Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಇವಿಎಂ ಹ್ಯಾಕಿಂಗ್ ಗೂ ಗೌರಿ ಲಂಕೇಶ್...

“ಇವಿಎಂ ಹ್ಯಾಕಿಂಗ್ ಗೂ ಗೌರಿ ಲಂಕೇಶ್ ಹತ್ಯೆಗೂ ಸಂಬಂಧವಿದೆ”

ಲಂಡನ್ ಸುದ್ದಿಗೋಷ್ಟಿಯಲ್ಲಿ ಹ್ಯಾಕರ್ ಶುಜಾ ಹೇಳಿದ ಆರ್ ಟಿಐ ಅರ್ಜಿ ಯಾವುದು?

ವಾರ್ತಾಭಾರತಿವಾರ್ತಾಭಾರತಿ21 Jan 2019 8:14 PM IST
share
“ಇವಿಎಂ ಹ್ಯಾಕಿಂಗ್ ಗೂ ಗೌರಿ ಲಂಕೇಶ್ ಹತ್ಯೆಗೂ ಸಂಬಂಧವಿದೆ”

ಲಂಡನ್, ಜ.21: 2014ರ ಚುನಾವಣೆಯಲ್ಲಿ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು ಎನ್ನುವ ಬಗ್ಗೆ ವರದಿ ಪ್ರಕಟಿಸಲು ಪತ್ರಕರ್ತೆ ಗೌರಿ ಲಂಕೇಶ್ ಸಿದ್ಧರಿದ್ದರು. ಇವಿಎಂಗಳಲ್ಲಿ ಬಳಸಲಾದ ಕೇಬಲ್ ಗಳನ್ನು ಯಾರು ತಯಾರಿಸಿದ್ದರು ಎನ್ನುವುದನ್ನು ತಿಳಿದುಕೊಳ್ಳಲು ಗೌರಿ ಲಂಕೇಶ್ ಆರ್ ಟಿಐ ಅರ್ಜಿ ಸಲ್ಲಿಸಿದ್ದರು. ಆನಂತರ ಅವರನ್ನು ಕೊಲ್ಲಲಾಯಿತು ಎಂದು ಅಮೆರಿಕ ಮೂಲದ ಹ್ಯಾಕರ್ ಸೈಯದ್ ಶುಜಾ ಆರೋಪಿಸಿದ್ದಾರೆ.

ಲಂಡನ್ ನಲ್ಲಿ ಇಂಡಿಯನ್ ಜರ್ನಲಿಸ್ಟ್ ಅಸೋಸಿಯೇಶನ್ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬ್ಲೂಟೂತ್ ಗಳನ್ನು ಬಳಸಿ ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಇವಿಎಂ ಹ್ಯಾಕ್ ಗೆ ಗ್ರಾಫೈಟ್ ಆಧಾರಿತ ಟ್ರಾನ್ಸ್ ಮಿಟರ್ ನ ಅಗತ್ಯವಿದೆ. 2014ರಲ್ಲಿ ಈ ಟ್ರಾನ್ಸ್ ಮಿಟರನ್ನು ಬಳಸಲಾಗಿತ್ತು ಎಂದವರು ಆರೋಪಿಸಿದರು.

ಗ್ರಾಫೈಟ್ ಆಧಾರಿತ ಟ್ರಾನ್ಸ್‌ಮಿಟರ್ ಬಳಸಿ ಕನ್ನ ಹಾಕಲು ಸಾಧ್ಯ

ಇಲೆಕ್ಟ್ರಾನಿಕ್ ಮತಯಂತ್ರವನ್ನು ಬ್ಲೂಟೂತ್ ಬಳಸಿ ತಿರುಚಲು ಸಾಧ್ಯವಿಲ್ಲ; ಇವಿಎಂನ ಒಳಗೆ ಪ್ರವೇಶಿಸಲು ಗ್ರಾಫೈಟ್ ಆಧಾರಿತ ಟ್ರಾನ್ಸ್‌ಮಿಟರ್‌ನ ಅಗತ್ಯವಿದೆ ಎಂದು ಸೈಯದ್ ಶುಜಾ ಹೇಳುತ್ತಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಈ ಟ್ರಾನ್ಸ್‌ಮಿಟರ್‌ಗಳನ್ನು ಬಳಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಮತ ಯಂತ್ರಗಳಲ್ಲಿರುವ ದತ್ತಾಂಶವನ್ನು ತಿರುಚುವುದಕ್ಕಾಗಿ ಒಬ್ಬ ವ್ಯಕ್ತಿ ‘ಪಿಂಗ್’ ಮಾಡುತ್ತಿದ್ದನು ಎಂದು ಅವರು ಹೇಳಿಕೊಂಡಿದ್ದಾರೆ.

