ಮಂಗಳೂರು: ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಗಳೂರು, ಜ.16: ಮಂಗಳೂರು- ಉಳ್ಳಾಲ ಹೆದ್ದಾರಿಯಲ್ಲಿರುವ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ಬುಧವಾರ ಸಂಜೆ ನಡೆದಿದೆ.
ಸುಮಾರು 22 ರ ಹರೆಯದ ಯುವತಿ ಎಂದು ತಿಳಿದುಬಂದಿದೆ.
ನೇತ್ರಾವತಿ ಸೇತುವೆ ಮೇಲೆ ಯುವತಿ ಮೊಬೈಲ್ ನಲ್ಲಿ ಮಾತಾಡುತ್ತಾ ಕಣ್ಣೀರು ಸುರಿಸುತ್ತಾ ಹೋಗುತ್ತಿದ್ದು, ಈ ವೇಳೆ ಕಣ್ಣೀರು ಹಾಕುತ್ತಲೇ ನದಿಗೆ ಹಾರಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಯುವತಿಯು ಬ್ಯಾಗ್, ಯೂನಿಫಾರಂ ತೊಟ್ಟಿದ್ದು, ಕಾಲೇಜು ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಘಟನೆಗೆ ಸ್ಪಷ್ಟ ಕಾರಣವೇನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸರು ತೆರಳಿದ್ದಾರೆ.
Next Story





