Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮ್ಯಾನ್ಮಾರ್‌ಗೆ ಕಳಿಸಬೇಡಿ, ಅವರು...

ಮ್ಯಾನ್ಮಾರ್‌ಗೆ ಕಳಿಸಬೇಡಿ, ಅವರು ನಮ್ಮನ್ನು ಕೊಲ್ಲುತ್ತಾರೆ

ತ್ರಿಪುರದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ರೊಹಿಂಗ್ಯಾಗಳ ಅಳಲು

ವಾರ್ತಾಭಾರತಿವಾರ್ತಾಭಾರತಿ22 Jan 2019 10:44 PM IST
share
ಮ್ಯಾನ್ಮಾರ್‌ಗೆ ಕಳಿಸಬೇಡಿ, ಅವರು ನಮ್ಮನ್ನು ಕೊಲ್ಲುತ್ತಾರೆ

ಅಗರ್ತಲ, ಜ.22: ಮನೆ, ಮಠ ಎಲ್ಲವನ್ನೂ ಕಳೆದುಕೊಂಡು, ಮೂರು ದೇಶಗಳ (ಭಾರತ, ಬಾಂಗ್ಲಾ ಮತ್ತು ಮ್ಯಾನ್ಮಾರ್) ಪೊಲೀಸ್ ಚೆಕ್‌ಪೋಸ್ಟ್ ಹಾಗೂ ಪೊಲೀಸರ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳುತ್ತಾ ಅಲೆಮಾರಿಗಳಂತೆ ಜೀವನ ಸಾಗಿಸುತ್ತಿರುವ ಸುಮಾರು 2 ಸಾವಿರ ರೊಹಿಂಗ್ಯಾಗಳು ಇದೀಗ ತ್ರಿಪುರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.

ತಮ್ಮ ಅತಂತ್ರ ಬದುಕಿನ ಬಗ್ಗೆ ವಿವರಿಸುವ ಅಬ್ದುಲ್ ಶುಕೂರ್, ಮುಹಮ್ಮದ್ ಶಹಜಹಾನ್ ಹಾಗೂ ಇತರ ರೊಹಿಂಗ್ಯಾ ಜನತೆ, “ದಯವಿಟ್ಟು ನಮ್ಮನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಬೇಡಿ. ಅಲ್ಲಿಗೆ ಹೋದರೆ ಅವರು ನಮ್ಮನ್ನು ಕೊಲ್ಲದೆ ಇರುವುದಿಲ್ಲ” ಎಂದು ಕಣ್ಣೀರು ಹಾಕುತ್ತಾರೆ. ಮ್ಯಾನ್ಮಾರ್‌ನ ರಖೈನ್ ರಾಜ್ಯದ ನಿವಾಸಿಗಳಾಗಿದ್ದ ತಾವು ಸುಮಾರು 6 ವರ್ಷದ ಹಿಂದೆ ಅಲ್ಲಿ ತಮ್ಮ ವಿರುದ್ಧ ನಡೆದ ಹಿಂಸಾಚಾರದಿಂದ ಕಂಗೆಟ್ಟು ಪಶ್ಚಿಮ ಬಂಗಾಳ ವಲಯದಲ್ಲಿ ಭಾರತದ ಗಡಿ ದಾಟಿ ಒಳನುಸುಳಿ ಜಮ್ಮುವಿಗೆ ತೆರಳಿ ಅಲ್ಲಿ ನಿರ್ಮಾಣ ಕಾಮಗಾರಿಗಳಲ್ಲಿ , ಮೊಬೈಲ್ ಫೋನ್ ಟವರ್ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದೆವು. ಆದರೆ ಇತ್ತೀಚೆಗೆ ಸರಕಾರ ಮತ್ತು ಸ್ಥಳೀಯ ಜನತೆ ತಮಗೆ ಉಗ್ರರ ಹಣೆಪಟ್ಟಿ ಹಚ್ಚಿ ತಮ್ಮನ್ನು ಅಲ್ಲಿಂದ ಓಡಿಸಲು ಮುಂದಾಗಿದೆ. ಅಲ್ಲಿನ ಅಸಹಿಷ್ಣುತೆ ಮತ್ತು ಜನರ ಬೆದರಿಕೆಗೆ ಅಂಜಿ ಅಲ್ಲಿಂದ ಸುಮಾರು 1,500 ಮಂದಿ ತ್ರಿಪುರಾಕ್ಕೆ ಓಡಿ ಬಂದಿದ್ದೇವೆ ಎಂದವರು ವಿವರಿಸುತ್ತಾರೆ.

