ಶಿವಕುಮಾರ ಸ್ವಾಮೀಜಿ ನಿಧನ: ಪ್ರಧಾನಿ ಮೋದಿ ಸಂತಾಪ
![ಶಿವಕುಮಾರ ಸ್ವಾಮೀಜಿ ನಿಧನ: ಪ್ರಧಾನಿ ಮೋದಿ ಸಂತಾಪ ಶಿವಕುಮಾರ ಸ್ವಾಮೀಜಿ ನಿಧನ: ಪ್ರಧಾನಿ ಮೋದಿ ಸಂತಾಪ](https://www.varthabharati.in/sites/default/files/images/articles/2019/01/21/173879.jpg)
ಫೈಲ್ ಚಿತ್ರ
ಹೊಸದಿಲ್ಲಿ, ಜ. 21: ತುಮಕೂರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ.
ಶಿವಕುಮಾರ ಸ್ವಾಮಿಗಳು ಜನರಿಗೋಸ್ಕರ ಅದರಲ್ಲೂ ವಿಶೇಷವಾಗಿ ಬಡವರು ಮತ್ತು ನಿರ್ಗತಿಕರಿಗಾಗಿ ಬದುಕಿದವರು. ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳಂತಹ ಪಿಡುಗುಗಳ ನಿರ್ಮೂಲನೆಗಾಗಿ ಶ್ರೀಗಳು ತಮ್ಮ ಬದುಕನ್ನು ಮುಡುಪಾಗಿಟ್ಟಿದ್ದರು ಎಂದು ಮೋದಿ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
Next Story