Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೆಲಂಗಾಣ ಉದ್ಯಮಿಯ ಪುತ್ರ ನಾಪತ್ತೆ...

ತೆಲಂಗಾಣ ಉದ್ಯಮಿಯ ಪುತ್ರ ನಾಪತ್ತೆ ಪ್ರಕರಣ: ಮಡಿಕೇರಿಯಲ್ಲಿ ಕಾರು ಪತ್ತೆ- ಪ್ರಕರಣ ಇನ್ನೂ ನಿಗೂಢ

ವಾರ್ತಾಭಾರತಿವಾರ್ತಾಭಾರತಿ24 Jan 2019 10:53 PM IST
share
ತೆಲಂಗಾಣ ಉದ್ಯಮಿಯ ಪುತ್ರ ನಾಪತ್ತೆ ಪ್ರಕರಣ: ಮಡಿಕೇರಿಯಲ್ಲಿ ಕಾರು ಪತ್ತೆ- ಪ್ರಕರಣ ಇನ್ನೂ ನಿಗೂಢ

ಮಡಿಕೇರಿ, ಜ.24: ತೆಲಂಗಾಣ ಉದ್ಯಮಿಯೊಬ್ಬರ ಪುತ್ರ ನಾಪತ್ತೆಯಾಗಿರುವ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದ್ದು, ಆತನ ಕಾರು ಮಡಿಕೇರಿಯಲ್ಲಿ ಪತ್ತೆಯಾಗಿದೆ. ನಿಗೂಢ ಪ್ರಕರಣವನ್ನು ಭೇದಿಸಲು ನಗರಕ್ಕೆ ಆಗಮಿಸಿರುವ ತೆಲಂಗಾಣ ರಾಜ್ಯದ ಸರೂರ್ ನಗರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮಡಿಕೇರಿ ಪೊಲೀಸರ ಸಹಕಾರ ಪಡೆದಿದ್ದಾರೆ.

ಗಣಿ ಉದ್ಯಮಿ ಮಾರುತಿ ಪ್ರಸಾದ್ ಅವರ ಪುತ್ರ ವಿನಯ್(28) ಎಂಬಾತ ಜ.18 ರಿಂದ ಕಾಣೆಯಾಗಿದ್ದಾನೆ ಎಂದು ಆತನ ಪೋಷಕರು ಸರೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರಿನ ಮಾಲಕನೂ ಆಗಿರುವ ವಿನಯ್ ಜ.17 ರಂದು ರಾತ್ರಿ ಮೊಬೈಲ್ ಮೂಲಕ ತನ್ನ ತಾಯಿ ಮತ್ತು ಕಿರಿಯ ಸಹೋದರನೊಂದಿಗೆ ಬೆಂಗಳೂರಿಗೆ ಹೋಗುವುದಾಗಿ ತಿಳಿಸಿದ್ದಲ್ಲದೆ, ಬಳಿಕ ಸ್ನೇಹಿತರ ಜೊತೆಗೂಡಿ ಕೊಡಗು ಜಿಲ್ಲೆಗೂ ಪ್ರವಾಸ ತೆರಳುವುದಾಗಿ ಹೇಳಿದ್ದ ಎನ್ನಲಾಗಿದೆ. 

ಪ್ರಸ್ತುತ ತೆಲಂಗಾಣ ರಾಜ್ಯಕ್ಕೆ ಸೇರಿರುವ ಸರೂರ್ ನಗರ ಹೈದರಾಬಾದ್‍ಗೆ ಸಮೀಪದಲ್ಲಿದ್ದು, ಅಲ್ಲಿನ ಗಣಿ ಉದ್ಯಮಿ ಮಾರುತಿ ಪ್ರಸಾದ್ ಅವರೊಂದಿಗೆ ಪುತ್ರ ವಿನಯ್ ಕೂಡ ವ್ಯವಹಾರ ನಡೆಸುತ್ತಿದ್ದಾನೆ. ತಾ.17 ರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ತಾಯಿ ಹಾಗೂ ಕಿರಿಯ ಸಹೋದರ ವಿಶಾಲ್ ಬಳಿ ಮೊಬೈಲ್‍ನಲ್ಲಿ ಸಂಭಾಷಣೆ ನಡೆಸಿ, ತಾನು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕೊಡಗಿಗೂ ಪ್ರವಾಸ ತೆರಳುವುದಾಗಿ ತಿಳಿಸಿದ್ದಾನೆಂದು ಹೇಳಲಾಗಿದೆ. ಅದಾದ ಬಳಿಕ ಕೇವಲ 10 ನಿಮಿಷ ಅಂತರದಲ್ಲಿ ತಂದೆಯೊಂದಿಗೆ ಮಾತನಾಡಿ, ತಾನು ಹೈದರಾಬಾದ್‍ನಲ್ಲೇ ಇದ್ದು, 10 ನಿಮಿಷದಲ್ಲಿ ಮನೆಗೆ ಬರುವುದಾಗಿಯೂ ಹೇಳಿಕೊಂಡಿದ್ದು, ಪೋಷಕರಿಗೆ ಗೊಂದಲ ಮೂಡಲು ಕಾರಣವಾಗಿದೆ.

