ಜ.16: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ವತಿಯಿಂದ 'ಪಬ್ಲಿಸಿಟಿ ಕನ್ವೆನ್ಶನ್'
ಉಳ್ಳಾಲ, ಜ. 15: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ವತಿಯಿಂದ ರಾಜದಾನಿ ಬೆಂಗಳೂರಿನಲ್ಲಿ ಜ. 27 ರಂದು ನಡೆಯುವ ಕರ್ನಾಟಕ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶದ ಪ್ರಚಾರಾರ್ತ "ಪಬ್ಲಿಸಿಟಿ ಕನ್ವೆನ್ಶನ್" ಕಾರ್ಯಕ್ರಮ ಜ.16ರಂದು ಮಗ್ರಿಬ್ ನಮಾಝ್ ಬಳಿಕ ತೊಕ್ಕೋಟ್ಟು ತಾಜುಲ್ ಉಲೆಮಾ ಜುಮಾ ಮಸ್ಜಿದ್ ನಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ಅಧ್ಯಕ್ಷ ಎಸ್.ಎಮ್ ಖುಬೈಬ್ ತಂಙಳ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ವಿಷಯ ಮಂಡಿಸಲಿದ್ದಾರೆ. ಕಾರ್ಯಕ್ರಮ ದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸಹಿತ ಇತರರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಕಾರ್ಯದರ್ಶಿ ಜಾಫರ್ ಯು ಎಸ್ ಅಳೇಕಲ ತಿಳಿಸಿದ್ದಾರೆ.
Next Story