 ‘‘ಮತಯಂತ್ರಗಳು ತಂತಿಯಿಲ್ಲದೆ ಸಂವಹನ ನಡೆಸಲಾರವು ಎಂಬುದಾಗಿ ಒಬ್ಬರ ನಂತರ ಒಬ್ಬರಂತೆ ಬಂದದ ಮುಖ್ಯ ಚುನಾವಣಾ ಆಯುಕ್ತರು ನನಗೆ ಹೇಳಿದ್ದಾರೆ. ಆದರೆ, ಕಡಿಮೆ ಫ್ರೀಕ್ವೆನ್ಸಿಯ, ಅಂದರೆ 7 ಹರ್ಟ್ಝ್ ಫ್ರೀಕ್ವೆನ್ಸಿಯ ಮಾಡ್ಯುಲೇಟರ್ ಬಳಸಿ ಇದನ್ನು ಸಾಧಿಸುವ ತಂತ್ರಜ್ಞಾನ ನಮ್ಮಲ್ಲಿದೆ. ಇದು ಸೇನಾ ಮಟ್ಟದ ಫ್ರೀಕ್ವೆನ್ಸಿಯಾಗಿದೆ’’ ಎಂದು ಸೈಯದ್ ಹೇಳಿದ್ದಾರೆ.

ಟ್ರಾನ್ಸ್‌ಮಿಶನ್ ನಿಲ್ಲಿಸಿದಾಗ ‘ಆಪ್’ ಗೆದ್ದಿತು

‘‘ನಾವು ದಿಲ್ಲಿಯಲ್ಲಿ ಟ್ರಾನ್ಸ್‌ಮಿಶನ್ ನಿಲ್ಲಿಸಿದಾಗ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ (ಆಪ್) ವಿಜಯಿಯಾಯಿತು ಎಂದು ಸೈಯದ್ ಶುಜಾ ಹೇಳಿದರು.

 ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗ ಆರಂಭಿಸಿದ ಟ್ರಾನ್ಸ್‌ಮಿಶನನ್ನು ತಡೆಯಲಾಯಿತು ಎಂದರು.

‘‘ಆಮ್ ಆದ್ಮಿ ಪಾರ್ಟಿಗೆ ಸಹಾಯವಾಗುವಂತೆ ನಾವು ಫ್ರೀಕ್ವೆನ್ಸಿಯನ್ನು ಬದಲಾಯಿಸಿದೆವು. ವಾಸ್ತವಿಕ ಫಲಿತಾಂಶವು 2009ರ ಚುನಾವಣಾ ಫಲಿತಾಂಶವನ್ನು ಹೋಲುತ್ತಿತ್ತು’’ ಎಂದು ಅವರು ಹೇಳಿದರು.

2008 ಅಕ್ಟೋಬರ್ 29ರಂದು ದಿಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ, 70 ಸ್ಥಾನಗಳ ಪೈಕಿ ಕಾಂಗ್ರೆಸ್ 43, ಬಿಜೆಪಿ 23, ಬಹುಜನ ಸಮಾಜ ಪಕ್ಷ 2, ಲೋಕಜನ ಶಕ್ತಿ ಪಕ್ಷ ಮತ್ತು ಪಕ್ಷೇತರರು ತಲಾ ಒಂದು ಸ್ಥಾನಗಳನ್ನು ಗೆದ್ದಿದ್ದಾರೆ.

ನಮ್ಮ ಕಡಿಮೆ ಫ್ರೀಕ್ವೆನ್ಸಿ ಟ್ರಾನ್ಸ್‌ಮಿಶನನ್ನು ತಡೆಯಲೂ ಅವರು ಪ್ರಯತ್ನಿಸಿದರು ಎಂದು ಸೈಯದ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X