ತಾ.18 ರಂದು ಬೆಳಿಗ್ಗೆ 6 ಗಂಟೆಯಿಂದ ಪೋಷಕರು ವಿನಯ್‍ನನ್ನು ಸಂಪರ್ಕಿಸಲು ಎಷ್ಟೇ ಪ್ರಯತ್ನಿಸಿದರೂ, ಆತನ ಮೊಬೈಲ್ ಸಂಪರ್ಕಕ್ಕೆ ಸಿಗದೆ ‘ಸ್ವಿಚ್‍ ಆಫ್’ ಎಂದು ಪ್ರತಿಕ್ರಿಯಿಸಿದೆ. ಇದರಿಂದಾಗಿ ಆತಂಕಗೊಂಡ ವಿನಯ್ ಪೋಷಕರು ಸರೂರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾರು ಪತ್ತೆ
ನಗರದ ಸಿದ್ದಾಪುರ ರಸ್ತೆಯ ನಿವಾಸಿ ಬಿ. ಬಬ್ಬು ಗಣಪತಿ ಎಂಬವರು, ತಮ್ಮ ಮನೆಯ ಬಳಿ ಕೆಂಪು ಬಣ್ಣದ ‘ಸ್ಕೋಡಾ’ ಕಾರೊಂದು(ಟಿಎಸ್ 07-ಎಫ್.ಕ್ಯೂ. 3377) ವಾರಸುದಾರರಿಲ್ಲದೆ ನಿಂತಿರುವ ಬಗ್ಗೆ ಮಡಿಕೇರಿ ನಗರ ಠಾಣೆ ಪೊಲೀಸರಿಗೆ ಸುಳಿವು ನೀಡಿದ್ದಾರೆ. ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕಾರಿನ ಬಾಗಿಲಿಗೆ ‘ಲಾಕ್’ ಮಾಡದಿರುವುದು ಕಂಡು ಬಂದಿದ್ದು, ಕಾರಿನಲ್ಲಿ ಮೊಬೈಲ್ ಕೂಡ ಪತ್ತೆಯಾಗಿದೆ. ಈ ಮೊಬೈಲ್ ವಶಪಡಿಸಿಕೊಂಡ ಪೊಲೀಸರು ಅದನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು ತೆಲಂಗಾಣ ರಾಜ್ಯದ ಸರೂರ್ ನಗರದ ವಿಳಾಸ ತೋರಿಸಿದೆ.
ಈ ಸುಳಿವು ಪಡೆದ ಮಡಿಕೇರಿ ನಗರ ಪೊಲೀಸರು, ತೆಲಂಗಾಣದ ಸರೂರ್ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಿದಾಗ, ಅದಾಗಲೇ ಕಾರು ಮಾಲಕ ವಿನಯ್ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿರುವುದು ಗೊತ್ತಾಗಿದೆ. ಸರೂರ್ ಪೊಲೀಸರು ವಿನಯ್ ಪೋಷಕರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಕಲೆಹಾಕಿ ಮಡಿಕೇರಿಗೆ ಧಾವಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಬಂಗಲೆಯ ಹಿಂಬದಿ ರಸ್ತೆಯ ಪಕ್ಕದಲ್ಲಿ ಕಾರು ಪತ್ತೆಯಾಗಿರುವ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಮನೆಯೊಂದರ ಸಿಸಿ ಕ್ಯಾಮರಾವನ್ನು ತೆಲಂಗಾಣ ಪೊಲೀಸರು ಪರಿಶೀಲಿಸಿದ್ದು, ಸ್ಥಳೀಯ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಸಿಸಿ ಕ್ಯಾಮರಾ ಪರಿಶೀಲನೆಯಿಂದ ಇದುವರೆಗೆ ಯಾವುದೇ ಸುಳಿವು ದೊರಕಿಲ್ಲ ಎಂದು ತಿಳಿದು ಬಂದಿದ್ದು, ಕೊಡಗು ಜಿಲ್ಲಾ ಪೊಲೀಸರ  ನೆರವು ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X