Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಪತ್ತೆ ಬೋಟಿಗಾಗಿ ಮಹಾರಾಷ್ಟ್ರ...

ನಾಪತ್ತೆ ಬೋಟಿಗಾಗಿ ಮಹಾರಾಷ್ಟ್ರ ಬಂದರುಗಳಲ್ಲಿ ಶೋಧ: ಕಾರ್ಯಾಚರಣೆ ಬಗ್ಗೆ ಪೊಲೀಸ್ ತಂಡದಲ್ಲಿದ್ದ ಮೀನುಗಾರರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ21 Jan 2019 10:51 PM IST
share
ನಾಪತ್ತೆ ಬೋಟಿಗಾಗಿ ಮಹಾರಾಷ್ಟ್ರ ಬಂದರುಗಳಲ್ಲಿ ಶೋಧ: ಕಾರ್ಯಾಚರಣೆ ಬಗ್ಗೆ ಪೊಲೀಸ್ ತಂಡದಲ್ಲಿದ್ದ ಮೀನುಗಾರರ ಅಸಮಾಧಾನ

ಮಲ್ಪೆ, ಜ.21: ಬೋಟು ಸಹಿತ ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣ ಸಂಬಂಧ ಮಹಾರಾಷ್ಟ್ರ ಬಂದರುಗಳನ್ನು ಸಂಪರ್ಕಿಸುವ ನದಿಗಳಲ್ಲಿ ನಡೆದ ಪೊಲೀಸ್ ಹಾಗೂ ಕೋಸ್ಟ್ ಗಾರ್ಡ್ ಶೋಧ ಕಾರ್ಯಾಚರಣೆ ಬಗ್ಗೆ ತಂಡದಲ್ಲಿದ್ದ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುವರ್ಣ ತ್ರಿಭುಜ ಬೋಟು ಸಂಪರ್ಕ ಕಡಿದುಕೊಂಡು ಕಣ್ಮರೆಯಾದ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರು ದಿನ ನಾಪತ್ತೆಯಾದ ಕುಟುಂಬಕ್ಕೆ ಸೇರಿದ ಒಂಭತ್ತು ಮಂದಿ ಮೀನುಗಾರರನ್ನು ಒಳಗೊಂಡ ಪೊಲೀಸ್ ತಂಡಗಳು ಹುಡುಕಾಟಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳಿತ್ತು. ಇದರಲ್ಲಿ ಇಬ್ಬರು ಕಾರಾವರ ಪೊಲೀಸರು ಇದ್ದರೆನ್ನಲಾಗಿದೆ.

ಮಹಾರಾಷ್ಟ್ರ ರಾಜ್ಯದ ಸಿಂಧುದುರ್ಗ ಜಿಲ್ಲೆಯಲ್ಲಿ ತಲಾ ಮೂವರು ಮೀನುಗಾರರನ್ನೊಳಗೊಂಡ ಮೂರು ಪೊಲೀಸ್ ತಂಡ ವಿಭಾಗಗಳನ್ನಾಗಿ ರಚಿಸಿ ವೆಂಗುರ್ಲ ಪ್ರಮುಖ ಬಂದರಿನ ಮೂಲಕ ಕಿರಣ್‌ಪನಿ, ರೇಡಿ, ನಿವಾಟಿ, ಮಾಲ್ವನ್ ಪ್ರಮುಖ ಬಂದರಿನ ಮೂಲಕ ಅಚೀರಾ, ದೇವಘಡ ಬಂದರಿನ ಮೂಲಕ ವಿಜಯದುರ್ಗ ಬಂದರುಗಳ ನದಿಗಳಲ್ಲಿ ಸುಮಾರು 200-500 ಮೀಟರ್ ವರೆಗೆ ಹುಡುಕಾಟ ನಡೆಸಲಾಗಿತ್ತು. ಮರುದಿನ ಕಲಸೆ ಬಂದರಿ ನಲ್ಲಿ ಎರಡು ತಂಡಗಳು ಶೋಧ ಕಾರ್ಯ ನಡೆಸಿದ್ದವು.

