Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನುಷ್ಯ ಜೀವನ ಶ್ರೇಷ್ಠವಾಗಿದೆ: ಸಬಿಹಾ...

ಮನುಷ್ಯ ಜೀವನ ಶ್ರೇಷ್ಠವಾಗಿದೆ: ಸಬಿಹಾ ಫಾತಿಮಾ

ತಾಲೂಕು ಮಟ್ಟದ ಸೀರತ್ ಕ್ವಿಝ್, ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ14 Jan 2019 6:50 PM IST
share
ಮನುಷ್ಯ ಜೀವನ ಶ್ರೇಷ್ಠವಾಗಿದೆ: ಸಬಿಹಾ ಫಾತಿಮಾ

ಭಟ್ಕಳ, ಜ. 14: ಮನುಷ್ಯ ಜೀವನ ಅತ್ಯಂತ ಶ್ರೇಷ್ಠವಾಗಿದ್ದು ಅದನ್ನು ದೈವಿಕ ಮಾರ್ಗದರ್ಶನದಂತೆ ಪ್ರವಾದಿಗಳ ಬೋಧನೆಯಂತೆ ಮುನ್ನೆಡೆಸಬೇಕಾಗಿದೆ ಎಂದು ಮಂಗಳೂರು ಅನುಪಮಾ ಮಹಿಳಾ ಮಾಸಿಕದ ಉಪಸಂಪಾದಕಿ ಸಬಿಹಾ ಫಾತಿಮಾ ಹೇಳಿದರು.

ಅವರು ಭಟ್ಕಳದ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ಘಟಕ ಅಲ್ ಕೌಸರ್ ಗಲ್ಸ್ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸೀರತ್ ಕ್ವಿಝ್ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅನ್ಯಾಯ ದಬ್ಬಾಳಿ, ಶೋಷಣೆ ಮುಕ್ತ ಸಮಾಜ ನಿರ್ಮಾಣವೇ ಪ್ರವಾದಿ ಮುಹಮ್ಮದ್(ಸ) ರ ಜೀವನದ ದ್ಯೇಯವಾಗಿತ್ತು ಎಂದ ಅವರು, ಪ್ರವಾದಿಗಳು ಅತ್ಯಂತ ಸರಳ ಸಜ್ಜನ ಬದುಕನ್ನು ಬದುಕಿ ಇಡೀ ಲೋಕಕ್ಕೆ ಮಾದರಿಯಾಗಿದ್ದರು. ಸ್ತ್ರೀ ಸಮಾನತೆಯ ಪ್ರತಿಪಾದಕರು, ಸ್ತ್ರೀಯರನ್ನು, ವೃದ್ಧರನ್ನು ಮಕ್ಕಳನ್ನು ಗೌರವಿಸುವಂತೆ ಸಮಾಜಕ್ಕೆ ಪಾಠ ಕಲಿಸಿದ ಗುರುವಾಗಿದ್ದರು. ಪ್ರವಾದಿ ಮುಹಮ್ಮದ್ ರು ಕೋಮುವಾದದ ವಿರುದ್ಧ ಸಮರ ಸಾರಿದ್ದು ಕೋಮುವಾದಕ್ಕ ಸಹಾಯ ಮಾಡುವ ವ್ಯಕ್ತಿ ಇಸ್ಲಾಮಿನಿಂದ ಹೊರಗುಳಿಯುತ್ತಾನೆ ಎಂದು ಸಾರಿದರು. ತನ್ನ ಸಮುದಾಯ ಕೆಟ್ಟಕೆಲಸ ಮಾಡಿದರೆ ಅದನ್ನು ಬೆಂಬಲಿಸುವಾತನೆ ನಿಜವಾದ ಕೋಮುವಾದಿಯಾಗಿದ್ದು ಮುಸ್ಲಿಮರು ಕೋಮುವಾದದಿಂದ ದೂರವಿರುವಂತೆ ಆದೇಶಿಸಿದ್ದಾರೆ ಎಂದ ಅವರು, ಪ್ರವಾದಿ ಮುಹಮ್ಮದ್ ಇಸ್ಲಾಮ್ ಧರ್ಮದ ಸ್ಥಾಪಕರಲ್ಲ, ಅವರು ಅಂತಿಮ ಪ್ರವಾದಿಯಾಗಿದ್ದಾರೆ. ಅವರ ಶಿಕ್ಷಣವು ಎಲ್ಲ ಕಾಲಗಳಿಗೂ ಅನ್ವಯವಾಗುತ್ತದೆ. ಭಾರತೀಯರು ಪರಸ್ಪರನ್ನು ಅರಿತು ಸೌಹಾರ್ದಯುತ ಜೀವನ ನಡೆಸಲು ಇಂತಹ ಕಾರ್ಯಕ್ರಮಗಳ ಮೂಲಕ ಸಾಧ್ಯವಾಗುತ್ತದೆ ಎಂದರು.

