Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ ಅಂತಿಮ ದಿನ ಸಮೀಪಿಸಿದೆ:...

ಮೋದಿ ಸರಕಾರದ ಅಂತಿಮ ದಿನ ಸಮೀಪಿಸಿದೆ: ಮಮತಾ ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ19 Jan 2019 9:37 PM IST
share
ಮೋದಿ ಸರಕಾರದ ಅಂತಿಮ ದಿನ ಸಮೀಪಿಸಿದೆ: ಮಮತಾ ಬ್ಯಾನರ್ಜಿ

ಕೊಲ್ಕತಾ,ಜ.19: ಇಲ್ಲಿನ ಬ್ರಿಗೇಡ್ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೆಗಾ ರ್ಯಾಲಿಯಲ್ಲಿ ನೆರೆದಿದ್ದ ಲಕ್ಷಾಂತರ ಜನರ ಮುಂದೆ ವಿರೋಧ ಪಕ್ಷಗಳ ನಾಯಕರು ಜೊತೆಯಾಗಿ ಕಾಣಿಸಿಕೊಂಡು ತಮ್ಮ ಬಲ ಪ್ರದರ್ಶನ ಮಾಡಿದರು. ಈ ವೇಳೆ ಮೋದಿ ಸರಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ರ್ಯಾಲಿಯಲ್ಲಿ 23 ಪಕ್ಷಗಳು ಭಾಗವಹಿಸುತ್ತಿವೆ. ಮೋದಿ ಸರಕಾರದ ಅಂತಿಮ ದಿನಗಳು ಸಮೀಪಿಸಿದೆ ಎಂದು ಗುಡುಗಿದರು.

ಓರ್ವ ಮಾಜಿ ಪ್ರಧಾನ ಮಂತ್ರಿ, ಮೂರು ಮುಖ್ಯಮಂತ್ರಿಗಳು, ಆರು ಮಂದಿ ಮಾಜಿ ಮುಖ್ಯಮಂತ್ರಿಗಳು ಮತ್ತು ಐವರು ಮಾಜಿ ಕೇಂದ್ರ ಸಚಿವರು ಮೆಗಾ ರ್ಯಾಲಿಯಲ್ಲಿ ಭಾಗವಹಿಸಿದ್ದರು. ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಸುಶ್ಮಾ ಸ್ವರಾಜ್ ಮತ್ತು ನಿತಿನ್ ಗಡ್ಕರಿಯಂತವರನ್ನು ಬಿಜೆಪಿ ನಿರ್ಲಕ್ಷಿಸಿದೆ. 2019ರಲ್ಲಿ ಬಿಜೆಪಿ ಗೆದ್ದರೂ ಅದು ಅದನ್ನೇ ಮಾಡಲಿದೆ ಎಂದು ತಿಳಿಸಿದರು. ಬಿಜೆಪಿ ಹಠಾವೊ, ದೇಶ್ ಬಚಾವೊ ಎಂಬ ಘೋಷವಾಕ್ಯದೊಂದಿಗೆ ಬ್ಯಾನರ್ಜಿ ತನ್ನ ಭಾಷಣವನ್ನು ಮುಗಿಸಿದರು. ಗುಜರಾತ್‌ನ ನಾಯಕ ಹಾರ್ದಿಕ್ ಪಟೇಲ್ ಮತ್ತು ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಆರಂಭಿಕ ಭಾಷಣ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗೈರಾಗಿದ್ದರೂ ಇಬ್ಬರು ಪ್ರತಿನಿಧಿಗಳ ಕೈಯಲ್ಲಿ ಬೆಂಬಲ ಪತ್ರವನ್ನು ನೀಡಲಾಗಿತ್ತು. ಬಹುಜನ ಸಮಾಜ ಪಕ್ಷದ ನಾಯಕಿ ಮಾಯವತಿಯೂ ತನ್ನ ಪಕ್ಷದ ಹಿರಿಯ ನಾಯಕ ಸತೀಶ್ ಮಿಶ್ರಾರನ್ನು ರ್ಯಾಲಿಗೆ ಕಳುಹಿಸಿದ್ದರು. ಉಳಿದಂತೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಆಪ್‌ನ ಅರವಿಂದ್ ಕೇಜ್ರಿವಾಲ್, ಡಿಎಂಕೆಯ ಎಂ.ಕೆ ಸ್ಟಾಲಿನ್, ಜೆಡಿಎಸ್‌ನ ಎಚ್.ಡಿ ದೇವೇಗೌಡ ಮತ್ತು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಗೆಗೊಂಗ್ ಅಪಾಂಗ್, ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಉಮರ್ ಅಬ್ದುಲ್ಲ ಮತ್ತು ಅವರ ತಂದೆ ಫಾರೂಕ್ ಅಬ್ದುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿಯ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ, ವಾಜಪೇಯಿ ಸರಕಾರದಲ್ಲಿ ಸಚಿವರಾಗಿದ್ದ ಯಶವಂತ್ ಸಿನ್ಹಾ ಮತ್ತು ಅರುಣ್ ಶೌರಿ ಕೂಡಾ ಮೆಗಾ ರ್ಯಾಲಿಯಲ್ಲಿ ಭಾಗವಹಿಸಿದ್ದರು. ದೇಶವು ಹೊಸ ಪ್ರಧಾನಿಗಾಗಿ ಕಾಯುತ್ತಿದೆ ಎಂದು ಅಖಿಲೇಶ್ ಯಾದವ್ ತಿಳಿಸಿದರೆ ನೀವು ಬಿಜೆಪಿಯನ್ನು  ಉತ್ತರ ಪ್ರದೇಶದಿಂದ ತೊಲಗಿಸಿ ನಾವು ಆ ಕಾರ್ಯವನ್ನು ಪಶ್ಚಿಮ ಬಂಗಾಳದಲ್ಲಿ ಮಾಡುತ್ತೇವೆ ಎಂದು ಬ್ಯಾನರ್ಜಿ ಭರವಸೆ ನೀಡಿದರು.

ತಮಿಳಿನ ಭಾಷಣ ಮಾಡಿದ ಸ್ಟಾಲಿನ್, ಮೋದಿ ದೇಶವನ್ನು ಖಾಸಗಿ ನಿಯಮಿತ ಕಂಪೆನಿಯನ್ನಾಗಿ ಬದಲಾಯಿಸಿದ್ದರು ಮತ್ತು ಅವರು ಅದರ ವ್ಯವಸ್ಥಾನಕ ನಿರ್ದೇಶಕರಾಗಿದ್ದಾರೆ ಎಂದು ತಿಳಿಸುತ್ತಾ, ಮೋದಿಯನ್ನು ಮನೆಗೆ ಕಳುಹಿಸಿ, ದೇಶವನ್ನು ಉಳಿಸಿ ಎಂದು ಜನರಿಗೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X