Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ಒತ್ತಡಕ್ಕೊಳಗಾಗದೇ ಕಾನೂನಿನ...

ಯಾವುದೇ ಒತ್ತಡಕ್ಕೊಳಗಾಗದೇ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡಿ: ಸಿಎಂ ಕುಮಾರಸ್ವಾಮಿ

ಮೈಸೂರು: ಆರಕ್ಷಕ ಉಪನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Jan 2019 8:38 PM IST
share
ಯಾವುದೇ ಒತ್ತಡಕ್ಕೊಳಗಾಗದೇ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡಿ: ಸಿಎಂ ಕುಮಾರಸ್ವಾಮಿ

ಮೈಸೂರು,ಜ.14: ಯಾವುದೇ ಒತ್ತಡಕ್ಕೂ ಬಗ್ಗದೆ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುವ ನಿರ್ಧಾರವನ್ನು ಈ ಮೈದಾನದಿಂದಲೇ ಮಾಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಗಮನ ಆರಕ್ಷಕ ಉಪನಿರೀಕ್ಷಕರ ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು.

ಪೊಲೀಸ್ ಅಕಾಡೆಮಿಯ ಕವಾಯತು ಮೈದಾನದಲ್ಲಿ ಸೋಮವಾರ ಕರ್ನಾಟಕ ಪೊಲೀಸ್ ಅಕಾಡೆಮಿಯ 41ನೇ ತಂಡದ ಆರಕ್ಷಕ ಉಪನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ, ಬಹುಮಾನ ವಿತರಿಸಿ ಮಾತನಾಡಿದರು. 

ಏಳು ತಿಂಗಳ ನನ್ನ ಅವಧಿಯಲ್ಲಿ ನಾನು ಪೊಲೀಸ್ ನಿರ್ಗಮನ ಪಥಸಂಚಲನದಲ್ಲಿ ಎರಡನೇ ಬಾರಿಗೆ ಭಾಗಿಯಾಗಿದ್ದೇನೆ. ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಉತ್ತಮ ತರಬೇತಿ ಪಡೆದಿದ್ದೀರಿ. ಜನರ ಸೇವೆ ಮಾಡಲು ಅತ್ಯುತ್ತಮ ಘಟ್ಟ ತಲುಪಿದ್ದೀರಿ. ಪೊಲೀಸ್ ಇಲಾಖೆ ಅತ್ಯುತ್ತಮ ಇಲಾಖೆ. ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಸಮರ್ಥವಾದ ಇಲಾಖೆ. ಪೊಲೀಸರಾಗಿ ಆಯ್ಕೆಯಾಗಿರೋದು ನಿಮ್ಮ ಸುದೈವ. ಅತ್ಯಂತ ಪ್ರಾಮಾಣಿಕವಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯ ರಕ್ಷಣೆ ಮಾಡಿ. ಯಾವುದೇ ಒತ್ತಡಕ್ಕೆ ಬಗ್ಗದೆ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುವ ನಿರ್ಧಾರವನ್ನು ಈ ಮೈದಾನದಿಂದಲೇ ಮಾಡಿ. ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಮಣಿಯಬೇಡಿ. ಸ್ಥಳ ನಿಯುಕ್ತಿಗೆ ಇತ್ತೀಚಿನ ವ್ಯವಸ್ಥೆಯಲ್ಲಿ ಪ್ರಭಾವ ಬೀರುವ ಪರಿಸ್ಥಿತಿಗೆ ಒಳಗಾಗಬೇಡಿ. ಯಾವುದೇ ಸ್ಥಳದಲ್ಲಿ ನಿಯುಕ್ತಿಮಾಡಿದ ವೇಳೆ, ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡಿ ಎಂದರು.

ಲಾಕಪ್ ಅನ್ನು ಪ್ರೊಬೆಷನರಿ ಪಿಎಸ್ ಐ ಪ್ರಕಾಶ್ ಕನಜೇರ್, ಇನ್ವೆಸ್ಟಿಗೇಶನ್ ಕಪ್ ನ್ನು ಮೋಹನ್ ಕುಮಾರ್ ಡಿ.ಆರ್, ಪಬ್ಲಿಕ್ ಆರ್ಡರ್ ಕಪ್ ನ್ನು ಕಿರಣ್ ರಾಜ್ ಹೆಚ್.ಎನ್, ಫಿಸಿಕಲ್ ಟ್ರೇನಿಂಗ್ ಕಪ್ ನ್ನು ರಾಕೇಶ್ ಎನ್.ಕೆ, ಡ್ರಿಲ್ ಕಪ್ ಅನ್ನು ಆನಂದ ಮನಶೆಟ್ಟರ್, ಟಾಕ್ಟಿಕ್ಸ್ ಕಪ್ ನ್ನು ಸಂತೋಷ್ ಕುಮಾರ್, ಬೆಸ್ಟ್ ರೈಫಲ್ ಫೈರಿಂಗ್- ಶಿವಶಂಕರ್, ಹರಿನಾಥ್ ಬಾಬು, ಬೆಸ್ಟ್ ರಿವಾಲ್ವರ್ ಫೈರಿಂಗ್- ನಬಿಸಾ ವಾಲಿಕರ್, ಡೈರೆಕ್ಟರ್ ಎಸ್ಸೆಸ್ ಮೆಂಟ್ ಕಪ್ ನ್ನು ಟಿಪ್ಪುಸುಲ್ತಾನ್ ನಾಯಕವಾಡಿ, ಉತ್ತಮ ಒಳಾಂಗಣ- ಶೃತಿ ಜಿ, ಉತ್ತಮ ಮಹಿಳಾ ಹೊರಾಂಗಣ- ಅಕ್ಷತಾ ಎಫ್ ಕುರುಕುಂಡಿ, ಉತ್ತಮ ಹೊರಾಂಗಣ -ಆನಂದ ಮನಶೆಟ್ಟರ್, ಬೆಸ್ಟ್ ಲೇಡಿ ಪ್ರೊಬೆಷನರ್ ಹೋಮ್ ಮಿನಿಸ್ಟರ್ ಟ್ರೋಫಿ- ಶೃತಿ ಜಿ, ಆಲ್ ರೌಂಡ್ ಬೆಸ್ಟ್ ಪ್ರೊಬೆಷನರ್, ಚೀಫ್ ಮಿನಿಸ್ಟರ್ಸ್ ಟ್ರೋಫಿ, ಛೀಫ್ ಮಿನಿಸ್ಟರ್ಸ್ ಸ್ವಾರ್ಡ್, ಡಿಜಿ& ಐಜಿಪಿ ಡಿಜಿಪಿ & ಗರುಡಾಚಾರ್ಸ್ ಕ್ಯಾಶ್ ರಿವಾರ್ಡ್- ಟಿಪ್ಪು ಸುಲ್ತಾನ್ ನಾಯಕವಾಡಿ ಅವರುಗಳು ಪಡೆದುಕೊಂಡರು.

ಈ ಸಂದರ್ಭ ಗೃಹ ಸಚಿವ ಎಂ.ಬಿ.ಪಾಟೀಲ್, ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು, ಪೊಲೀಸ್ ಮಹಾನಿರ್ದೇಶಕ ಪದಮ್ ಕುಮಾರ್ ಗರ್ಗ್, ಪೊಲೀಸ್ ಮಹಾನಿರೀಕ್ಷಕರ ರವಿ ಎಸ್, ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ವಿಪುಲ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X