Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಕನ್ನಡ ಮಾಧ್ಯಮ ಉಳಿಸಿ ಬೆಳೆಸಲು, ಶಾಲೆ...

'ಕನ್ನಡ ಮಾಧ್ಯಮ ಉಳಿಸಿ ಬೆಳೆಸಲು, ಶಾಲೆ ಉಳಿಸಲು ಹಳೆವಿದ್ಯಾರ್ಥಿಗಳು ಮುಂದಾಗಬೇಕು'

ಮೂಡುಬಿದಿರೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲಾ ಸುವರ್ಣ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ14 Jan 2019 11:16 PM IST
share

ಮೂಡುಬಿದಿರೆ, ಜ. 14: ಆಂಗ್ಲ ಮಾಧ್ಯಮ ಶಾಲೆಗಳ ಹಾವಳಿಯ ನಡುವೆ ಬಾಬು ರಾಜೇಂದ್ರ ಪ್ರಸಾದ್ ಕನ್ನಡ ಮಾಧ್ಯಮಪ್ರೌಢ ಶಾಲೆ ಉಳಿದು ಬೆಳೆಯಲು ಶಾಲೆಯ ಹಳೆ ವಿದ್ಯಾರ್ಥಿಗಳೇ ಕಾರಣ. ಶಾಲೆಯ ಉಸಿರಾಗಿರುವ ಹಳೆ ವಿದ್ಯಾರ್ಥಿಗಳು ಶಾಲೆಯನ್ನು ಆದರ್ಶ ವಿದ್ಯಾಸಂಸ್ಥೆಯಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಮಾದರಿಯಾಗಿದೆ ಎಂದು ಎಂದು ಶಾಲಾಡಳಿತ ಮಂಡಳಿ ಗೌರವಾಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು.

ಅವರು ಸೋಮವಾರ ಅಪರಾಹ್ನ ಮಹಾವೀರ ವಿದ್ಯಾವರ್ಧಕ ಸಂಘ ಪ್ರವರ್ತಿತ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಎಂಸಿಎಸ್ ಬ್ಯಾಂಕ್ ಪ್ರಾಯೋಜಿಸಿದ ಶಾಲಾ ವಿದ್ಯುದೀಕರಣವನ್ನು ಉದ್ಘಾಟಿಸಿದ ಬ್ಯಾಂಕಿನ ಅಧ್ಯಕ್ಷ,  ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಮಾತನಾಡಿ, `ಹಳೆ ವಿದ್ಯಾರ್ಥಿಗಳು ಸಕ್ರಿಯರಾಗಿರುವ ಶಾಲೆಗಳು ಅಭಿವೃದ್ದಿ ಹೊಂದುತ್ತವೆ ಎಂಬುದಕ್ಕೆ  ಈ ಪ್ರೌಢಶಾಲೆಯೇ ಸಾಕ್ಷಿ; ಭಾರತದ ಪ್ರಥಮ ರಾಷ್ಟ್ರಪತಿಯವರ ಹೆಸರು ಹೊತ್ತ ಈ ಶಾಲೆಯ ವಿದ್ಯಾರ್ಥಿಗಳು ಅವರ ಗುಣಗಳನ್ನು ಮೈಗೂಡಿಸಿಕೊಳ್ಳುವಂತಾಗಲಿ' ಎಂದು ಹಾರೈಸಿದರು.

ಶಾಲಾ ಸಂಚಾಲಕ ಕೆ. ವಿಶ್ವನಾಥ ಪ್ರಭು ವಿದ್ಯಾಭಿಮಾನಿಗಳ ಸಹಕಾರ ಯಾಚಿಸಿದರು. ಶಾಲಾ ಹಳೆ ವಿದ್ಯಾರ್ಥಿ, ಉದ್ಯಮಿ ಜಿ.ಉಮೇಶ ಪೈ, ಆರ್. ರವೀಂದ್ರ ಪೈ, ಪ್ರಭಾರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ. ಮತ್ತಿತರರು ಶುಭಾಶಂಸನೆಗೈದರು.

