Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಗ್ಗೂಡುವಿಕೆ ಶಕ್ತಿ-ಕ್ರಿಯಾಶೀಲತೆಯಿಂದ...

ಒಗ್ಗೂಡುವಿಕೆ ಶಕ್ತಿ-ಕ್ರಿಯಾಶೀಲತೆಯಿಂದ ಕಂಬಳಕ್ಕೆ ಯಶಸ್ಸು- ಸುಧಾಕರ ಶೆಟ್ಟಿ

ಪುತ್ತೂರು `ಕೋಟಿ-ಚೆನ್ನಯ' ಜೋಡುಕರೆ ಕಂಬಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 Jan 2019 8:59 PM IST
share
ಒಗ್ಗೂಡುವಿಕೆ ಶಕ್ತಿ-ಕ್ರಿಯಾಶೀಲತೆಯಿಂದ ಕಂಬಳಕ್ಕೆ ಯಶಸ್ಸು- ಸುಧಾಕರ ಶೆಟ್ಟಿ

ಪುತ್ತೂರು, ಜ. 19 : ಒಗ್ಗೂಡುವಿಕೆ ಶಕ್ತಿ ಮತ್ತು ಅದರಿಂದ ಲಭಿಸುವ ಕ್ರೀಯಾಶೀಲತೆಯ ಚೈತನ್ಯವಿದ್ದಾಗ ಯಶಸ್ಸು ಲಭಿಸುತ್ತದೆ. ಈ ಮಾದರಿಯಲ್ಲಿ ತುಳುನಾಡಿನ ಶ್ರಮಜೀವಿಗಳ ಹೆಮ್ಮೆಯ ಜನಪದ ಕ್ರೀಡೆಯಾಗಿ ಕಂಬಳ ಜನಪ್ರೀಯತೆ ಗಳಿಸಿದೆ ಎಂದು ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಅವರು ಹೇಳಿದರು.

ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಶನಿವಾರ ಆರಂಭಗೊಂಡ 26 ನೇ ವರ್ಷದ ಐತಿಹಾಸಿಕ ಹೊನಲು ಬೆಳಕಿನ  ಕೋಟಿ -ಚೆನ್ನಯ ಜೋಡುಕರೆ ಕಂಬಳಕ್ಕೆ ಅವರು ಚಾಲನೆ ನೀಡಿದರು.

ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುವ ಕಂಬಳಕ್ಕೆ ಐತಿಹಾಸಿಕ, ಧಾರ್ಮಿಕ ಹಾಗೂ ಕೃಷಿಗೆ ಸಂಬಂಧಪಟ್ಟ ವಿಶೇಷವಿದೆ. ಮಹಾಲಿಂಗೇಶ್ವರನಿಗೆ ಸೇವೆಯನ್ನು ಪಡೆಯುವ ಇಲ್ಲಿನ ಮಣ್ಣಿನ ಗುಣ ಅತ್ಯಂತ ವಿಶೇಷತೆಯನ್ನು ಹೊಂದಿದೆ. ಕಳೆದ 25 ವರ್ಷಗಳಿಂದ ಕಂಬಳ ಕೂಟ ಯಶಸ್ವಿಯಾಗಿ ನಡೆದು ಬಂದಿದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಿರ್ದೇಶಕ ಆ್ಯಂಟನಿ ಪ್ರಕಾಶ್ ಮೊಂತೆರೋ ಅವರು ಮಾತನಾಡಿ, ಕಂಬಳ ಕೇವಲ ಸ್ಪರ್ಧೆಯಲ್ಲ, ನಮ್ಮೊಳಗಿನ ಮನೋಸ್ಥಿತಿ, ಪ್ರೀತಿ, ಸಹಕಾರ, ಬಾಂಧವ್ಯವನ್ನು ವೃದ್ಧಿಸುವ ಮತ್ತು ಎಲ್ಲಕ್ಕಿಂತಲೂ ಮಿಗಿಲಾಗಿ ಮನುಷ್ಯತ್ವ ಬೆಸೆಯುವ ಮಹತ್ವದ ಜನಪದ ಕ್ರೀಡೆ ಎಂದರು.

ಪುತ್ತೂರಿನ ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ವಿಜಯ ಹಾರ್ವಿನ್ ಅವರು ಅಧ್ಯಕ್ಷತೆ ವಹಿಸಿದ್ದರು.ಕೃಷಿ ವರ್ಗದ ನೆಚ್ಚಿನ ಕ್ರೀಡೆಯಾದ ಕಂಬಳಕ್ಕೆ ಜಾತಿ, ಧರ್ಮದ ಮೇರೆ ಇಲ್ಲ. ಎಲ್ಲಾ ವರ್ಗದ ಜನರನ್ನೂ ಒಗ್ಗೂಡಿಸುವ ಶಕ್ತಿ ಕಂಬಳಕ್ಕಿದೆ. ಸಾಮರಸ್ಯವನ್ನು ಬೆಸೆಯುವ ಕಂಬಳಕ್ಕೆ ಪ್ರೋತ್ಸಾಹ ನೀಡಿ ಮುಂದುವರೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.

ವಕೀಲ ನಿರ್ಮಲ್ ಕುಮಾರ್ ಜೈನ್, ವಸಂತ್ ಕುಮಾರ್ ರೈ ಅವರು ಮಾತನಾಡಿದರು. ಕಂಬಳ ಸಮಿತಿ ಕೋಶಾಧಿಕಾರಿ ಪ್ರಸನ್ನ ಪಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್, ಚೆನ್ನಪ್ಪ ರೈ ದೇರ್ಲ, ಸಂಜೀವ ಪೂಜಾರಿ ಕೂರೇಲು, ಗಂಗಾಧರ ಶೆಟ್ಟಿ, ರವೀಂದ್ರ ಶೆಟ್ಟಿ ನುಳಿಯಾಲು, ಕೆ.ಕರುಣಾಕರ ಸುವರ್ಣ, ಸುಂದರೇಶ್ ಅತ್ತಾಜೆ, ಪ್ರವೀಣ್ ಅಳಕೆಮಜಲು, ಸೀತಾರಾಮ ರೈ, ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಎನ್. ಕರುಣಾಕರ ರೈ, ಮಹಾಲಿಂಗ ನಾೈಕ್, ಜಾನು ನಾಯ್ಕ್, ಶಿವರಾಮ ಆಳ್ವ, ಮೋಹನ್ ರೈ ಸೂತ್ರಬೆಟ್ಟು, ಹರೀಶ್ ಶೆಟ್ಟಿ, ಜಯಪ್ರಕಾಶ್ ಬದಿನಾರು, ಭಾಗ್ಯೇಶ್ ರೈ, ದರ್ಣಪ್ಪ ಮೂಲ್ಯ ಕಜೆ, ಕೇಶವ ಬೆದ್ರಾಳ, ಸುನೀಲ್ ಕುಮಾರ್ ಶೆಟ್ಟಿ, ತಾರಾನಾಥ ಶೆಟ್ಟಿ,ಎ.ಕೆ. ಜಯರಾಮ ರೈ, ಕರುಣಾಕರ ಶೆಟ್ಟಿ ಮತ್ತಿತರರು ಇದ್ದರು.

ಕಂಬಳ ಸಮಿತಿಯ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಸಮಿತಿ ಸದಸ್ಯ ಕೃಷ್ಣಪ್ರಸಾದ್ ಆಳ್ವ ವಂದಿಸಿದರು. ಉಪಾಧ್ಯಕ್ಷ ಮಠಂತಬೆಟ್ಟು ನಿರಂಜನ ರೈ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X