Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಡಾಯ ಸಾಹಿತಿಗೆ ವಿನಯ, ಸಜ್ಜನಿಕೆಯೆ...

ಬಂಡಾಯ ಸಾಹಿತಿಗೆ ವಿನಯ, ಸಜ್ಜನಿಕೆಯೆ ಭೂಷಣವಾಗಲಿ: ಕವಿ ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ24 Jan 2019 10:15 PM IST
share
ಬಂಡಾಯ ಸಾಹಿತಿಗೆ ವಿನಯ, ಸಜ್ಜನಿಕೆಯೆ ಭೂಷಣವಾಗಲಿ: ಕವಿ ಸಿದ್ದಲಿಂಗಯ್ಯ

ಬೆಂಗಳೂರು, ಜ.24: ಬಂಡಾಯ ಸಾಹಿತಿಗಳು ವಿನಯ, ವಿಧೇಯತೆ, ಸಜ್ಜನಿಕೆ ಯಿಂದ ಬಂಡಾಯದ ನೈಜ ಅರ್ಥವನ್ನು ಅರಿತು ವೈಚಾರಿಕತೆ, ಪ್ರಗತಿಪರ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಕವಿ ಸಿದ್ದಲಿಂಗಯ್ಯ ತಿಳಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ 2017ನೆ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಲೋಕಾರ್ಪಣೆ ಮಾಡಿದ ಅವರು, ಕೆಲ ಯುವ ಸಾಹಿತಿಗಳು ಬಂಡಾಯ, ಕ್ರಾಂತಿಕಾರಿ ಸಾಹಿತಿಗಳಾಗಲು ಬಯಸುತ್ತಾರೆ. ಇದು ತಪ್ಪಲ್ಲ. ಆದರೆ, ದಾಡಿ ಬೆಳೆಸಿಕೊಂಡು, ಜುಟ್ಟು ಬಿಟ್ಟುಕೊಂಡು ಗಂಭೀರತೆ ರೂಢಿಸಿಕೊಂಡರೆ ಬಂಡಾಯ ಸಾಹಿತಿಗಳಾಗಲು ಸಾಧ್ಯವಿಲ್ಲ. ಸಮಾಜದಲ್ಲಿ ಮನುಷ್ಯತ್ವ ರೂಢಿಸಿಕೊಳ್ಳುವುದು, ಮಾನವೀಯತೆಯೇ ಬಂಡಾಯದ ಮೂಲ ಉದ್ದೇಶವೆಂದು ತಿಳಿಸಿದರು.

ಯುವ ಬರಹಗಾರರು ದೊಡ್ಡ ಸಾಹಿತಿಗಳನ್ನು ಅನುಕರಣೆ ಮಾಡುತ್ತಾರೆ. ಕೆಲ ಹಿರಿಯ ಸಾಹಿತಿಗಳು ಮದ್ಯಪಾನ, ಧೂಮಪಾನ ಮಾಡುತ್ತಿದ್ದರು. ನಾವೂ ಹಾಗೆ ಮಾಡಿದರೆ ಉತ್ತಮ ಸಾಹಿತ್ಯ ರಚಿಸಬಹುದು ಎಂಬ ಭ್ರಮೆಯಲ್ಲಿರುತ್ತಾರೆ. ದುಶ್ಚಟಗಳಿಗೆ ಬಲಿಯಾಗುವುದರಿಂದ ಬರವಣಿಗೆಗೆ ಶಕ್ತಿ ಬರುವುದಿಲ್ಲ. ಯುವ ಲೇಖಕರು ಹಿರಿಯ ಲೇಖಕರಿಂದ ಅತ್ಯುತ್ತಮ ಗುಣಗಳನ್ನು ಅನುಸರಿಸಬೇಕು ಎಂದು ಅವರು ಸಲಹೆ ನೀಡಿದರು.

