Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೀನ್ಯದ ಕಾಸ್ಮಸ್ ಪುರುಷರ ಚಾಂಪಿಯನ್

ಕೀನ್ಯದ ಕಾಸ್ಮಸ್ ಪುರುಷರ ಚಾಂಪಿಯನ್

ಮುಂಬೈ ಮ್ಯಾರಥಾನ್: ಅಲೆಮು ಮಹಿಳಾ ವಿಭಾಗದ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ20 Jan 2019 11:56 PM IST
share
ಕೀನ್ಯದ ಕಾಸ್ಮಸ್ ಪುರುಷರ ಚಾಂಪಿಯನ್

ಮುಂಬೈ, ಜ.20: ಟಾಟಾ ಮುಂಬೈ ಮ್ಯಾರಥಾನ್‌ನಲ್ಲಿ ಕೀನ್ಯದ ಕಾಸ್ಮಸ್ ಲಗಾಟ್ ಹಾಗೂ ಇಥಿಯೋಪಿಯದ ವರ್ಕ್‌ನೆಶ್ ಅಲೆಮು ಕ್ರಮವಾಗಿ ಪುರುಷರ ಹಾಗೂ ಮಹಿಳಾ ವಿಭಾಗದ ಚಾಂಪಿಯನ್ ಕಿರೀಟ ಧರಿಸಿದ್ದಾರೆ.

2016ರ ಸೆವಿಲ್ಲಾ ಮ್ಯಾರಥಾನ್ ವಿಜೇತ ಕೀನ್ಯದ ಲಗಾಟ್ ವಾಣಿಜ್ಯ ನಗರಿ ಮುಂಬೈನಲ್ಲಿ ರವಿವಾರ ನಡೆದ 42.195 ಕಿ.ಮೀ. ದೂರದ ಮ್ಯಾರಥಾನ್‌ನಲ್ಲಿ 2 ಗಂಟೆ, 9 ನಿಮಿಷ, 15 ಸೆಕೆಂಡ್‌ನಲ್ಲಿ ಗುರಿ ತಲುಪಿದ್ದಾರೆ. ಇದು 16 ವರ್ಷಗಳ ಇತಿಹಾಸದಲ್ಲಿ ಎರಡನೇ ಶ್ರೇಷ್ಠ ಪ್ರದರ್ಶನವಾಗಿದೆ.

ಲಗಾಟ್ ದೇಶದ ಗಿಡೆಯೊನ್ ಕಿಪ್‌ಕೆಟಾರ್ 2016ರಲ್ಲಿ 2:08:35 ಸೆಕೆಂಡ್‌ನಲ್ಲಿ ಗುರಿ ತಲುಪಿದ ಸಾಧನೆ ಮಾಡಿದ್ದರು. ಪುರುಷರ ಮ್ಯಾರಥಾನ್‌ನಲ್ಲಿ ಇಥಿಯೋಪಿಯದ ಅಚೆವ್ ಬೆಂಟಿ(2:10:05) ಹಾಗೂ ಅಕೆಲ್‌ನ್ಯೂ ಶುಮೆಟ್(2:10:14)ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದಾರೆ.

ಮಹಿಳೆಯರ ಮ್ಯಾರಥಾನ್‌ನಲ್ಲಿ ಇಥಿಯೋಪಿಯದ ಓಟಗಾರ್ತಿಯರು ಪ್ರಾಬಲ್ಯ ಮೆರೆದಿದ್ದು ಮೊದಲ ಮೂರು ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ವರ್ಕ್‌ನೆಶ್ ಅಲೆಮು 2 ಗಂಟೆ, 25 ನಿಮಿಷ, 45 ಸೆಕೆಂಡ್‌ನಲ್ಲಿ ಗುರಿ ತಲುಪಿ ಮೊದಲ ಸ್ಥಾನ ಪಡೆದರು. ಅಮಾನೆ ಗೊಬೆನಾ(2:26:09) ಹಾಗೂ ಬಿರ್ಕ್ ಡೆಬೆಲೆ(2:26:39)ಕ್ರಮವಾಗಿ ಎರಡು ಹಾಗೂ 3ನೇ ಸ್ಥಾನ ಪಡೆದಿದ್ದಾರೆ.

ಸುಧಾ ಸಿಂಗ್‌ಗೆ ಮೊದಲ ಸ್ಥಾನ

ಭಾರತದ ಓಟಗಾರ್ತಿಯರ ಪೈಕಿ ಸುಧಾ ಸಿಂಗ್ ಜೀವನಶ್ರೇಷ್ಠ ಪ್ರದರ್ಶನ (2:34:56)ನೀಡಿ ಮೊದಲ ಸ್ಥಾನ ಪಡೆದರು. ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ನಡೆಯುವ ದೋಹಾ ವರ್ಲ್ಡ್ ಚಾಂಪಿಯನ್‌ಶಿಪ್‌ಗೆ ಐಎಎಎಫ್ ನಿಗದಿಪಡಿಸಿದ ಅರ್ಹತಾ ಸಮಯದೊಳಗೆ(2:37:00)ಗುರಿ ತಲುಪಿದ್ದಾರೆ.

3,000 ಮೀ. ಸ್ಟೀಪಲ್‌ಚೇಸ್ ಸ್ಪೆಷಲಿಸ್ಟ್ ಹಾಗೂ ಎರಡು ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಜಯಿಸಿರುವ ಸುಧಾ ಸಿಂಗ್ ಒಟ್ಟಾರೆ 8ನೇ ಸ್ಥಾನ ಪಡೆದರು. ಮಾಜಿ ಚಾಂಪಿಯನ್ ಡಿಂಕೇಶ್ ಮೆಕಾಶ್‌ರನ್ನು(2:36:31)ಹಿಂದಿಕ್ಕಿದರು. ಮೆಕಾಶ್ 9ನೇ ಸ್ಥಾನ ಪಡೆದಿದ್ದಾರೆ. ಸುಧಾ ಸಿಂಗ್ ಮುಂಬೈ ಮ್ಯಾರಥಾನ್‌ನಲ್ಲಿ ಮೂರನೇ ಬಾರಿ ಶ್ರೇಷ್ಠ ಪ್ರದರ್ಶನ ನೀಡಿದ ಭಾರತದ ಅಥ್ಲೀಟ್ ಎನಿಸಿಕೊಂಡರು. ಈ ಮೂಲಕ ಲಲಿತಾ ಬಬರ್ ದಾಖಲೆಯನ್ನು ಸರಿಗಟ್ಟಿದರು. 2012 ಹಾಗೂ 2014ರ ನಡುವೆ ಲಲಿತಾ ಮೂರು ಬಾರಿ ಮ್ಯಾರಥಾನ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X