Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಲೇಶ್ಯಾ ಮಾಸ್ಟರ್ಸ್: ಸೆನಾ, ಕಶ್ಯಪ್,...

ಮಲೇಶ್ಯಾ ಮಾಸ್ಟರ್ಸ್: ಸೆನಾ, ಕಶ್ಯಪ್, ಶ್ರೀಕಾಂತ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ16 Jan 2019 11:49 PM IST
share
ಮಲೇಶ್ಯಾ ಮಾಸ್ಟರ್ಸ್: ಸೆನಾ, ಕಶ್ಯಪ್, ಶ್ರೀಕಾಂತ್ ಶುಭಾರಂಭ

ಕೌಲಾಲಂಪುರ, ಜ.16: ಕಳೆದ ವರ್ಷಾಂತ್ಯದಲ್ಲಿ ದಾಂಪತ್ಯಬದುಕಿಗೆ ಕಾಲಿಟ್ಟಿರುವ ಸೈನಾ ನೆಹ್ವಾಲ್ ಹಾಗೂ ಪಿ.ಕಶ್ಯಪ್, ಕಿಡಂಬಿ ಶ್ರೀಕಾಂತ್ ಅವರು ಬುಧವಾರ ಇಲ್ಲಿ ಆರಂಭವಾದ ಮಲೇಶ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಶುಭಾರಂಭ ಮಾಡಿದ್ದಾರೆ.

ಒಂದು ಗಂಟೆ, ಐದು ನಿಮಿಷಗಳ ಕಾಲ ನಡೆದ ಮಹಿಳೆಯರ ಸಿಂಗಲ್ಸ್‌ನ ಮೊದಲ ಸುತ್ತ್ತಿನ ಪಂದ್ಯದಲ್ಲಿ ಏಳನೇ ಶ್ರೇಯಾಂಕದ ಸೈನಾ ಹಾಂಕಾಂಗ್‌ನ ಜಾಯ್ ಕ್ಸುಯಾನ್ ಡೆಂಗ್‌ರನ್ನು 14-21, 21-18, 21-18 ಗೇಮ್‌ಗಳ ಅಂತರದಿಂದ ಮಣಿಸಿದ್ದಾರೆ.

ಮಹಿಳಾ ಸಿಂಗಲ್ಸ್ ಇವೆಂಟ್‌ನಲ್ಲಿ ಆಡುತ್ತಿರುವ ಭಾರತದ ಏಕೈಕ ಆಟಗಾರ್ತಿ ಸೈನಾ ಮುಂದಿನ ಸುತ್ತಿನಲ್ಲಿ ಹಾಂಕಾಂಗ್‌ನ ಶ್ರೇಯಾಂಕರಹಿತ ಆಟಗಾರ್ತಿ ಪ್ಯೂಯ್ ಯಿನ್ ಯಿಪ್‌ರನ್ನು ಎದುರಿಸಲಿದ್ದಾರೆ.

ಸೈನಾರಂತೆಯೇ ಕಶ್ಯಪ್ ಕೂಡ ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಯಾಸದ ಜಯ ದಾಖಲಿಸಿದರು. ಪುರುಷರ ಸಿಂಗಲ್ಸ್‌ನಲ್ಲಿ ಕಶ್ಯಪ್ ಡೆನ್ಮಾರ್ಕ್‌ನ ರಾಸ್ಮಸ್ ಗೆಮ್ಕೆರನ್ನು 19-21, 21-19, 21-10 ಅಂತರದಿಂದ ಮಣಿಸಿದ್ದಾರೆ. ಮತ್ತೊಂದು ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಕೆ.ಶ್ರೀಕಾಂತ್ ಕೇವಲ 30 ನಿಮಿಷಗಳಲ್ಲಿ ಎದುರಾಳಿ ಹಾಂಕಾಂಗ್‌ನ ಅಂಗುಸ್ ಕಾ ಲಾಂಗ್‌ರನ್ನು 21-17, 21-11 ಗೇಮ್‌ಗಳ ಅಂತರದಿಂದ ಸುಲಭವಾಗಿ ಸೋಲಿಸಿದರು. ಕಶ್ಯಪ್‌ಗೆ ಎರಡನೇ ಸುತ್ತಿನಲ್ಲಿ ಇಂಡೋನೇಶ್ಯಾದ ಆರನೇ ಶ್ರೇಯಾಂಕದ ಅಂಥೋನಿ ಸಿನಿಸುಕಾ ಸವಾಲು ಎದುರಿಸಬೇಕಾಗಿದೆ. ಶ್ರೀಕಾಂತ್ ಹಾಂಕಾಂಗ್‌ನ ವಿನ್ಸೆಂಟ್ ವಿಂಗ್ ಕಿ ವಾಂಗ್‌ರನ್ನು ಮುಖಾಮುಖಿಯಾಗಲಿದ್ದಾರೆ.

ಮಹಿಳೆಯರ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಎನ್.ಸಿಕ್ಕಿ ರೆಡ್ಡಿ ಹಾಂಕಾಂಗ್‌ನ ಯಾವು ಎನ್‌ಜಿ ಹಾಗೂ ಸಿನ್ ಯಿಂಗ್ ಯುಯೆನ್ ವಿರುದ್ಧ 21-16, 22-20 ಗೇಮ್‌ಗಳ ಅಂತರದಿಂದ ಪ್ರಯಾಸದ ಜಯ ಸಾಧಿಸಿ ಮೊದಲ ತಡೆ ದಾಟಿದ್ದಾರೆ. ಅಶ್ವಿನಿ-ಸಿಕ್ಕಿ ಮುಂದಿನ ಸುತ್ತಿನಲ್ಲಿ ಇಂಡೋನೇಶ್ಯಾದ ಕೆಟುಟ್ ಮಹಡೆವಿ ಹಾಗೂ ರಿಝ್ಕಿ ಅಮೆಲಿಯಾ ಪ್ರದೀಪ್ತಾರನ್ನು ಎದುರಿಸಲಿದ್ದಾರೆ.

ಭಾರತದ ಮಿಕ್ಸೆಡ್ ಡಬಲ್ಸ್ ಜೋಡಿ ಪ್ರಣಯ್ ಜೆರ್ರಿ ಚೋಪ್ರಾ ಹಾಗೂ ಸಿಕ್ಕಿ ರೆಡ್ಡಿ ಅಭಿಯಾನ ಅಂತ್ಯವಾಗಿದೆ. ಈ ಜೋಡಿ ಹಾಲೆಂಡ್‌ನ ರಾಬಿನ್ ಟಬೆಲಿಂಗ್ ಹಾಗೂ ಸೆಲೆನಾ ಪಿಯೆಕ್ ವಿರುದ್ಧ 19-21, 17-21 ಅಂತರದಿಂದ ಸೋತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X