Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಾಣಿಪಲ್ಲ ಗುಡ್ಡಕ್ಕೆ ಬೆಂಕಿ: ಹೊತ್ತಿ...

​ಮಾಣಿಪಲ್ಲ ಗುಡ್ಡಕ್ಕೆ ಬೆಂಕಿ: ಹೊತ್ತಿ ಉರಿಯುತ್ತಿರುವ ಗಿಡಮರಗಳು

15 ಎಕರೆಗೆ ವಿಸ್ತರಿಸಿದ ಬೆಂಕಿ; ರಕ್ಷಣಾ ಕಾರ್ಯದಲ್ಲಿ ಗ್ರಾಮಸ್ಥರ ಹರಸಾಹಸ

ವಾರ್ತಾಭಾರತಿವಾರ್ತಾಭಾರತಿ17 Jan 2019 9:46 PM IST
share
​ಮಾಣಿಪಲ್ಲ ಗುಡ್ಡಕ್ಕೆ ಬೆಂಕಿ: ಹೊತ್ತಿ ಉರಿಯುತ್ತಿರುವ ಗಿಡಮರಗಳು

ಮಂಗಳೂರು, ಜ.17: ಬಜ್ಪೆ ಸಮೀಪದ ಕುಪ್ಪೆಪದವು ಗ್ರಾಪಂ ವ್ಯಾಪ್ತಿಯ ಮಾಣಿಪಲ್ಲ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, 15 ಎಕರೆಗೂ ಹೆಚ್ಚು ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿಯುತ್ತಿದೆ. ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ.

‘ಗುಡ್ಡದಲ್ಲಿ ಸಂಜೆ ಸುಮಾರು 5 ಗಂಟೆ ನಂತರ ಗಾಢ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿಯಾಗಿ ಪರಿವರ್ತೆಗೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಗುಡ್ಡದಲ್ಲಿನ ಅಕೇಶಿಯಾ, ಮೆಂಜಾಮು ಗಿಡ ಮರ ಸೇರಿದಂತೆ ಅನೇಕ ಔಷಧೀಯ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಜೊತೆಗೆ ಗುಡ್ಡದಲ್ಲಿದ್ದ ಹಾವು, ಮೊಲ, ಪಕ್ಷಿಗಳು ಸೇರಿದಂತೆ ಕಾಡುಪ್ರಾಣಿಗಳು ಬೆಂಕಿಗೆ ಬಲಿಯಾಗಿವೆ’ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸುಲೈಮಾನ್ ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

‘ಗುಡ್ಡಕ್ಕೆ ಹೊಂದಿಕೊಂಡಂತಿರುವ ರಸ್ತೆಯ ಪಕ್ಕದ ಬೆಂಕಿಯನ್ನು ಗ್ರಾಮಸ್ಥರು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಗುಡ್ಡದ ಮೇಲೆ ಬೆಂಕಿ ತಾಂಡವವಾಡುತ್ತಿದ್ದು, ಅಗ್ನಿಶಾಮಕ ದಳದ ವಾಹನ ಬೆಂಕಿ ನಂದಿಸುವಲ್ಲಿ ಯತ್ನಿಸುತ್ತಿದೆ. ಸಮರೋಪಾದಿಯಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದರೂ ಬೆಂಕಿ ಹೊತ್ತಿಕೊಳ್ಳುವುದು ಹೆಚ್ಚುತ್ತಿದೆ. ಮಾಣಿಪಲ್ಲ ಗ್ರಾಮದಲ್ಲಿ 40-45 ಮನೆಗಳಿದ್ದು, ಪೆಟ್ರೋಲ್ ಬಂಕ್ ಕೂಡ ಸಮೀಪದಲ್ಲೇ ಇದೆ’ ಎನ್ನುತ್ತಾರೆ ಸುಲೈಮಾನ್.

ಬೆಂಕಿ ನಂದಿಸುವಲ್ಲಿ ಗ್ರಾಮದ 150ಕ್ಕೂ ಹೆಚ್ಚು ಮಂದಿಯ ಯುವಕ ತಂಡ ಬಕೇಟ್, ಕೊಡ, ಡ್ರಮ್ ಸೇರಿದಂತೆ ವಿವಿಧ ಪರಿಕರಗಳಲ್ಲಿ ನೀರನ್ನು ತಂದು ಎರಚುತ್ತಿದ್ದಾರೆ. ಸಂಜೆಯಿಂದ ಹೊತ್ತಿಕೊಂಡಿರುವ ಬೆಂಕಿ ಕಡಿಮೆಯಾಗುತ್ತಿಲ್ಲ. ಈ ವರೆಗೆ ಯಾವುದೇ ಜನಪ್ರತಿನಿಧಿಗಳ ಸ್ಥಳಕ್ಕೆ ಬಂದಿಲ್ಲ. ಸರಕಾರ ಕೈಕಟ್ಟಿ ಕುಳಿತರೆ ಊರೇ ಹೊತ್ತಿ ಉರಿಯುತ್ತದೆ ಎಂದು ಸುಲೈಮಾನ್ ಬೇಸರ ವ್ಯಕ್ತಪಡಿಸಿದರು.

ಮಾಣಿಪಲ್ಲ ಗುಡ್ಡಕ್ಕೆ ಹಲವು ವರ್ಷಗಳಿಂದ ಬೆಂಕಿ ಬೀಳುತ್ತಿದೆ. ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದು ತಿಳಿದುಬಂದಿಲ್ಲ. ಸಂಬಂಧಪಟ್ಟವರಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಎಚ್ಚರದಿಂದ ಇರಲು ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

- ಡಿ.ಪಿ.ಹಮ್ಮಬ್ಬ, ಕುಪ್ಪೆಪದವು ಗ್ರಾಪಂ ಉಪಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X