ಅದಕ್ಕಾಗಿ ಎರಡು ಕೋಸ್ಟ್‌ಗಾರ್ಡ್ ಬೋಟು ಹಾಗೂ ಒಂದು ಆಳ ಸಮುದ್ರ ಮೀನುಗಾರಿಕಾ ಬೋಟುಗಳನ್ನು ಬಳಸಿಕೊಳ್ಳಲಾಗಿತ್ತು. ಹೀಗೆ ಆರು ದಿನಗಳ ಕಾಲ ಈ ಎಲ್ಲ ಬಂದರು ಹಾಗೂ ನದಿಗಳಲ್ಲಿ ಸುವರ್ಣ ತ್ರಿಭುಜ ಬೋಟಿಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ತಂಡಕ್ಕೆ ಯಾವುದೇ ಸುಳಿವು ದೊರೆತಿಲ್ಲ ಎನ್ನುತ್ತಾರೆ ತಂಡದಲ್ಲಿದ್ದ ಮೀನುಗಾರರು.

ಅದೇ ರೀತಿ ಡಿ.27ರಂದು ಏಳು ಮಂದಿ ಮೀನುಗಾರರನ್ನೊಳಗೊಂಡ ಪೊಲೀಸ್ ತಂಡ ಗೋವಾಕ್ಕೆ ತೆರಳಿ ಅಲ್ಲಿ ಬೈತುಲ್, ಪಣಜಿ, ವಾಸ್ಕೋ ಬಂದರುಗಳಲ್ಲಿ ಹುಡುಕಾಟ ನಡೆಸಿತ್ತು. ಇಲ್ಲಿ ಕೂಡ ಯಾವುದೇ ಸುಳಿವು ಲಭಿಸದೆ ತಂಡ ವಾಪಾಸ್ಸು ಬಂದಿತ್ತು. ಈ ಕಾರ್ಯಾಚರಣೆ ಬಗ್ಗೆ ಅತೃಪ್ತಿ ವ್ಯಕ್ತ ಪಡಿಸಿರುವ ಮೀನುಗಾರರು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕಾಗಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅಪಹರಣದ ಬಗ್ಗೆ ಬಲವಾದ ಸಂಶಯ ಹೊಂದಿರುವ ಮಲ್ಪೆಯ ಮೀನುಗಾರರು, ಮಹಾರಾಷ್ಟ್ರದ ಬಂದರುಗಳ ನದಿಯನ್ನು ಸಂಪೂರ್ಣ ಶೋಧ ನಡೆಸು ವಲ್ಲಿ ಪೊಲೀಸ್ ಹಾಗೂ ಕೋರ್ಸ್ಟ್ ಗಾರ್ಡ್ ತಂಡಗಳು ವಿಫಲವಾಗಿವೆ ಎಂದು ಆರೋಪಿಸುತ್ತಾರೆ. ಮಹಾರಾಷ್ಟ್ರದ ಮೀನುಗಾರರು ನಮ್ಮವರನ್ನು ಅಪಹರಿಸಿ ಬೋಟನ್ನು ಬಂದರುಗಳನ್ನು ಸಂಪರ್ಕಿಸುವ ನದಿಯಲ್ಲಿ ಇಟ್ಟಿದ್ದಾರೆ. ಆದುದರಿಂದ ನದಿಗಳಲ್ಲಿ ಹುಡುಕುವ ಕೆಲಸ ಆಗಬೇಕು. ಕೇವಲ 500 ಮೀಟರ್‌ವರೆಗೆ ಹುಡುಕಿದರೆ ಯಾವುದೇ ಸುಳಿವು ಸಿಗುವುದಿಲ್ಲ ಎಂದು ತಂಡದಲ್ಲಿದ್ದ ಮೀನುಗಾರರು ಅಸಮಾಧಾನವನ್ನು ಹೊರ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X