾರತಿ14 Jan 2019 6:09 PM IST
share
ತಿಂಗಳಾದರೂ ಪತ್ತೆಯಾಗದ ‘ಸುವರ್ಣ ತ್ರಿಭುಜ’ ಬೋಟು: ತನಿಖಾ ಪ್ರಗತಿ ಶೂನ್ಯ, ಹೆಚ್ಚಿದ ಆತಂಕ

ಉಡುಪಿ, ಜ.14: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟ ಸುವರ್ಣ ತ್ರಿಭುಜ ಬೋಟು ಸಹಿತ ಏಳು ಮಂದಿ ಮೀನುಗಾರರು ಸಂಪರ್ಕ ಕಡಿದುಕೊಂಡು ನಾಪತ್ತೆಯಾಗಿ ಜ.15ಕ್ಕೆ ಒಂದು ತಿಂಗಳು, ಈವರೆಗೆ ಯಾವುದೇ ಸುಳಿವುಗಳು ಲಭ್ಯವಾಗದಿರುವುದರಿಂದ ಕುಟುಂಬಸ್ಥರು ಹಾಗೂ ಮೀನುಗಾರರ ಆತಂಕ ಹೆಚ್ಚಿಸಿದೆ.

ಡಿ.13ರಂದು ರಾತ್ರಿ 11ಗಂಟೆ ಸುಮಾರಿಗೆ ಮಾಲಕ ಬಡಾನಿಡಿಯೂರು ಗ್ರಾಮದ ಚಂದ್ರಶೇಖರ್ ಕೋಟ್ಯಾನ್ ಸೇರಿದಂತೆ ಏಳು ಮಂದಿ ಮೀನು ಗಾರರನ್ನು ಹೊತ್ತ ಸುವರ್ಣ ತ್ರಿಭುಜ ಬೋಟು ಇತರ ಆರು ಬೋಟುಗಳ ಜೊತೆ ಆಳ ಸಮುದ್ರ ಮೀನುಗಾರಿಕೆ ಹೊರಟಿತ್ತು. ಈ ಏಳು ಬೋಟಿನವರು ಡಿ.15ರವರೆಗೆ ಪರಸ್ಪರ ವಯರ್‌ಲೆಸ್ ಸಂಪರ್ಕದಲ್ಲಿದ್ದರು. ಡಿ.15ರಂದು ರಾತ್ರಿ ಒಂದು ಗಂಟೆಗೆ ಸುವರ್ಣ ತ್ರಿಭುಜ ಬೋಟಿನವರೊಂದಿಗೆ ವುರ್‌ಲೆಸ್ ಸಂಪರ್ಕ ಮಾಡಲಾಗಿತ್ತು.

ನಂತರ ಸಂಪರ್ಕ ಕಡಿತಗೊಂಡ ಸುವರ್ಣ ತ್ರಿಭುಜ ಬೋಟು ಕಣ್ಮರೆಯಾಗಿರುವ ವಿಚಾರ ಡಿ.16ರಂದು ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಇತರ ಬೋಟಿನವರ ಗಮನಕ್ಕೆ ಬಂತು. ಈ ಆರು ಬೋಟಿನವರು ನಾಪತ್ತೆಯಾಗಿರುವ ಬೋಟಿಗಾಗಿ ಹುಡುಕಾಟ ನಡೆಸಿದ್ದಲ್ಲದೇ, ಇತರರಿಂದಲೂ ಮಾಹಿತಿ ಸಂಗ್ರಹಿಸಿದ್ದರು. ಆದರೆ ಎಲ್ಲೂ ಪತ್ತೆಯಾಗದಿದ್ದಾಗ ಡಿ. 22ರಂದು ಮಲ್ಪೆ ಬಂದರಿಗೆ ಈ ಕುರಿತು ಮಾಹಿತಿ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಅದೇ ದಿನ ಬೋಟಿನ ಮಾಲಕ ಚಂದ್ರಶೇಖರ್ ಕೋಟ್ಯಾನ್‌ರ ಸಹೋದರ ನಿತ್ಯಾನಂದ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನಿಂದ ಇಂದಿನವರಿಗೆ ಕೋಸ್ಟಲ್ ಸೆಕ್ಯುರಿಟಿ, ಜಿಲ್ಲಾ ಪೊಲೀಸರು, ಕರಾವಳಿ ಕಾವಲು ಪಡೆ, ನೌಕಾಪಡೆ ನಾಪತ್ತೆಯಾಗಿರುವ ಬೋಟು ಸಹಿತ ಮೀನುಗಾರರಿಗಾಗಿ ಕರ್ನಾಟಕ, ಗೋವಾ, ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಹುಡುಕಾಟ ನಡೆಸುತ್ತಿದ್ದು, ಯಾವುದೇ ಸುಳಿವು ಈವರೆಗೆ ಲಭ್ಯವಾಗಿಲ್ಲ. ಒಂದೆಡೆ ಸರಕಾರ ತನಿಖಾ ತಂಡ, ತಂತ್ರಜ್ಞಾನಗಳನ್ನು ಬಳಸಿ ಹುಡುಕುವ ಕೆಲಸ ಮಾಡಿದರೆ, ಇನ್ನೊಂದೆಡೆ ಮೊಗವೀರರು ತಮ್ಮ ಕುಲದೇವರು, ನಂಬಿದ ದೈವಗಳ ಮೊರೆ ಹೋಗಿ ನಮ್ಮವರು ಶೀಘ್ರವೇ ಸುರಕ್ಷಿತವಾಗಿ ಬರುವಂತೆ ಪ್ರಾರ್ಥಿಸುತ್ತಿದ್ದಾರೆ.

