Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಪತ್ತೆಯಾದ 7 ಮೀನುಗಾರರ ಕುಟುಂಬದಿಂದ...

ನಾಪತ್ತೆಯಾದ 7 ಮೀನುಗಾರರ ಕುಟುಂಬದಿಂದ ಉಡುಪಿ ಅನಂತೇಶ್ವರದಲ್ಲಿ ಪವಮಾನ ಸೂಕ್ತಯಾಗ

ವಾರ್ತಾಭಾರತಿವಾರ್ತಾಭಾರತಿ16 Jan 2019 9:57 PM IST
share

ಉಡುಪಿ, ಜ.16: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು, ಸುವರ್ಣ ತ್ರಿಭುಜ ಬೋಟಿನೊಂದಿಗೆ ನಾಪತ್ತೆಯಾಗಿ 32 ದಿನ ಸಂದಿದ್ದು, ಸತತ ಪ್ರಯತ್ನದ ಬಳಿಕವೂ ಇದುವರೆಗೆ ಯಾವುದೇ ಸುಳಿವು ಸಿಗದೇ ಉಡುಪಿಯ ಎರಡು ಹಾಗೂ ಉತ್ತರ ಕನ್ನಡದ ಐದು ಕುಟುಂಬಗಳು ಕಂಗೆಟ್ಟಿವೆ.

ಇದೀಗ ಈ ಕುಟುಂಬಗಳು ಕಾದು ಕಾದು ಹತಾಶರಾಗಿ ದೇವರು, ದೈವಗಳ ಮೊರೆ ಹೋಗುತಿದ್ದಾರೆ. ಈ ನಿಟ್ಟಿನಲ್ಲಿ ನಾಪತ್ತೆಯಾಗಿರುವ ಎಲ್ಲಾ ಏಳು ಮೀನುಗಾರರ ಕುಟುಂಬಸ್ಥರು ಉಡುಪಿ ರಥಬೀದಿಯಲ್ಲಿರುವ ಅನಂತೇಶ್ವರ ದೇವಸ್ಥಾನದಲ್ಲಿ ಬುಧವಾರ ಪವಮಾನ ಸೂಕ್ತ ಯಾಗ ನೇರವೇರಿಸಿದರು.

ದೇವಸ್ಥಾನದ ಪ್ರದಾನ ಅರ್ಚಕ ವೇದವ್ಯಾಸ ಐತಾಳ್ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ವಾಯುದೇವರ ಪ್ರೀತಿಗಾಗಿ ಪವಮಾನ ಸೂಕ್ತ ಹೋಮ ನಡೆಯಿತು. ಕೃಷ್ಣ ಮಠ, ಚಂದ್ರೇಶ್ವರ ದೇವಸ್ಥಾನದಲ್ಲಿ ಮೀನುಗಾರರು ಸುರಕ್ಷಿತವಾಗಿ ಮರಳಲಿ ಎಂದು ಕುಟಂಬ ವರ್ಗದವರು ಪ್ರಾರ್ಥನೆ ಸಲ್ಲಿಸಿದರು.

ಉತ್ತರ ಕನ್ನಡದ ಕುಮಟದ 2, ಭಟ್ಕಳದ 2 ಹಾಗೂ ಮಂಕಿಯ ಒಬ್ಬರು ಹಾಗೂ ಮಲ್ಪೆ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದು, 7 ಮಂದಿಯ ಕುಟುಂಬಸ್ಥರೂ ಇಂದಿನ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಮೀನುಗಾರರು ನಾಪತ್ತೆಯಾಗಿ ತಿಂಗಳು ಕಳೆದಿದೆ. ಕರಾವಳಿ ಕಾವಲು ಪಡೆ, ನೌಕಾಪಡೆ ಹಾಗೂ ಪೊಲೀಸ್ ಇಲಾಖೆ ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೂ ಫಲ ಸಿಕ್ಕಿಲ್ಲ. ಮೀನುಗಾರರಿಗೆ ದಿಕ್ಕುತೋಚುತ್ತಿಲ್ಲ. ಹಾಗಾಗಿ, ಅಂತಿಮವಾಗಿ ದೇವರ ಮೊರೆ ಹೋಗಿದ್ದೇವೆ ಎಂದು ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದರು.

ಗುರುವಾರ ಬೆಂಗಳೂರಲ್ಲಿ ಸಭೆ

ಗುರುವಾರ ಸಂಜೆ 4:30ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಕರಾವಳಿ ತೀರದ ಭದ್ರತೆ ಕುರಿತಂತೆ ಮೂರು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿ ಗಳು, ನೌಕಾ ಪಡೆಯ ಅಧಿಕಾರಿಗಳು ಹಾಗೂ ಕೋಸ್ಟಲ್ ಗಾರ್ಡ್‌ನ ಅಧಿಕಾರಿಗಳ ಸಭೆ ನಡೆಯಲಿದ್ದು, ಇದರಲ್ಲಿ ಮೀನುಗಾರರ ನಾಪತ್ತೆ ಪ್ರಕರಣವೂ ಚರ್ಚೆಗೆ ಬರುವ ನಿರೀಕ್ಷೆ ಇದೆ. ಹೀಗಾಗಿ ಇದರಲ್ಲಿ ಭಾಗವಹಿಸಲು ಸಿದ್ಧರಾಗಿರುವಂತೆ ಮೀನುಗಾರರ ಪ್ರತಿನಿಧಿಗಳಿಗೆ ಆಹ್ವಾನಿಸಲಾಗಿದೆ ಎಂದು ಸತೀಶ್ ಕುಂದರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X