Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಿತಿಗಳಿಗೆ ಸಾಮಾಜಿಕ-ರಾಜಕೀಯ ಪ್ರಜ್ಞೆ...

ಸಾಹಿತಿಗಳಿಗೆ ಸಾಮಾಜಿಕ-ರಾಜಕೀಯ ಪ್ರಜ್ಞೆ ಬೇಕು: ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ18 Jan 2019 9:29 PM IST
share
ಸಾಹಿತಿಗಳಿಗೆ ಸಾಮಾಜಿಕ-ರಾಜಕೀಯ ಪ್ರಜ್ಞೆ ಬೇಕು: ಬರಗೂರು ರಾಮಚಂದ್ರಪ್ಪ

ಧಾರವಾಡ, ಜ.18: ಸಾಹಿತಿಗಳಿಗೆ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಬೇಕು. ಆಗ ಮಾತ್ರವೆ ಸಾಹಿತ್ಯ ಬರಹಗಳು ಸಮಾನತೆ ಸೌಹಾರ್ದತೆಯ ಜೀವಶಕ್ತಿಯನ್ನು ಪಡೆದುಕೊಳ್ಳುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಿಸಿದರು.

ನಗರದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಮೂರು ದಿನ ಆಯೋಜಿಸಿರುವ ಧಾರವಾಡ ಸಾಹಿತ್ಯ ಸಂಭ್ರಮ-2019ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಪ್ರಜ್ಞೆಯೆಂದರೆ ಜಾತಿವಾದದ ಪರವಾಗಿರುವ ಪ್ರಜ್ಞೆಯಲ್ಲ. ರಾಜಕೀಯ ಪ್ರಜ್ಞೆಯೆಂದರೆ ರಾಜಕೀಯ ಪಕ್ಷವೊಂದರ ಪರವಾದ ಪ್ರಜ್ಞೆಯಲ್ಲ. ವಿವಿಧ ಸಾಮಾಜಿಕ, ರಾಜಕೀಯ ಸೈದ್ಧಾಂತಿಕತೆಗಳನ್ನು ರೂಪಾಂತರಿಸಿಕೊಳ್ಳುವ ಪ್ರಕ್ರಿಯಾತ್ಮಕ ಪ್ರಜ್ಞೆ ನಮಗೆ ಬೇಕು ಎಂದು ಅವರು ಪ್ರತಿಪಾದಿಸಿದರು.

ಕೋಮು ಸೌಹಾರ್ದತೆ ಕದಡುತ್ತಿರುವ ಈ ಕಾಲದಲ್ಲಿ ಕಾಗೆಯ ಕಾರುಣ್ಯವು ಕೋಗಿಲೆಯ ಕಂಠದೊಳಗೆ ಒಂದಾಗಬೇಕು. ಕಾಗೆ-ಕೋಗಿಲೆಗಳ ನೈಸರ್ಗಿಕ ಸಹಜ-ಸೌಂದರ್ಯವು ಸಮಾಜದ ಜೀವಶಕ್ತಿಯಾದಾಗ ಮಾತ್ರವೆ ನಮ್ಮದು ಹೆಮ್ಮೆ ಪಡುವ ನಿಜದ ನಾಡಾಗುತ್ತದೆ ಎಂದು ಅವರು ಆಶಿಸಿದರು.

ಹಿರಿಯ ಸಾಹಿತಿ ನಿರಂಜನರವರ ‘ಚಿರಸ್ಮರಣೆ’, ಬಸವರಾಜ ಕಟ್ಟಿಮನಿ ಅವರ ‘ಜ್ವಾಲಮುಖಿಯ ಮೇಲೆ’ ಕಾದಂಬರಿಗಳ ಗುಣಗಳನ್ನು ಗುರುತಿಸಲು ವಿಮರ್ಶಕರಿಗೆ ದಶಕಗಳೆ ಬೇಕಾದವು. ಅನಕೃ ಅವರಂತಹ ಲೇಖಕರ ಬಗ್ಗೆಯೂ ಅವರ ಬದುಕಿದ್ದಾಗ ಸರಿಯಾದ ವಿಮರ್ಶೆ ಬಂದಿಲ್ಲ. ಪ್ರಗತಿಪರ ವಿಚಾರಧಾರೆಯ ಸಾಹಿತಿ ಮತ್ತು ಸಾಹಿತ್ಯವನ್ನು ಶಿಲ್ಪದ ಮಾನದಂಡ ಮುಖ್ಯ ಮಾಡಿಕೊಂಡು ಹೊರಗಿಟ್ಟ ವಿಮರ್ಶಾವರ್ಣಾಶ್ರಮ ಬಹಳಷ್ಟು ಸಾಹಿತಿಗಳಿಗೆ ಅನ್ಯಾಯ ಮಾಡಿದೆ ಅವರು ವಿಷಾದಿಸಿದರು.

ವಿಮರ್ಶಾವರ್ಣಾಶ್ರಮವು ರಾಷ್ಟ್ರಕವಿ ಕುವೆಂಪುವನ್ನೂ ಬಿಟ್ಟಿಲ್ಲ. ಕುವೆಂಪುರವರ ಶೂದ್ರ ತಪಸ್ವಿ ಕೃತಿಯನ್ನು ಕೆಲವರು ಬ್ರಾಹ್ಮಣ ವಿರೋಧಿ ಎಂಬ ಹಣೆಪಟ್ಟಿ ಕಟ್ಟಿದರು. ಈ ವಾಗ್ವಾದವನ್ನು ಗಮನಿಸುತ್ತಾ ಬಂದ ಕುವೆಂಪು ಶೂದ್ರ ತಪಸ್ವಿ ಮೂರನೆ ಮುದ್ರಣದಲ್ಲಿ ತಮ್ಮ ಕೃತಿಯನ್ನು ವಿಮರ್ಶಕರು ಸರಿಯಾಗಿ ಅರ್ಥ ಮಾಡಿಕೊಳ್ಳಲಿಲ್ಲ. ನನ್ನ ಕೃತಿ ಬ್ರಾಹ್ಮಣ ವಿರೋಧಿ ಅಲ್ಲ; ತಪಸ್ಸು ಎಲ್ಲ ಮಾನವರ ಹಕ್ಕು ಎಂಬ ಸಾಮಾಜಿಕ ಸಿದ್ಧಾಂತವನ್ನು ಸಾಹಿತ್ಯೀಕರಿಸಿದೆ ಎಂದು ಬರೆದುಕೊಂಡಿದ್ದರು ಎಂದು ಅವರು ಸ್ಮರಿಸಿದರು.

ಮರೆಯಾದ ವಾಗ್ವಾದಗಳು: ಗಾಂಧಿಯಲ್ಲಿ ಸಂತನ ಪ್ರಜ್ಞೆ ಹಾಗೂ ಅಂಬೇಡ್ಕರ್ ಅವರಲ್ಲಿ ಸ್ಪೋಟಕ ಗುಣ ಇದ್ದರೂ ಅವರಿಬ್ಬರೂ ಎಂದಿಗೂ ಭಾಷೆಯ ಭ್ರಷ್ಟರಾಗಲಿಲ್ಲ ಹಾಗೂ ಹಿಂಸೆಗೆ ಒಳಪಡಿಸಲಿಲ್ಲ. ಈ ಇಬ್ಬರ ವಾಗ್ವಾದಗಳು ಇಂದು ಆದರ್ಶವಾಗಬೇಕಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X