 ತ್ರಿಪುರಾಕ್ಕೆ ರೈಲಿನ ಮೂಲಕ ಬಂದ ಇವರು ಬಾಂಗ್ಲಾದೇಶದ ಗಡಿದಾಟಿ ಒಳನುಸುಳಲು ನಡೆಸಿದ ಪ್ರಯತ್ನವನ್ನು ಬಾಂಗ್ಲಾದೇಶದ ಗಡಿಭದ್ರತಾ ಪಡೆ ತಡೆದು ಇವರನ್ನು ಥಳಿಸಿದೆ. ಭಾರತದಲ್ಲಿ ತಮ್ಮನ್ನು ವಿರೋಧಿಸುತ್ತಿದ್ದಾರೆ ಮತ್ತು ಮ್ಯಾನ್ಮಾರ್‌ಗೆ ಹೋದರೆ ಕೊಂದು ಬಿಡುತ್ತಾರೆ. ತಮಗೆ ಈಗ ಬಾಂಗ್ಲಾದೇಶ ಮಾತ್ರ ಸುರಕ್ಷಿತ ಸ್ಥಳವಾಗಿದೆ ಎಂದು ರೊಹಿಂಗ್ಯಾಗಳು ಹೇಳುತ್ತಿದ್ದಾರೆ.

 ತಮ್ಮ ಬಳಿಯಿದ್ದ ಯುಎನ್‌ಎಚ್‌ಸಿಆರ್ (ಯುನೈಟೆಡ್ ನೇಷನ್ಸ್ ಹೈಕಮಿಷನರ್ ಫಾರ್ ರೆಫ್ಯುಜೀಸ್) ರೆಫ್ಯುಜಿ ಕಾರ್ಡ್ ಹಾಗೂ ಇತರ ವಸ್ತುಗಳನ್ನು ಭಾರತೀಯ ಗಡಿ ಭದ್ರತಾ ಪಡೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಕಾರ್ಡ್‌ನ ಸಹಾಯದಿಂದ ನಮಗೆ ಕೆಲಸ ದೊರಕುತ್ತಿತ್ತು. ಈಗ ಜೀವ ಉಳಿಸಿಕೊಳ್ಳಲು ತಲೆತಪ್ಪಿಸಿಕೊಂಡು ಓಡಾಡಬೇಕಿದೆ. “ನನ್ನ ಎರಡು ಮಕ್ಕಳಿಗೆ ಇತರ ಮಕ್ಕಳಂತೆ ಬಾಲ್ಯವನ್ನು ಆನಂದಿಸಲೂ ಆಗುತ್ತಿಲ್ಲ” ಎಂದು ಅಬ್ದುಲ್ ಶುಕೂರ್ ಅಳಲು ತೋಡಿಕೊಂಡಿದ್ದಾರೆ. ಜನವರಿ 18ರಂದು ಬಾಂಗ್ಲಾದೇಶದೊಳಗೆ ನುಸುಳಲು ಯತ್ನಿಸಿದಾಗ ಶುಕೂರ್ ಮತ್ತು ಅವರ ಜೊತೆಗಿದ್ದ 30 ಮಂದಿಯನ್ನು ಬಾಂಗ್ಲಾ ಗಡಿ ಭದ್ರತಾ ಪಡೆಯವರು ತಡೆದಿದ್ದಾರೆ. ಬಳಿಕ ತ್ರಿಪುರದ ರೈಮುರ ಗಡಿ ತಪಾಸಣಾ ಕೇಂದ್ರದ ಬಳಿ, ಭಾರತ-ಬಾಂಗ್ಲಾ ಗಡಿರೇಖೆಯ ನಡುವಿರುವ ಹೊಲದ ಮಧ್ಯೆ ನಾಲ್ಕು ದಿನ ಮತ್ತು ನಾಲ್ಕು ರಾತ್ರಿ ಮರಗಟ್ಟುವ ಚಳಿಯಲ್ಲಿ ನಡುಗುತ್ತಾ, ಜೀವ ಕೈಯಲ್ಲಿ ಹಿಡಿದುಕೊಂಡು ಅತಂತ್ರರಾಗಿ ದಿನ ಕಳೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X