ಯುವ ಲೇಖಕರು ಹಿರಿಯ ಲೇಖಕರ ಕೃತಿಗಳನ್ನು ಹೆಚ್ಚೆಚ್ಚು ಅಭ್ಯಸಿಸಬೇಕು. ಇದರಿಂದ ಹೊಸ ಹೊಳವುಗಳಿಗೆ ತೆರೆದುಕೊಳ್ಳಲು ಸಹಕಾರಿಯಾಗುತ್ತದೆ. ಬರಹಗಾರರಿಗೆ ಜ್ಞಾನದ ಹಸಿವಿರಬೇಕು. ಯುವ ಸಾಹಿತಿಗಳಿಗೆ ಕುವೆಂಪು, ಕೆ.ಎಸ್.ನರಸಿಂಹಸ್ವಾಮಿ, ಶಿವರುದ್ರಪ್ಪನವರ ಕೃತಿಗಳ ಪರಿಚಯ ಇರುವುದಿಲ್ಲ. ಯುವ ಲೇಖಕರು ಮುಗ್ಧತೆ, ಹಾಸ್ಯಪ್ರಜ್ಞೆ, ಜಗತ್ತನ್ನು ನೋಡುವ ಆರೋಗ್ಯಕರವಾದ ಚಿಕಿತ್ಸಾ ದೃಷ್ಟಿಕೋನವನ್ನು ಕಳೆದುಕೊಳ್ಳಬಾರದು ಎಂದು ಅವರು ಹೇಳಿದರು.

ಯುವಜನರು ಜನಸಾಮಾನ್ಯರ ನಡೆ ನುಡಿಗಳನ್ನು ಗಮನಿಸಿ ಆಲಿಸಬೇಕು. ಇದರಿಂದ ಭಾಷೆಯ ಬಳಕೆ, ಪ್ರಾದೇಶಿಕ ವ್ಯತ್ಯಾಸ, ಆಧುನಿಕ ಪರಿಕಲ್ಪನೆಗಳ ಹಿಡಿತದ ಪರಿಚಯವಾಗುತ್ತದೆ. ಹಿರಿಯ ಸಾಹಿತಿಗಳ ಬದುಕಿನಲ್ಲಿ ನಡೆದ ಪ್ರಸಂಗಗಳು, ವೈಶಿಷ್ಟಗಳು, ಅನುಭವಿಸಿದ ಆತಂಕ, ತಲ್ಲಣಗಳನ್ನು ಗಮನಿಸಬೇಕು. ಇದರಿಂದ ಬರವಣಿಗೆಗೆ ಹೆಚ್ಚಿನ ಪ್ರೋತ್ಸಾಹ ಬರುತ್ತದೆ ಎಂದು ಅವರು ಅಭಿಪ್ರಾಯಿಸಿದರು.

ಲೇಖಕರು ಗಂಭೀರವಾಗಿರದೆ ಸರಳವಾಗಿರಬೇಕು. ಬದುಕಿನ ಸ್ವಾರಸ್ಯಕರ ಸಂಗತಿಗಳನ್ನು ತಿಳಿದುಕೊಂಡು ಸಂತಸ ಪಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ವರ್ತಮಾನದ ಸಂಗತಿಗಳಿಗೆ ಪ್ರತಿಕ್ರಿಯಿಸುವ ಗುಣ ಬೆಳೆಸಿಕೊಳ್ಳಬೇಕು. ಕ್ರೌರ್ಯ, ದಬ್ಬಾಳಿಕೆ, ಹಿಂಸೆಗೆ ಒತ್ತು ನೀಡದೆ ಉತ್ತಮ ಹಾದಿಯಲ್ಲಿ ಬದುಕು ರೂಪಿಸಿಕೊಂಡು ಮಾನವೀತೆಯೆಡೆಗೆ ನಮ್ಮ ನಡೆ ಎಂಬ ತತ್ವದಲ್ಲಿ ಸಾಗಬೇಕು ಎಂದು ಅವರು ಹೇಳಿದರು. ಈ ವೇಳೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮತ್ತಿತರರಿದ್ದರು.

ಇಂದು ನಿಸರ್ಗ ಪ್ರೀತಿಯ ಜತೆಗೆ ಸಮಾಜ ಪ್ರೀತಿ ಬೆಳೆಸಿಕೊಳ್ಳಬೇಕಿದೆ. ನಮ್ಮನ್ನು ಸಲಹುತ್ತಿರುವ ರೈತರು, ಕಾರ್ಮಿಕರು, ಕೂಲಿಕಾರರನ್ನು ಮರೆಯದೆ ಅವರ ಬದುಕನ್ನು ಗಮನಿಸಬೇಕು. ಕೃತಿಗಳಲ್ಲಿ ಅವರ ನೋವನ್ನು ತರಬೇಕು.

-ಸಿದ್ಧಲಿಂಗಯ್ಯ ಹಿರಿಯ ಕವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X