Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂವಿಧಾನದ ತತ್ವದ ಸ್ಥಾನದಲ್ಲಿ...

ಸಂವಿಧಾನದ ತತ್ವದ ಸ್ಥಾನದಲ್ಲಿ ಗೋಳ್ವಾಲ್ಕರ್ ಸಿದ್ಧಾಂತ ಪ್ರತಿಷ್ಟಾಪಿಸಲು ಯತ್ನ: ತೇಜಸ್ವಿ ಯಾದವ್

ವಾರ್ತಾಭಾರತಿವಾರ್ತಾಭಾರತಿ14 Jan 2019 11:47 PM IST
share
ಸಂವಿಧಾನದ ತತ್ವದ ಸ್ಥಾನದಲ್ಲಿ ಗೋಳ್ವಾಲ್ಕರ್ ಸಿದ್ಧಾಂತ ಪ್ರತಿಷ್ಟಾಪಿಸಲು ಯತ್ನ: ತೇಜಸ್ವಿ ಯಾದವ್

ಲಕ್ನೊ, ಜ.14: ಲೋಕಸಭಾ ಚುನಾವಣೆಯ ಬಳಿಕ ಕೇಂದ್ರದಲ್ಲಿ ಯಾರು ಅಧಿಕಾರ ದಲ್ಲಿರುತ್ತಾರೆ ಎಂಬುದನ್ನು ಉ.ಪ್ರದೇಶ ಮತ್ತು ಬಿಹಾರ ನಿರ್ಧರಿಸಲಿದೆ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ತಮ್ಮ ಪಕ್ಷವು ಉ.ಪ್ರದೇಶದಲ್ಲಿ ಬಿಎಸ್ಪಿ-ಎಸ್ಪಿ ಮೈತ್ರಿಕೂಟವನ್ನು ಬೆಂಬಲಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದರು. ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಸಂದೇಶ ಇಡೀ ದೇಶಕ್ಕೇ ಪ್ರಸಾರವಾಗಿದೆ. ಈ ಮೈತ್ರಿಯು ದೇಶವನ್ನು ಆರೆಸ್ಸೆಸ್‌ನ ಹಿಡಿತದಿಂದ ರಕ್ಷಿಸಲಿದೆ. ಉ.ಪ್ರದೇಶ(80 ಸ್ಥಾನ), ಬಿಹಾರ(40) ಮತ್ತು ಜಾರ್ಖಂಡ್(15) ನಲ್ಲಿ ಈಗ ಬಿಜೆಪಿ ಸುಮಾರು 115 ಸ್ಥಾನ ಗಳಿಸಿದೆ. ಆದರೆ ಮುಂದಿನ ಚುನಾವಣೆಯಲ್ಲಿ ಈ ಮೂರು ರಾಜ್ಯಗಳಲ್ಲಿ ಬಿಜೆಪಿ 100 ಸ್ಥಾನ ಕಳೆದುಕೊಳ್ಳಲಿದೆ ಎಂದರು.

ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಯ ಏಕೈಕ ಉದ್ದೇಶದಿಂದ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳಿಗೆ ಹಾನಿ ಎಸಗಲಾಗುತ್ತಿದೆ. ಅಲ್ಲದೆ ಸಂವಿಧಾನದ ತತ್ವದ ಸ್ಥಾನದಲ್ಲಿ ಗೋಳ್ವಾಲ್ಕರ್ (ಆರೆಸ್ಸೆಸ್ ಮುಖಂಡ) ಸಿದ್ಧಾಂತವನ್ನು ಪ್ರತಿಷ್ಟಾಪಿಸಲು ಪ್ರಯತ್ನ ಸಾಗುತ್ತಿದೆ ಎಂದು ದೂರಿದರು. 13 ವರ್ಷದವನಿದ್ದಾಗಲೇ ತನ್ನ ವಿರುದ್ಧ ಹಾಗೂ ಕುಟುಂಬದ ಎಲ್ಲಾ ಸದಸ್ಯರ ವಿರುದ್ಧ ಸಿಬಿಐ ಮತ್ತು ಇಡಿ ಪ್ರಕರಣ ದಾಖಲಿಸಿತ್ತು. ಆದರೆ ತಾವು ರಾಜಿ ಮಾಡಿಕೊಳ್ಳಲು ಇಚ್ಚಿಸದೆ ಈ ಷಡ್ಯಂತ್ರ್ಯದ ವಿರುದ್ಧ ಹೋರಾಡಲು ನಿರ್ಧರಿಸಿದ್ದೇವೆ . ನಕಾರಾತ್ಮಕ ಪ್ರಚಾರದಿಂದ ವಿಪಕ್ಷಗಳ ಪ್ರತಿಷ್ಟೆಗೆ ಘಾಸಿ ಎಸಗಲು ಸರಕಾರ ಪ್ರಯತ್ನಿಸುತ್ತಿದೆ. ಆದರೆ ಇದಕ್ಕೆ ಈ ಬಾರಿಯ ಚುನಾವಣೆಯಲ್ಲಿ ಸೂಕ್ತ ಉತ್ತರ ದೊರಕಲಿದೆ ಎಂದವರು ಹೇಳಿದರು.

ಬಿಹಾರ ಹಾಗೂ ದೇಶದ ಇತರೆಡೆಯೂ ವಿಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಉಳಿಗಾಲವಿಲ್ಲ ಎಂದು ತೇಜಸ್ವಿ ಹೇಳಿದರು. ಬಿಎಸ್ಪಿ ಮುಖಂಡೆ ಮಾಯಾವತಿ ಹಿರಿಯರಾಗಿದ್ದು ಅವರಿಗೆ ಜನ್ಮದಿನದ ಶುಭಾಷಯ ಸಲ್ಲಿಸಲು ತಾನು ಬಂದಿರುವುದಾಗಿ ತೇಜಸ್ವಿ ತಿಳಿಸಿದ್ದಾರೆ. ಬಳಿಕ ತಾನು ಮಾಯಾವತಿಯ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತಿರುವ ಚಿತ್ರವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಇದೇ ಸಂದರ್ಭ ಮಾತನಾಡಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್, ಇಡೀ ದೇಶವೇ ಈಗ ಬಿಜೆಪಿಯ ಬಗ್ಗೆ ಭ್ರಮನಿರಸನಗೊಂಡಿದೆ. ಬಿಜೆಪಿ ಮಾಡಿರುವ ಮೋಸವನ್ನು ಜನತೆ ಅರಿತುಕೊಂಡಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X