ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ: ಬಿಎಸ್ ವೈ
ಬೆಂಗಳೂರು, ಜ.19: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನಲ್ಲಿ ಇಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ –ಜೆಡಿಎಸ್ ನಾಯಕರಿಗೆ ಯಾವುದೇ ಭಯ ಬೇಡ ಎಂದು ಹೇಳುವ ಮೂಲಕ ಯಡಿಯೂರಪ್ಪ ಮತ್ತೆ ಹಳೆಯ ಮಾತನ್ನು ಪುನರುಚ್ಚರಿಸಿದ್ದಾರೆ.
ಗುರುಗ್ರಾಮದಿಂದ ಮಧ್ಯಾಹ್ನದೊಳಗೆ ಬಿಜೆಪಿಯ ಎಲ್ಲ ಶಾಸಕರು ವಾಪಸಾಗಲಿದ್ದಾರೆ. ಅವರೆಲ್ಲರಿಗೂ ವಾಪಸಾಗುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಈಗ ನಮ್ಮ ಕೆಲಸ ಬರಗಾಲದಲ್ಲಿರುವವರ ಸಂಕಷ್ಟಗಳಿಗೆ ಸ್ಪಂದಿಸುವುದು. ಪ್ರತಿಪಕ್ಷವಾಗಿ ನಮ್ಮ ಕೆಲಸವನ್ನು ನಾವು ನಿರ್ವಹಿಸುತ್ತೇವೆ ಎಂದು ಯಡಿಯೂರಪ್ಪ ತಮ್ಮ ಜವಾಬ್ದಾರಿಯನ್ನು ನೆನಪಿಸಿಕೊಂಡಿದ್ದಾರೆ.
Next Story