ನಾಪತ್ತೆಯಾಗಿರುವ ಬಡಾನಿಡಿಯೂರು ಗ್ರಾಮದ ಪಾವಂಜಿಗುಡ್ಡೆಯ ಚಂದ್ರಶೇಖರ್ ಕೋಟ್ಯಾನ್ ಹಾಗೂ ದಾಮೋದರ್ ಸಾಲ್ಯಾನ್ ಅವರ ಮನೆ ಯವರು ಈಗಲೂ ಮನೆ ಮಕ್ಕಳನ್ನು ನೆನೆದು ಕಣ್ಣೀರಿಡುತ್ತಿದ್ದಾರೆ. ಚಂದ್ರಶೇಖರ್ ಕೋಟ್ಯಾನ್‌ರ ಪತ್ನಿ ಶ್ಯಾಮಲಾ, ದಾಮೋದರ್ ಸಾಲ್ಯಾನ್‌ರ ತಂದೆ ಸುವರ್ಣ ತಿಂಗಳಾಯ ಹಾಗೂ ತಾಯಿ ಸೀತಾ ಸಾಲ್ಯಾನ್, ಪತ್ನಿ ಮೋಹಿನಿ ಅವರ ಕಣ್ಣೀರೆ ಮಾತಾಗಿದೆ. ಮನೆ ಹಾಗೂ ಪರಿಸರದಲ್ಲಿ ದುಃಖ, ನೀರವ ಮೌನ ಆವರಿಸಿದೆ.

ಈ ಘಟನೆ ನಡೆದ ಬಳಿಕ ಮೀನುಗಾರರು ಆಳ ಸಮುದ್ರ ಮೀನುಗಾರಿಕೆಗೆ ತೆರಳಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಕಳೆದ 20 ದಿನಗಳಿಂದ ಬಂದರಿನಲ್ಲಿ ಲಂಗರು ಹಾಕಿದ್ದ 1100 ಆಳ ಸಮುದ್ರ ಮೀನುಗಾರಿಕಾ ಬೋಟುಗಳ ಪೈಕಿ ಕಳೆದ ಎರಡು ದಿನಗಳಿಂದ ಸುಮಾರು 350 ಬೋಟುಗಳು ಸಮುದ್ರಕ್ಕೆ ಇಳಿದಿವೆ. ಬೋಟುಗಳು ಸಮುದ್ರಕ್ಕೆ ಇಳಿಯದ ಪರಿಣಾಮ ಈ ವರೆಗೆ ಕೋಟ್ಯಂತರ ರೂ. ನಷ್ಟ ಅಂದಾಜಿಸಲಾಗಿದೆ.

ಮೀನುಗಾರರು ನಾಪತ್ತೆಯಾಗಿ ತಿಂಗಳಾದರೂ ಯಾವುದೇ ಸುಳಿವು ದೊರೆತಿಲ್ಲ. ಈ ವಿಚಾರದಲ್ಲಿ ಮೀನುಗಾರರು ಹಾಗೂ ಅವರ ಕುಟುಂಬದವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ನಾವು ಉತ್ತರ ಕೊಡುವ ಸ್ಥಿತಿಯಲ್ಲಿಲ್ಲ. ಜ. 6ರಂದು ಶಾಂತಿಯುತ ಪ್ರತಿಭಟನೆ ನಡೆಸಿದ ಮೀನುಗಾರರು ಮುಂದೆ ಉಗ್ರ ಹೋರಾಟ ನಡೆಸುವ ಸಾಧ್ಯತೆಗಳು ಕೂಡ ಇವೆ. ಆದುದರಿಂದ ಸರಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು

- ಸತೀಶ್ ಕುಂದರ್, ಮೀನುಗಾರರ ಸಂಘ, ಮಲ್ಪೆ

ನಾಪತ್ತೆಯಾಗಿರುವ ಬೋಟಿನ ಸಹಿತ ಮೀನುಗಾರರಿಗಾಗಿ ಹುಡುಕಾಟ ಮುಂದುವರೆದಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈಗಾಗಲೇ ಪೊಲೀಸ್ ತಂಡಗಳು ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಕೇರಳಕ್ಕೆ ತೆರಳಿದ ತಂಡ ನಿನ್ನೆಯಷ್ಟೆ ವಾಪಾಸ್ಸು ಬಂದಿದೆ. ಅಲ್ಲದೆ ನೌಕಾಪಡೆ ಹಾಗೂ ಕೋಸ್ಟ್ ಗಾರ್ಡ್ ಕೂಡ ಹುಡುಕುವ ಕೆಲಸ ಮಾಡುತ್ತಿದೆ.
-ಕುಮಾರಚಂದ್ರ, ಹೆಚ್ಚುರಿ ಪೊಲೀಸ್ ಅಧೀಕ್ಷಕ, ಉಡುಪಿ ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X