Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ...

ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ಕಂಬಳ

ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ14 Jan 2019 8:33 PM IST
share
ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ಕಂಬಳ

ಮಂಗಳೂರು, ಜ.14: ನಗರದ ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ತಲಪಾಡಿ ದೊಡ್ಡಮನೆ ಕ್ಯಾ.ಬೃಜೇಶ್ ಚೌಟ ಸಾರಥ್ಯದಲ್ಲಿ 2ನೇ ವರ್ಷ ಆಯೋಜಿಸಲ್ಪಟ್ಟ ರಾಮ-ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ 101ಕ್ಕೂ ಅಧಿಕ ಕಂಬಳ ಕೋಣಗಳ ಜೋಡಿಗಳು ಅವಿಭಜಿತ ದ.ಕ. ಜಿಲ್ಲೆಯ ವಿವಿಧೆಡೆಯಿಂದ ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದವು. ರಾಮ-ಲಕ್ಷ್ಮಣ ಜೋಡುಕರೆ ಕಂಬಳದ ಫಲಿತಾಂಶವನ್ನು ಸೋಮವಾರ ಪ್ರಕಟಸಿದೆ.

ಕನೆಹಲಗೆ: ಬಾರ್ಕೂರು ಶಾಂತಾರಾಮ ಶೆಟ್ಟಿ (6.5 ಕೋಲು ನಿಶಾನಿಗೆ ನೀರು ಹಾಯಿಸಿದೆ); ಓಡಿಸಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ.
ಹಗ್ಗ ಹಿರಿಯ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ (ಬಿ) (ಪ್ರಥಮ); ಓಡಿಸಿದವರು: ಬಜೆಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ. ಮೂಡುಬಿದಿರೆ ನ್ಯೂ ಪಡಿವಾಲ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಲ್ (ಬಿ)(ದ್ವಿತೀಯ); ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ.

ಹಗ್ಗ ಕಿರಿಯ:  ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ (ಪ್ರಥಮ); ಓಡಿಸಿದವರು: ಪಣಪೀಲು ಪ್ರವೀಣ್ ಕೋಟ್ಯಾನ್, ಮೂಡುಬಿದಿರೆ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್(ದ್ವಿತೀಯ); ಓಡಿಸಿದವರು : ಕೊಳಕೆ ಇರ್ವತ್ತೂರು ಆನಂದ.
ನೇಗಿಲು ಹಿರಿಯ:  ಬೋಳದ ಗುತ್ತು ಜಗದೀಶ್ ಶೆಟ್ಟಿ (ಬಿ) ಪ್ರಥಮ; ಓಡಿಸಿದವರು: ಮರೋಡಿ ಶ್ರೀಧರ್, ಕೌಡೂರು ಬೀಡು ತುಷಾರ ಮಾರಪ್ಪ ಭಂಡಾರಿ ಬಿ.(ದ್ವಿತೀಯ); ಓಡಿಸಿದವರು: ಅಳದಂಗಡಿ ರವಿಕುಮಾರ್.

ನೇಗಿಲು ಕಿರಿಯ: ಮಿಜಾರು ಪ್ರಸಾದ ನಿಲಯ ಪ್ರಸಿದ್ದ್ ಶಕ್ತಿಪ್ರಸಾದ್ ಶೆಟ್ಟಿ (ಪ್ರಥಮ); ಓಡಿಸಿದವರು: ಬಾರಾಡಿ ನತೇಶ್ ಕುಮಾರ್, ಮುಂಡ್ಕೂರು ಮುಲ್ಲಡ್ಕ ರವೀಂದ್ರ ಶೆಟ್ಟಿ (ದ್ವಿತೀಯ); ಓಡಿಸಿದವರು: ಕಡಂದಲೆ ದುರ್ಗಾ ಪ್ರಸಾದ್.
ಅಡ್ಡಹಲಗೆ: ಮೋರ್ಲಾ ಜಗದೀಶ್ ಆಳ್ವ (ಪ್ರಥಮ); ಓಡಿಸಿದವರು: ಬಂಗಾಡಿ ಕುದ್ಮಾನ್ ಲೋಕಯ್ಯಗೌಡ, ಬೋಳಾರ ತ್ರಿಶಾಲ್ ಕೆ.ಪೂಜಾರಿ(ದ್ವಿತೀಯ); ಓಡಿಸಿದವರು: ಮಂದಾರ್ತಿ ಶಿರೂರು ಗೋಪಾಲನಾಯ್ಕ.

ತುಳು ಸಂಸ್ಕೃತಿ ಉಳಿವಿಗೆ ಕಂಬಳ ಕ್ರೀಡೆ ಅಗತ್ಯ: ಕೃಷ್ಣ ಜೆ.ಪಾಲೆಮಾರ್

ಕಂಬಳದಂತಹ ಜಾನಪದ ಕ್ರೀಡೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗುವ ಕೆಲಸ ನಿರಂತರವಾಗಿ ನಡೆಯಬೇಕು. ಜತೆಗೆ ತುಳುನಾಡಿನ ಸಂಸ್ಕೃತಿ-ಆಚಾರ-ವಿಚಾರಗಳನ್ನು ಉಳಿಸಿಕೊಂಡು ಹೋಗಲು ಕಂಬಳ ಕ್ರಿಡೆ ಅಗತ್ಯಗತ್ಯ ಎಂದು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಹೇಳಿದರು.

ನಗರದ ಬಂಗ್ರ ಕೂಳೂರು ಗೋಲ್ಡ್‌ಫಿಂಚ್ ಸಿಟಿ ಮೈದಾನದಲ್ಲಿ ರವಿವಾರ ಆಯೋಜನೆಗೊಂಡ ರಾಮ-ಲಕ್ಷ್ಮಣ ಜೋಡುಕರೆ ಕಂಬಳದ ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಶಾಸಕ ಜೆ.ಆರ್.ಲೋಬೊ ಮಾತನಾಡಿ, ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಉಳಿಸುವ ಪ್ರಯತ್ನ ಶ್ಲಾಘನೀಯ. ಪ್ರವಾಸೋದ್ಯಮ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮದ ಅಗತ್ಯವಾಗಿದ್ದು, ಮಂಗಳೂರನ್ನು ಬ್ರಾಂಡ್ ಮಾಡಲೂ ಸಹಕಾರಿಯಾಗಿದೆ ಎಂದು ಹೇಳಿದರು.

ಮಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಏಕಗಮ್ಯಾನಂದ, ಖ್ಯಾತ ಗಾಯಕ ರಘು ದೀಕ್ಷಿತ್, ವಿಎಚ್‌ಪಿ ಪ್ರಾಂತ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ವಿಎಚ್‌ಪಿ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಅಜೇಯ ಟ್ರಸ್ಟ್ ಮೂರ್ಕಜೆ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ, ದ.ಕ. ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಆಸರೆ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ, ದ.ಕ.ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾ.ಬೃಜೇಶ್ ಚೌಟ ಸ್ವಾಗತಿಸಿದರು. ಕೇಶವ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X