ಡಿಸಿಎಂ ಡಾ.ಜಿ.ಪರಮೇಶ್ವರ್ ರನ್ನು ಭೇಟಿಯಾದ ಇನ್ಫೋಸಿಸ್ನ ನಾರಾಯಣ ಮೂರ್ತಿ

ಬೆಂಗಳೂರು, ಜ. 24: ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪರಮೇಶ್ವರ್, ಮೈಸೂರಿನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅನ್ನು ಅಭಿವೃದ್ಧಿ ಮಾಡುವ ಸಂಬಂಧ ನಾರಾಯಣಮೂರ್ತಿ ಅವರು ಇಂದು ಭೇಟಿ ಮಾಡಿ ನನ್ನೊಂದಿಗೆ ಚರ್ಚಿಸಿದರು.
ಇದೇ ಸಂಸ್ಥೆಯಲ್ಲಿ ನಾರಾಯಣಮೂರ್ತಿ ಅವರು ಶಿಕ್ಷಣ ಪಡೆದಿದ್ದರು. ಹೀಗಾಗಿ ಈ ಸಂಸ್ಥೆಯನ್ನು ಅಂತರ್ರಾಷ್ಟ್ರೀಯ ದರ್ಜೆಗೆ ಏರಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಿದ್ದಾರೆ. ಇದರ ಬಗ್ಗೆ ಚರ್ಚಿಸಿದರು. ಜೊತೆಗೆ ಬೆಂಗಳೂರಿನ ಅಭಿವೃದ್ಧಿ ಬಗ್ಗೆಯೂ ಕೆಲ ಸಲಹೆ-ಸೂಚನೆ ನೀಡಿದರು ಎಂದರು.
Next Story





