ಶಿವಕುಮಾರ ಸ್ವಾಮೀಜಿ ನಿಧನ: ಬಿಜೆಪಿ ‘ಬರ’ ಅಧ್ಯಯನ ಪ್ರವಾಸ ಮುಂದೂಡಿಕೆ
ಬೆಂಗಳೂರು, ಜ. 21: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಕೈಗೊಳ್ಳಬೇಕಿದ್ದ ಬರ ಪೀಡಿತ ಪ್ರದೇಶಗಳ ಪ್ರವಾಸವನ್ನು ಮುಂದೂಡಿಕೆ ಮಾಡಲಾಗಿದೆ.
ಯಡಿಯೂರಪ್ಪ ತುಮಕೂರಿಗೆ ಭೇಟಿ ನೀಡಲಿದ್ದು, ಅಲ್ಲಿಯೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷರು ಎರಡು ದಿನಗಳ ಬರ ಪೀಡಿತ ಪ್ರದೇಶಗಳ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
Next Story