Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ನೆರೆ ಪರಿಹಾರ ನಿಧಿಗೆ ನೀಡಿದ್ದ...

ಕೇರಳ ನೆರೆ ಪರಿಹಾರ ನಿಧಿಗೆ ನೀಡಿದ್ದ 3.26 ಕೋಟಿ ರೂ. ಮೊತ್ತದ ಚೆಕ್ ಬೌನ್ಸ್ !

ವಾರ್ತಾಭಾರತಿವಾರ್ತಾಭಾರತಿ22 Jan 2019 9:36 PM IST
share
ಕೇರಳ ನೆರೆ ಪರಿಹಾರ ನಿಧಿಗೆ ನೀಡಿದ್ದ 3.26 ಕೋಟಿ ರೂ. ಮೊತ್ತದ ಚೆಕ್ ಬೌನ್ಸ್ !

ತಿರುವನಂತಪುರಂ, ಜ.22: ಕಳೆದ ವರ್ಷ ಕೇರಳದಲ್ಲಿ ಸಂಭವಿಸಿದ ನೆರೆಹಾವಳಿಯಿಂದ ಸಂತ್ರಸ್ತರಾದವರಿಗೆ ಹಲವೆಡೆಗಳಿಂದ ನೆರವಿನ ಕೊಡುಗೆ ಬಂದಿತ್ತು. ಆದರೆ ನೈಸರ್ಗಿಕ ವಿಪತ್ತಿನಂತಹ ಘಟನೆಗಳು ಸಂಭವಿಸಿದಾಗ ಪರಿಹಾರ ನಿಧಿಗೆ ದೇಣಿಗೆ ನೀಡುವುದರಲ್ಲೂ ಪ್ರಚಾರ ಗಿಟ್ಟಿಸಿಕೊಳ್ಳುವ ಚಾಳಿ ಕೆಲವರಲ್ಲಿದೆ ಎಂಬುದು ಇದೀಗ ದೃಢಪಟ್ಟಿದೆ.

ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿ(ಸಿಎಂಡಿಆರ್‌ಎಫ್)ಗೆ ನೀಡಲಾಗಿರುವ 3.26 ಕೋಟಿ ರೂ. ಮೊತ್ತದ ಚೆಕ್ ಹಾಗೂ ಡಿಡಿಗಳು (ಹಣವಿಲ್ಲದ ಕಾರಣ)ಬ್ಯಾಂಕ್‌ಗಳಿಂದ ತಿರಸ್ಕೃತಗೊಂಡಿವೆ. ಮಂಗಳವಾರ ಕೇರಳ ವಿಧಾನಸಭೆಯಲ್ಲಿ ಕಾಸರಗೋಡು ಶಾಸಕ ಎನ್‌ಎ ನೆಲ್ಲಿಕುನ್ನು ಎತ್ತಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, 395 ಚೆಕ್ ಹಾಗೂ ಡಿಡಿಗಳು ಬ್ಯಾಂಕ್‌ನಿಂದ ತಿರಸ್ಕೃತಗೊಂಡಿವೆ ಎಂದು ತಿಳಿಸಿದ್ದಾರೆ.

2018ರ ನವೆಂಬರ್ 30ರವರೆಗೆ ಪರಿಹಾರ ನಿಧಿಗೆ ಒಟ್ಟು 2,797.67 ಕೋಟಿ ರೂ. ಕೊಡುಗೆ ಬಂದಿದೆ. ಇದರಲ್ಲಿ ಆನ್‌ಲೈನ್ ವರ್ಗಾವಣೆಯ ಮೂಲಕ 260.45 ಕೋಟಿ ರೂ. , ನಗದು, ಚೆಕ್ ಹಾಗೂ ಡಿಡಿ ಮೂಲಕ 2,537.22 ಕೋಟಿ ರೂ. ಬಂದಿದೆ. ಇದರಲ್ಲಿ 7.47 ಕೋಟಿ ರೂ.ಮೊತ್ತದ ಕೊಡುಗೆ ಚೆಕ್ ಮೂಲಕ ಸಂದಿದೆ. ಆದರೆ ಇದರಲ್ಲಿ 3.26 ಕೋಟಿ ರೂ. ಮೊತ್ತದ ಚೆಕ್, ಡಿಡಿ ಬ್ಯಾಂಕ್‌ನಿಂದ ತಿರಸ್ಕೃತಗೊಂಡಿವೆ. ಇತ್ತೀಚಿನ ಅಂಕಿಅಂಶದ ಪ್ರಕಾರ ನೆರೆ ಪರಿಹಾರ ನಿಧಿಗೆ ಒಟ್ಟು 3226.21 ಕೋಟಿ ರೂ. ಸಂದಾಯವಾಗಿದ್ದರೆ, 1199.69 ಕೋಟಿ ರೂ. ವೆಚ್ಚವಾಗಿದೆ.

ಪರಿಹಾರ ನಿಧಿಯಿಂದ 7.37 ಲಕ್ಷ ಜನ ತಕ್ಷಣದ ಫಲಾನುಭವಿಗಳಾಗಿದ್ದು, ಇವರಿಗೆ ಒಟ್ಟು 457.30 ಕೋಟಿ ರೂ. ಪರಿಹಾರ ನೀಡಲಾಗಿದೆ. ಮನೆಗೆ ಹಾನಿಯಾದ 2,43,207 ಕುಟುಂಬಗಳಿಗೆ ತಮ್ಮ ಮನೆಯನ್ನು ಪುನನಿರ್ಮಿಸಿಕೊಳ್ಳಲು ಒಟ್ಟು 1,256.55 ಕೋಟಿ ರೂ. ನೀಡಲಾಗಿದೆ. ನೆರವು ಪಡೆದ ಜಿಲ್ಲೆಗಳಲ್ಲಿ ಎರ್ನಾಕುಳಂ , ಅಳಪ್ಪುಝ, ಹಾಗೂ ತ್ರಿಶ್ಯೂರ್ ಮೊದಲ ಮೂರು ಸ್ಥಾನದಲ್ಲಿವೆ. ಈ ಮಧ್ಯೆ, ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಯ ನಿರ್ವಹಣೆಯಲ್ಲಿ ಅವ್ಯವಸ್ಥೆಯ ಕುರಿತು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಿ.ಕುರಿಯಾಕೋಸ್, ಕೆಪಿ ಬಾಲಚಂದ್ರನ್ ಹಾಗೂ ಎಕೆ ಬಶೀರ್ ಅವರನ್ನು ಹೊಂದಿರುವ ಲೋಕಾಯುಕ್ತ ಪೀಠವು ಕಳೆದ ವಾರ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರಿಗೆ ನೋಟಿಸ್ ಜಾರಿಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X