ಬಹುಮಾನ ವಿತರಕರಾಗಿ ಆಗಮಿಸಿದ್ದ ಭಟ್ಕಳ ಕ್ಷೇತ್ರ ಸಂಪನ್ಮೂಲಾಧಿಕಾರಿ ಶ್ರೀಮತಿ ಎಲ್ಲಮ್ಮ ಮರಿಸ್ವಾಮಿ ಮಾತನಾಡಿ ಮಾನವೀಯತೆಯೇ ಎಲ್ಲ ಧರ್ಮಗಳಿಗೂ ಮಿಗಿಲಾಗಿದ್ದು ನಾವೆಲ್ಲರೂ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಪರಸ್ಪರರು ಪ್ರೀತಿಯಿಂದ ಬಾಳುವುದನ್ನು ಕಲಿತುಕೊಳ್ಳಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳ ತಾಲೂಕಾಸ್ಪತ್ತೆಯ ವೈದ್ಯಾಧಿಕಾರಿ ಅರವಳಿಕೆ ತಜ್ಞೆ ಡಾ.ಸವಿತಾ ಕಾಮತ್ ಮಾತನಾಡಿ, ಭಟ್ಕಳದಲ್ಲಿ ಹಲವು ವರ್ಷಗಳಿಂದಲೂ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ ಎಂಬುದನ್ನು ಹಲವು ಉದಾಹರಣೆಗಳ ಮೂಲಕ ವಿವರಿಸಿ ಇಂತಹ ಕಾರ್ಯಕ್ರಮಗಳ ಮೂಲಕ ನಾವು ಶಾಂತಿ ಸೌಹಾರ್ದತೆಯನ್ನು ಸಾಧಿಸಬಹುದಾಗಿದೆ ಎಂದರು.

‘ಪ್ರವಾದಿ ಮುಹಮ್ಮದ್ ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ಎಂಬ  ವಿಷಯದಲ್ಲಿ  ತಾಲೂಕಿನ ಮಹಿಳೆಯರಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ 70ಕ್ಕೂ ಅಧಿಕ ಮಹಿಳೆಯರು ಭಾಗವಹಿಸಿದ್ದು, ನ್ಯೂ ಇಂಗ್ಲಿಷ್ ಪಿ.ಯು.ಕಾಲೇಜಿನ ಉಪನ್ಯಾಸಕಿ ನೂತನಾ ವಿ.ಭುಜಲೆ ಪ್ರಥಮ ಸ್ಥಾನ, ಜ್ಯೋತಿ ಹೆಬ್ಬಾರ್ ನ್ಯಾಶನಲ್ ಪಿಯು ಕಾಲೇಜ್ ಮುರುಡೇಶ್ವರ ದ್ವಿತೀಯಾ ಹಾಗೂ  ಮುರುಡೇಶ್ವರದ ಇಕ್ರಾ ಪ್ರೌಢಶಾಲೆಯ ನೊವೆಲ್ಲಾ ಅಸಿಸ್ ಲೂಯೀಸ್ ತೃತೀಯಾ ಬಹುಮಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನೀಯರಿಗಾಗಿ ನಡೆದ ಸೀರತ್ ಕ್ವಿಝ್ ಸ್ಪರ್ಧೆಯಲ್ಲಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಜಯಶ್ರೀ ಕೃಷ್ಣ ಪ್ರಭು ಪ್ರಥಮ, ಇಕ್ರಾ ಪ್ರೌಢಾಲೆಯ ಸವಿತಾ ಕೆ.ಟಿ. ದ್ವಿತೀಯಾ ಹಾಗೂ ನ್ಯಾಶನಲ್ ಕಾಲೇಜಿನ ನಾಗರತ್ನ ಎಂ.ನಾಯ್ಕ ಮತ್ತು ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಕುಸುಮಾ ಸುರೇಶ್ ನಾಯಕ್ ತೃತೀಯ ಬಹುಮಾನವನ್ನು ಪಡೆದುಕೊಂಡರು. ಅಲ್ಲದೆ ಸರ್ಕಾರಿ ಪ್ರಾಥಮಿಕ ಶಾಲೆ ಹರಿಜನ್ ಕೇರಿ ಮುರುಡೇಶ್ವರದ ಹರ್ಷಿತಾ ನಾಯಕ ಹಾಗೂ ವಿನಿತಾ ದೇವಾಡಿಗ ಇವರಿಗೆ ವಿಶೇಷ ಬಹುಮಾನವನ್ನು ನೀಡಲಾಯಿತು.

ಸಬಿಹಾ ಕೌಡಾ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ನದೀಮಾ ಟೀಚರ್ ನಿರೂಪಿಸಿದರು. ನಬೀರಾ ವಂದಿಸಿದರು. ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಮಹಿಳಾ ಘಟಕದ ಸಂಚಾಲಕಿ ಫೌಝೀಯಾ ಶಕೀಲ್, ವಿದ್ಯಾಭಾರತಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ರೂಪಾ ಖಾರ್ವಿ, ಇಕ್ರಾ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶಾಹಿನ ಸುಲ್ತಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X