Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದ...

ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದ ಗೋಪಿನಾಥ್ ಮುಂಢೆಯವರನ್ನು ಹತ್ಯೆಗೈಯಲಾಯಿತು

ಲಂಡನ್ ಸುದ್ದಿಗೋಷ್ಟಿಯಲ್ಲಿ ಹ್ಯಾಕರ್ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Jan 2019 7:58 PM IST
share
ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದ ಗೋಪಿನಾಥ್ ಮುಂಢೆಯವರನ್ನು ಹತ್ಯೆಗೈಯಲಾಯಿತು

#“ಸರಕಾರದ ಬಣ್ಣ ಬಯಲು ಮಾಡಲು ಮುಂದಾಗಿದ್ದ ಬಿಜೆಪಿ ನಾಯಕ ಮುಂಢೆ”

ಲಂಡನ್, ಜ.21: 2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು ಎನ್ನುವ ವಿಷಯ ತಿಳಿದಿದ್ದ ಕಾರಣ ಬಿಜೆಪಿ ನಾಯಕರೇ ಬಿಜೆಪಿಯ ಹಿರಿಯ ನಾಯಕ ಗೋಪಿನಾಥ್ ಮುಂಢೆಯವರನ್ನು ಹತ್ಯೆಗೈದಿದ್ದಾರೆ ಎಂದು ಅಮೆರಿಕ ಮೂಲದ ಹ್ಯಾಕರ್ ಆರೋಪಿಸಿದ್ದಾರೆ.

ಲಂಡನ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2014ರಲ್ಲಿ ಈ ಬಗ್ಗೆ ತಿಳಿದಿದ್ದ ಬಿಜೆಪಿ ನಾಯಕನನ್ನು ನಾನು ಭೇಟಿಯಾಗಿದ್ದೆ. ಬಿಜೆಪಿ ನಾಯಕರ ಭೇಟಿಯ ನಂತರ ನಮ್ಮ ತಂಡದ ಸದಸ್ಯರೊಬ್ಬರು ದಾಳಿಯೊಂದರಲ್ಲಿ ಮೃತಪಟ್ಟರು. ಗೋಪಿನಾಥ್ ಮುಂಢೆಯವರಿಗೆ ‘ಹ್ಯಾಕಿಂಗ್ ಗೆಲುವಿನ’ ಬಗ್ಗೆ ತಿಳಿದಿತ್ತು. ಅವರು ಸರಕಾರ ಬಣ್ಣ ಬಯಲು ಮಾಡುತ್ತಾರೆಂದು ಅವರನ್ನು ಹತ್ಯೆಗೈಯಲಾಯಿತು” ಎಂದು ಹ್ಯಾಕರ್ ಸೈಯದ್ ಶುಜಾ ಗಂಭೀರ ಆರೋಪ ಮಾಡಿದ್ದಾರೆ.

2014ರಲ್ಲಿ ಜೂನ್ ನಲ್ಲಿ ನಡೆದ ಅಪಘಾತವೊಂದರಲ್ಲಿ ಗೋಪಿನಾಥ್ ಮುಂಢೆ ಮೃತಪಟ್ಟಿದ್ದರು.

2009ರಿಂದ 2014ರವರೆಗೆ ಸೈಯದ್ ಶುಜಾ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿ. ಜೊತೆಗೆ ಕೆಲಸ ಮಾಡಿದ್ದರು ಎಂದವರು ಹೇಳುತ್ತಾರೆ. ನಾಲ್ಕು ದಿನಗ ಹಿಂದೆ ತನ್ನ ಮೇಲೆ ದಾಳಿ ನಡೆದಿತ್ತು ಎಂದವರು ಆರೋಪಿಸಿದ್ದಾರೆ. 2014ರ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳನ್ನು ರಚಿಸಿದ್ದ ತಂಡದಲ್ಲಿ ತಾನೂ ಇದ್ದೆ ಎಂದವರು ಹೇಳಿದ್ದಾರೆ.

ಹೇಗೆ ಹ್ಯಾಕಿಂಗ್ ನಡೆಸಲಾಗುತ್ತದೆ ಎನ್ನುವುದನ್ನು ಎಲ್ಲರಿಗೂ ತೋರಿಸಲು ತಾನು ಬಯಸಿದ್ದೇನೆ ಎಂದವರು ಹೇಳಿದ್ದಾರೆ.

‘ಪ್ರತ್ಯಕ್ಷ ಪ್ರಾತ್ಯಕ್ಷಿಕೆ’ ನೀಡಿದ್ದ ‘ಆಪ್’

2017ರಲ್ಲಿ, ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್, ಯಾವುದೇ ರಾಜಕೀಯ ಪಕ್ಷದ ಪರವಾಗಿ ಮತ ಯಂತ್ರಗಳನ್ನು ಹೇಗೆ ಸಿದ್ಧಗೊಳಿಸಬಹುದು ಎಂಬ ಬಗ್ಗೆ ದಿಲ್ಲಿ ವಿಧಾನಸಭೆಯಲ್ಲಿ ‘ಪ್ರತ್ಯಕ್ಷ ಪ್ರಾತ್ಯಕ್ಷಿಕೆ’ಯನ್ನು ನೀಡಿದ್ದರು.

ಆದರೆ, ಅವರ ವಾದವನ್ನು ಚುನಾವಣಾ ಆಯೋಗ ತಳ್ಳಿಹಾಕಿತ್ತು. ದಿಲ್ಲಿ ವಿಧಾನಸಭೆಯಲ್ಲಿ ಬಳಸಲಾದ ಯಂತ್ರವು ಮತ ಯಂತ್ರದಂತೆ ಕಾಣುವ ಯಂತ್ರವಾಗಿದ್ದು, ತಾನು ಬಳಸುತ್ತಿರುವ ನೈಜ ಯಂತ್ರವಲ್ಲ ಎಂದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X