Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿರತೆ ಚರ್ಮ ಮಾರಾಟ ಪ್ರಕರಣ: 10 ಮಂದಿ...

ಚಿರತೆ ಚರ್ಮ ಮಾರಾಟ ಪ್ರಕರಣ: 10 ಮಂದಿ ಸೆರೆ; ಐವರು ಭಟ್ಕಳದವರು

ವಾರ್ತಾಭಾರತಿವಾರ್ತಾಭಾರತಿ21 Jan 2019 9:19 PM IST
share
ಚಿರತೆ ಚರ್ಮ ಮಾರಾಟ ಪ್ರಕರಣ: 10 ಮಂದಿ ಸೆರೆ; ಐವರು ಭಟ್ಕಳದವರು

ಭಟ್ಕಳ, ಜ. 21: ಅಕ್ರಮವಾಗಿ ಚಿರತೆ ಚರ್ಮವನ್ನು ಮಾರಾಟ ಮಾಡಲು ಪ್ರಯತ್ನಿಸಿದ್ದ ವೇಳೆ ಬೆಂಗಳೂರು ಸಿಐಡಿ ಅರಣ್ಯ ಘಟಕದಿಂದ ಬಂಧಿತರಾಗಿರುವ 10 ಆರೋಪಿಗಳಲ್ಲಿ ಐವರು ಭಟ್ಕಳದವರು ಎಂಬ ಮಾಹಿತಿ ಲಭ್ಯವಾಗಿದೆ.

ಬಂಧಿತ ಆರೋಪಿಗಳನ್ನು ಜಿಲ್ಲೆಯ ಮುಂಡಗೋಡ ತಾಲೂಕಿನ ಸೂರಜ್ ತಂದೆ ಸಾಮ್ಯಯೆಲ್ (34), ಭಟ್ಕಳ ತಾಲೂಕಿನ ಸಾಗರ ರೋಡ್ ಕಡವಿನಕಟ್ಟೆ ನಿವಾಸಿ ರಘು, ರಂಗೀಕಟ್ಟೆಯ ಮೋಹನ ಜಿ. ನಾಯ್ಕ (24), ಹಾಡುವಳ್ಳಿಯ ನಾಗರಾಜ್ ತಂದೆ ವೆಂಕಟೇಶ ನಾಯ್ಕ, ಬೆಂಗ್ರೆ ಚಿಂಗಾರಮಕ್ಕಿ ನಿವಾಸಿ ಪ್ರವೀಣ್ ರಾಮಾ ದೇವಡಿಗ, ತಾಲೂಕಿನ ಸೋನಾರಕೇರಿಯ ಸುಬ್ರಹ್ಮಣ್ಯ ಸದಾನಂದ ರಾಯ್ಕರ್ (34), ಕುಂದಾಪುರ ತಾಲೂಕಿನ ಬೈಂದೂರು ಮಯ್ಯಾಡಿ ಗ್ರಾಮದ ನಾಗರಾಜ್ ತಂದೆ ಶ್ರೀಧರ್, ಬೈಂದೂರು ತಗ್ಗರ್ಸೆ ಕಂಬಳಗದ್ದೆ ರಸ್ತೆ ನಿವಾಸಿ ಸಂಜೀವ ತಮ್ಮಯ್ಯ ಪೂಜಾರಿ (35), ವಿರೇಂದ್ರ ರಾಮಯ್ಯ ಶೆಟ್ಟಿ (35), ಹೊನ್ನಾವರ ಮಾಗೋಡು ಮೂಲದ ಜಾಸ್ವನ್ ಪೌಲ್ (32) ಎಂದು  ಗುರುತಿಸಲಾಗಿದೆ.

ಸಿಐಡಿ ಅರಣ್ಯ ಘಟಕ ಬೆಂಗಳೂರು ಘಟಕ ಇದರ ಡಿವಾಯ್‍ಎಸ್ಪಿ ಎಸ್.ಎಸ್.ಕಾಶಿ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್‍ಗಳಾದ ಎಚ್.ಕೆ.ರವಿಕುಮಾರ್, ಎಮ್.ಎಸ್.ರಾಮಮೂರ್ತಿ, ಸಿಬ್ಬಂದಿಗಳಾದ ಬಿ.ಎಚ್.ಹೇಮಕುಮಾರ್, ಬಿ.ವಿ.ಪರಮೇಶ್ ಆರೋಪಿಗಳೊಂದಿಗೆ ಗ್ರಾಹಕರ ಸೋಗಿನಲ್ಲಿ ಮಾತನಾಡಿ ವ್ಯವಹಾರ ಕುದುರಿಸಿ ಕುಂದಾಪುರದ ಶಾಸ್ತ್ರೀ ಸರ್ಕಲ್‍ಗೆ ಬರ ಹೇಳಿದ್ದರು.

ಆರೋಪಿಗಳು ಒಂದು ಹೊಂಡಾ ಮೇಜ್ ಮತ್ತು ಮಾರುತಿ 800 ಕಾರಿನಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಗಮಿಸುತ್ತಿದ್ದಂತೆಯೇ ಅಧಿಕಾರಿಗಳು ಅವರನ್ನು ಹಿಡಿಯಲು ಮುಂದಾದರು. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದರಾದರೂ ಸಫಲರಾಗಿಲ್ಲ ಎಂದು ತಿಳಿದು ಬಂದಿದೆ.

ವಶಪಡಿಸಿಕೊಳ್ಳಲಾದ ಚಿರತೆಯ ಚರ್ಮ ಸುಮಾರು 4 ವರ್ಷ ಪ್ರಾಯದ ಚಿರತೆಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಕುಂದಾಪುರ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಸಿಐಡಿ ಅಧಿಕಾರಿಗಳು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 3 ಪ್ರಕರಣಗಳನ್ನು ದಾಖಲಿಸಿದ್ದು, ಸ್ಥಳೀಯ ಅರಣ್ಯ ಇಲಾಖೆಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X