ಕನ್ಹಯ್ಯ ಕುಮಾರ್ ಟೀಕಿಸಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ: ಶಿವಸೇನೆ ಆಕ್ರೋಶ
![ಕನ್ಹಯ್ಯ ಕುಮಾರ್ ಟೀಕಿಸಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ: ಶಿವಸೇನೆ ಆಕ್ರೋಶ ಕನ್ಹಯ್ಯ ಕುಮಾರ್ ಟೀಕಿಸಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ: ಶಿವಸೇನೆ ಆಕ್ರೋಶ](/images/placeholder.jpg)
ಮುಂಬೈ, ಜ.16: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಗೆ ಜೆಎನ್ ಯು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಅವರನ್ನು ಟೀಕಿಸಲು ಯಾವ ನೈತಿಕ ಹಕ್ಕು ಇದೆ ಎಂದು ಶಿವಸೇನೆ ಪ್ರಶ್ನಿಸಿದೆ.
ಕನ್ಹಯ್ಯ ಕುಮಾರ್ ವಿರುದ್ಧದ ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ರಾಜಕೀಯ ಮೈಲೇಜ್ ಗಿಟ್ಟಿಸುವ ಪ್ರಯತ್ನ ಮಾಡಬೇಡಿ ಎಂದು ಶಿವಸೇನೆ ಬಿಜೆಪಿಗೆ ತಾಕೀತು ಮಾಡಿದೆ.
ಸಂಸತ್ ಭವನದ ಮೇಲೆ ದಾಳಿ ಮಾಡಿದ ಅಫ್ಜಲ್ ಗುರುವನ್ನು ಹುತಾತ್ಮ ಎಂದು ಪರಿಗಣಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಜತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಪಾಪ ಮಾಡಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ. ಪಿಡಿಪಿ ನೇತೃತ್ವದ ಪಿಡಿಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಬಿಜೆಪಿ ಕಳೆದ ಅಕ್ಟೋಬರ್ನಲ್ಲಿ ಬೆಂಬಲ ವಾಪಸ್ ಪಡೆದಿತ್ತು.
ಮುಂಬೈ ಉಗ್ರ ದಾಳಿಯ ಆರೋಪಿ ಅಜ್ಮಲ್ ಕಸಬ್ ಗೆ ಕೂಡಾ ತನ್ನ ವಾದ ಮಂಡಿಸಲು ಅವಕಾಶ ನೀಡಲಾಗಿತ್ತು. ಆದ್ದರಿಂದ ಕನ್ಹಯ್ಯ ಕುಮಾರ್ ಅವರಿಗೂ ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಶಿವಸೇನೆ ಆಗ್ರಹಿಸಿದೆ.