ಶಾಸಕಾಂಗ ಸಭೆಯ ಬಳಿಕ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಸ್ಥಳಾಂತರ
![ಶಾಸಕಾಂಗ ಸಭೆಯ ಬಳಿಕ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಸ್ಥಳಾಂತರ ಶಾಸಕಾಂಗ ಸಭೆಯ ಬಳಿಕ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಸ್ಥಳಾಂತರ](https://www.varthabharati.in/sites/default/files/images/articles/2019/01/18/173448.jpg)
ಬೆಂಗಳೂರು, ಜ.18: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ವಿಶೇಷ ಸಭೆಯ ಬಳಿಕ ಎಲ್ಲ 76 ಶಾಸಕರನ್ನು ಬಿಡದಿ ಬಳಿಯ ಈಗಲ್ಟನ್ ಹಾಗೂ ವಂಡರ್ಲಾ ರೆಸಾರ್ಟ್ಗೆ ಸ್ಥಳಾಂತರ ಮಾಡಲಾಯಿತು.
ಸಚಿವ ಝಮೀರ್ ಅಹ್ಮದ್ ಖಾನ್ ಒಡೆತನದ ನ್ಯಾಷನಲ್ ಟ್ರಾವಲ್ಸ್ನ ಮೂರು ಬಸ್ಸುಗಳಲ್ಲಿ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರ ಮಾಡಲಾಯಿತು. ಮೂರು ದಿನಗಳ ಕಾಲ ಕಾಂಗ್ರೆಸ್ ಶಾಸಕರು ರೆಸಾರ್ಟ್ನಲ್ಲೆ ತಂಗಲಿದ್ದಾರೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ವತಿಯಿಂದ ಎರಡು ರೆಸಾರ್ಟ್ಗಳಲ್ಲಿ ತಲಾ 30 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿದು ಬಂದಿದ್ದು, ಶಾಸಕರ ಹೊಣೆಗಾರಿಕೆಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ಗೆ ಸಿದ್ದರಾಮಯ್ಯ ವಹಿಸಿದ್ದಾರೆ ಎನ್ನಲಾಗಿದೆ.
Next Story