ಇನ್ನರ್‍ವೀಲ್ ಅಧ್ಯಕ್ಷೆ ಚಂದ್ರಿಕಾ ದಯಾನಂದ ಮಲ್ಯ, ತಿಮ್ಮಯ ಶೆಟ್ಟಿ, ರಾಜಶ್ರೀ  ವಿ.ಪ್ರಭು, ಡಾ. ವಿನಯಕುಮಾರ ಹೆಗ್ಡೆ, ಶಾಲಾ ಉಪಾಧ್ಯಕ್ಷ ಸಂಪತ್ ಡಿ.ಸಾಮ್ರಾಜ್ಯ, ಪುರಸಭಾ ಸದಸ್ಯರಾದ ಎಂ. ಬಾಹುಬಲಿ ಪ್ರಸಾದ್, ಸುರೇಶ್ ಕೋಟ್ಯಾನ್,  ಉದ್ಯಮಿ ಸುರೇಶ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಟಿ. ರಘುವೀರ ಶೆಣೈ, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಾಹುಬಲಿ, ನಾರಾಯಣ ಪಿ,  ನಿವೃತ್ತ  ಶಿಕ್ಷಕರಾದ ಗೀತಾ ವಿ. ಶರ್ಮ, ಕೆ. ವಿ. ಶರ್ಮ, ಎಂಸಿಎಸ್ ಬ್ಯಾಂಕ್ ಸಿಇಓ ಚಂದ್ರಶೇಖರ ಎಂ., ರಾಜೇಶ್ ಬಂಗೇರ, ಅಜಿತ್ ಕುಮಾರ್, ವಕೀಲ ಮನೋಜ್ ಶೆಣೈ,  , ಪುಷ್ಪರಾಜ ಜೈನ್, ಅಬುಲಾಲ ಪುತ್ತಿಗೆ , ಜ್ಞಾನೇಶ್ವರ ಪೈ, ವಿಶ್ವನಾಥ ಭಟ್, ಸಿ.ಎಚ್. ಅಬ್ದುಲ್ ಗಪೂರ್, ಸಂಜಯ್ ಭಟ್, ಮೋಹನದಾಸ ಭಂಡಾರ್ಕರ್ , ಬೋಳ ವಿಶ್ವನಾಥ ಕಾಮತ್, ಸುಬ್ರಹ್ಮಣ್ಯ ಪಾಂಗಣ್ಣಾಯ,  ಮೊದಲಾದವರು ಅತಿಥಿಗಳಾಗಿದ್ದರು.

ಸ್ಥಾಪಕರಿಗೆ ನಮನ:

ಪ್ರಾರಂಭದಲ್ಲಿ ಅತಿಥಿಗಳು, ಗಣ್ಯರು ಶಾಲಾ ಸಂಸ್ಥಾಪಕ ಪ್ರಮುಖರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದರು. ದಾನಿಗಳು, ನಿವೃತ್ತ ಹಾಗೂ ಪ್ರವೃತ್ತ ಶಿಕ್ಷಕ,ಶಿಕ್ಷಕೇತರರು, ಹಳೆ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಜಾ ಅವರು ಶಾಲಾ ವರದಿ ವಾಚಿಸಿದರು.

ಶಾಲಾಡಳಿತ ಮಂಡಳಿ ಅಧ್ಯಕ್ಷ  ಪಿ. ರಾಮನಾಥ ಭಟ್ ಸ್ವಾಗತಿಸಿದರು. ಎಂ. ಗಣೇಶ ಕಾಮತ್ ಪ್ರಸ್ತಾವನೆಗೈದರು.  ಶಿಕ್ಷಕರಾದ ಜನಾರ್ದನ ನಾಯ್ಕ್   ವಂದಿಸಿ, ವೆಂಕಟರಮಣ ಕೆರೆಗದ್ದೆ ನಿರೂಪಿಸಿದರು. ಮುಂಜಾನೆ  ವಕೀಲ ಕೆ. ಆರ್. ಪಂಡಿತ್ ಅಧ್ಯಕ್ಷತೆಯಲ್ಲಿ ಕೆ. ವೆಂಕಟೇಶ ಕಾಮತ್ ಧ್ವಜಾರೋಹಣ ಗೈದರು, ಶ್ರೀನಿವಾಸ ಕಿಣಿ ಬಹುಮಾನ ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X