Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳು ಹೆಚ್ಚಿನ...

ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನಶೀಲರಾಗಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸನ್ನು ಕಾಣಬೇಕು: ಯಲ್ಲಮ್ಮ

ವಾರ್ತಾಭಾರತಿವಾರ್ತಾಭಾರತಿ24 Jan 2019 10:05 PM IST
share
ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನಶೀಲರಾಗಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ  ಯಶಸ್ಸನ್ನು ಕಾಣಬೇಕು: ಯಲ್ಲಮ್ಮ

ಭಟ್ಕಳ, ಜ. 24: ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನಶೀಲರಾಗಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ  ಯಶಸ್ಸನ್ನು ಕಾಣಬೇಕು. ಅವರ ಪ್ರಯತ್ನಕ್ಕೆ ಈ  ಕಾರ್ಯಕ್ರಮವು ಪ್ರೇರಣೆಯಾಗಲಿ ಎಂದು ಸಮನ್ವಯಾಧಿಕಾರಿಗಳಾದ ಯಲ್ಲಮ್ಮ ಹೇಳಿದರು.

ಅವರು  ಭಟ್ಕಳದ  ದಿ ನ್ಯೂ ಇಂಗ್ಲಿಷ್ ಪಿ.ಯು. ಕಾಲೇಜಿನ  ಸಭಾಭವನದಲ್ಲಿ, ದಿ ನ್ಯೂ ಇಂಗ್ಲಿಷ್ ಪಿ.ಯು.ಕಾಲೇಜು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಭಟ್ಕಳ ಇವರ ಸಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ದಾರಿ ದೀವಿಗೆ” ಎಂಬ ಶೀರ್ಷಿಕೆಯ ಅಡಿಯಲ್ಲಿ ಪರೀಕ್ಷಾ ಮಾರ್ಗದರ್ಶನ ಮತ್ತು ಜ್ಞಾನ ಅಂಕುರ ಎನ್ನುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ.ಸುರೇಶ ನಾಯಕ ಅಧ್ಯಕ್ಷತೆ ವಹಿಸಿದ್ದರು. ಭಟ್ಕಳ ಎಜ್ಯುಕೇಶನ ಟ್ರಷ್ಟನ ಟ್ರಷ್ಟಿ ಮ್ಯಾನೇಜರ್ ರಾಜೇಶ ನಾಯಕ ಮತ್ತು ಪ್ರಾಂಶುಪಾಲ ವಿರೇಂದ್ರ ಶಾನಭಾಗ ಉಪಸ್ಥಿತರಿದ್ದರು.

ನಂತರ  ಎಸ್ ಎಸ್ ಎಲ್ ಸಿ  ವಿದ್ಯಾರ್ಥಿಗಳಿಗೆ ಪರೀಕ್ಷಾ  ಭಯ ನಿವಾರಣ ಕ್ರಮಗಳ ಬಗ್ಗೆ “ಪರೀಕ್ಷೆ ಸಜಾ ಅಲ್ಲ ಮಜಾ” ಎನ್ನುವ ವಿಷಯದ ಮೇಲೆ  ಮುರ್ಡೇಶ್ವರದ ಅರ್.ಎನ್.ಎಸ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ದಿಪೀಕಾ ಕಲ್ಕುರಾ, ಕಾರವಾರದ  ಶ್ರೀ ಮೂರ್ತಿ ಸರ್ ಇವರು  “ಪರೀಕ್ಷೆ ಬರೆದು ಹೆಚ್ಚಿನ ಅಂಕ ಪಡೆಯಲು ಬರೇ ಜ್ಞಾನ ಸಾಲದು, ತಂತ್ರ ಬೇಕು” ಹಾಗೂ ಸುಂದರ ಕೈ ಬರಹದ ಪ್ರಾಯೋಗಿಕ ತರಬೇತಿ ಮತ್ತು ಉಪನ್ಯಾಸ ನೀಡಿದರು. ಎಸ್ ಎಸ್ ಎಲ್ ಸಿ- ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟ ಮತ್ತು ಎಸ್ ಎಸ್ ಎಲ್ ಸಿ. ನಂತರ ಮುಂದೇನು ? ಈ ವಿಷಯದ ಕುರಿತು ಶ್ರೀ ವಿರೇಂದ್ರ ಶಾನಭಾಗ ಮಾತನಾಡಿದರು.

ಕಾರ್ಯಾಗಾರದ ಕೊನೆಯಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ವಿದ್ಯಾಭಾರತಿ ಪ್ರೌಢಶಾಲೆ ಪ್ರಥಮ, ದುರ್ಗಾಪರಮೇಶ್ವರಿ ಪ್ರೌಢಶಾಲೆ, ಅಳ್ವೆಕೋಡಿ ದ್ವಿತೀಯ ಮತ್ತು ಶಿರಾಲಿಯ ಸೇಂಟ್ ಥೋಮಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ತೃತೀಯ ಬಹುಮಾನ ಪಡೆದುಕೊಂಡರು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾರಾದ ಡಾ.ನರಸಿಂಹ ಮೂರ್ತಿ ಮತ್ತು ಬೆಳಕೆಯ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ  ಡಾ ಸವಿತಾ ನಾಯಕ ಭಾಗವಹಿಸಿದ್ದರು. ತಾಲೂಕಿನ 200 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮ ಸಂಯೋಜಕರಾದ ಸರಕಾರಿ ಪ್ರೌಢಶಾಲೆ ಬೆಳಕೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ ಶಿರಾಲಿ ಸ್ವಾಗತಿಸಿದರು, ಕನ್ನಡ ಉಪನ್ಯಾಸಕ ರಾಮಚಂದ್ರ ಭಟ್ ವಂದಿಸಿದರು, ಉಪನ್ಯಾಸಕಿಯರಾದ ಶ್ರೀಮಾ,ಪಲ್ಲವಿ ಮತ್ತು ನಾಗಲಕ್ಷ್ಮಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X