Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2014ರಲ್ಲಿ ಇವಿಎಂ ಹ್ಯಾಕ್ ಆಗಿತ್ತು ಎಂಬ...

2014ರಲ್ಲಿ ಇವಿಎಂ ಹ್ಯಾಕ್ ಆಗಿತ್ತು ಎಂಬ ಹೇಳಿಕೆ: ಸೈಬರ್ ‌ತಜ್ಞನ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Jan 2019 8:29 PM IST
share
2014ರಲ್ಲಿ ಇವಿಎಂ ಹ್ಯಾಕ್ ಆಗಿತ್ತು ಎಂಬ ಹೇಳಿಕೆ: ಸೈಬರ್ ‌ತಜ್ಞನ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚನೆ

ಹೊಸದಿಲ್ಲಿ,ಜ.22: ಮತಯಂತ್ರಗಳನ್ನು (ಇವಿಎಂ) ತಿರುಚಬಹುದು ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಕಳ್ಳಮತದಾನ ನಡೆದಿತ್ತು ಎಂದು ಹೇಳಿಕೆ ನೀಡಿರುವ ಸ್ವಯಂಘೋಷಿತ ಸೈಬರ್ ಪರಿಣತನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿ ಪೊಲೀಸರಿಗೆ ಚುನಾವಣಾ ಆಯೋಗ ಸೂಚಿಸಿದೆ.

ಸೈಬರ್ ತಜ್ಞನ ಹೇಳಿಕೆ ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸುವ ಸಾಧ್ಯತೆಯಿದೆ ಎಂದು ಆಯೋಗ ತಿಳಿಸಿದೆ. ಈ ರೀತಿ ಹೇಳಿಕೆ ನೀಡುವ ಮೂಲಕ, ಸುಳ್ಳುಸುದ್ದಿಗಳನ್ನು ಹರಡುವ ವಿರುದ್ಧ ಶಿಕ್ಷೆ ನೀಡುವ ಭಾರತೀಯ ದಂಡ ಸಂಹಿತೆಯ ಕೆಲವು ವಿಧಿಗಳನ್ನು ಮತ್ತು ಸಂಬಂಧಿತ ಇತರ ಕಾನೂನುಗಳನ್ನು ಉಲ್ಲಂಘಿಸಿರುವ ಬಗ್ಗೆ ತನಿಖೆ ನಡೆಸುವಂತೆ ಹೊಸದಿಲ್ಲಿಯ ಪೊಲೀಸ್ ಸಹಾಯಕ ಆಯುಕ್ತರಿಗೆ ನೀಡಿದ ದೂರಿನಲ್ಲಿ ಆಯೋಗ ಮನವಿ ಮಾಡಿದೆ.

“ನಾನು ಇವಿಎಂ ವಿನ್ಯಾಸಗೊಳಿಸಿದ ತಂಡದಲ್ಲಿದ್ದೆ ಮತ್ತು ಭಾರತದಲ್ಲಿ ಚುನಾವಣೆಗಳಲ್ಲಿ ಉಪಯೋಗಿಸಲಾದ ಇವಿಎಂಗಳನ್ನು ನಾನು ತಿರುಚಬಲ್ಲೆ ಎಂದು ಸೈಯದ್ ಶುಜಾ ಎಂಬವರು ಜನವರಿ 21ರಂದು ಲಂಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿಕೊಂಡಿರುವುದು ಆಯೋಗದ ಗಮನಕ್ಕೆ ಬಂದಿದೆ. ಶುಜಾ ಅವರ ಹೇಳಿಕೆ ಐಪಿಸಿ ಸೆಕ್ಷನ್ 505(1)(ಬಿ)ಯ ಉಲ್ಲಂಘನೆಯಾಗಿದೆ ಎಂದು ಆಯೋಗ ತಿಳಿಸಿದೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಇವಿಎಂಗಳನ್ನೇ ಉಪಯೋಗಿಸುತ್ತಾ ಬರಲಾಗುತ್ತಿದ್ದು ಇದರ ಬಳಕೆಯನ್ನು ಸರ್ವೋಚ್ಚ ನ್ಯಾಯಾಲಯ ಹಾಗೂ ಇತರ ಹಲವು ಉನ್ನತ ನ್ಯಾಯಾಲಯಗಳು ತಮ್ಮ ತೀರ್ಪಿನ ಮೂಲಕ ಸಮರ್ಥಿಸಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಯಂತ್ರಗಳನ್ನು ತಿರುಚಬಹುದು ಎಂದು ಸೋಮವಾರ ಸೈಯದ್ ಶುಜಾ ನೀಡಿದ ಹೇಳಿಕೆಯ ಹಿನ್ನೆಲೆಯಲ್ಲಿ, ತಾನು ಭಾರತದ ಇವಿಎಂಗಳು ಸುಭದ್ರವಾಗಿವೆ ಎಂಬ ಹಿಂದಿನ ಹೇಳಿಕೆಗೆ ಬದ್ಧವಾಗಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ನಾನು ಇವಿಎಂಗಳನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸುವ ಭಾರತೀಯ ಇಲೆಕ್ಟ್ರಾನಿಕ್ ನಿಗಮ ನಿಯಮಿತ (ಇಸಿಐಎಲ್)ನ ತಂಡದ ಸದಸ್ಯನಾಗಿದ್ದೆ ಎಂದು ಶುಜ ತಿಳಿಸಿದ್ದರು. ಭಾರತೀಯ ಪತ್ರಕರ್ತರ ಸಂಘ (ಯೂರೋಪ್) ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದ್ದರು. ಆದರೆ ಅವರ ಹೇಳಿಕೆಯನ್ನು ದೃಢಪಡಿಸಲಾಗಿಲ್ಲ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X