Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ವಯೋವೃದ್ಧರಾದಂತೆ ಕೆಲಸದ ಹುಮ್ಮಸ್ಸು...

‘ವಯೋವೃದ್ಧರಾದಂತೆ ಕೆಲಸದ ಹುಮ್ಮಸ್ಸು ಹೆಚ್ಚುತ್ತದೆ’

ವಾರ್ತಾಭಾರತಿವಾರ್ತಾಭಾರತಿ24 Jan 2019 11:27 PM IST
share
‘ವಯೋವೃದ್ಧರಾದಂತೆ ಕೆಲಸದ ಹುಮ್ಮಸ್ಸು ಹೆಚ್ಚುತ್ತದೆ’

ಮಂಗಳೂರು, ಜ.24: ಕಾಯಿಲೆ ಇಲ್ಲದಿದ್ದರೆ ಮಾತ್ರ ಆರೋಗ್ಯವಂತರು ಎನ್ನುವ ಕಲ್ಪನೆ ತಪ್ಪು. ಮನಸ್ಸಿಗೆ ಕೆಲಸ ಮಾಡುವ ಹುರುಪು ಇದ್ದವರನ್ನು ಆರೋಗ್ಯವಂತರು ಎನ್ನಬಹುದು. ಮಾನವನಿಗೆ 80 ವರ್ಷ ದಾಟಿದ ಬಳಿಕ ಕೆಲಸ ಮಾಡುವ ಉತ್ಸಾಹ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಪೂರಕ ವಾತಾವರಣ ನಿರ್ಮಾಣಕ್ಕೆ ಪುತ್ತೂರಿನ ಶಾಂತಿಗೋಡು ಬಳಿ ನಿರ್ಮಾಣಗೊಂಡ ನವಚೇತನ ಹಿರಿಯ ನಾಗರಿಕರ ಬಡಾವಣೆ ಉತ್ತಮ ಯೋಚನೆ ಎಂದು ಮಾಹೆ ನಿವೃತ್ತ ಕುಲಪತಿ ಡಾ.ಬಿ.ಎಂ. ಹೆಗ್ಡೆ ಹೇಳಿದರು.

ಪುತ್ತೂರಿನ ಶಾಂತಿಗೋಡು ಬಳಿ ನವಚೇತನ ರಿಟೈರ್‌ಮೆಂಟ್ ರೆಸಿಡೆನ್ಸಿ ವತಿಯಿಂದ ರೂಪುಗೊಂಡ ನವಚೇತನ ಹಿರಿಯ ನಾಗರಿಕರ ಬಡಾವಣೆ ಲೋಕಾರ್ಪಣೆ ಅಂಗವಾಗಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ನಡೆದ ‘ನಿವೃತ್ತಿಯ ನಂತರದ ಜೀವನ’ ವಿಚಾರ ಸಂಕಿರಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಮ್ಮ ದೇಹವೇ ಮನಸ್ಸು. ಮನಸ್ಸೇ ದೇಹ. ಮಾನವನಿಗೆ ಮನಸ್ಸಿನ ಆರೋಗ್ಯ ಮುಖ್ಯ. ಮನಸ್ಸು ಆರೋಗ್ಯವಾಗಿದ್ದರೆ ದೇಹವೂ ಆರೋಗ್ಯವಾಗಿರುತ್ತದೆ. ಮನಸ್ಸಿನ ಆರೋಗ್ಯ ಎಲ್ಲ ಕೆಲಸ ಮಾಡಲು ಹುರುಪು ನೀಡುತ್ತದೆ. ಇತರರನ್ನು ಪ್ರೀತಿ ಮಾಡುವ ಹುರುಪು ನಮಗೆ ಸದಾ ಇರಬೇಕು. ಅದಕ್ಕಾಗಿ ನಿವೃತ್ತಿನ ನಂತರವೂ ನಾವು ಇತರರಿಗೆ ನೆರವು, ಸಹಾಯ ಮಾಡಬೇಕು. ಇನ್ನೊಬ್ಬರಿಗೆ ಮಾಡಿದ ಸಹಾಯದ ಆತ್ಮತೃಪ್ತಿ ನಮ್ಮನ್ನು ಆರೋಗ್ಯವಂತರ ನ್ನಾಗಿರಿಸುತ್ತದೆ ಎಂದರು.

ದಿಕ್ಸೂಚಿ ಭಾಷಣ ಮಾಡಿದ ಭಾರತ ಸರಕಾರದ ನಿವೃತ್ತ ಕಾರ್ಯದರ್ಶಿ ವಿ. ವಿ. ಭಟ್, ನಿವೃತ್ತಿಯ ನಂತರ ಏನು ಎಂಬ ಪ್ರಶ್ನೆ ಎಲ್ಲ ಉದ್ಯೋಗಿಗಳಲ್ಲಿಯೂ ಉದ್ಭವಿಸುತ್ತದೆ. ಈ ಪ್ರಶ್ನೆಗೆ ಉತ್ತರವಾಗಿ ನೆಮ್ಮದಿಯ ಜೀವನಕ್ಕೆ ಪೂರಕವಾದ ವ್ಯವಸ್ಥೆ ಇರುವ ನವಚೇತನ ಹಿರಿಯ ನಾಗರಿಕರ ಬಡಾವಣೆ ರೂಪು ಗೊಂಡಿದೆ ಎಂದರು.

ವೃದ್ಧರಾದ ಬಳಿಕ ದೈಹಿಕ ಆರೋಗ್ಯದ ಜತೆ ಮಾನಸಿಕ ಆರೋಗ್ಯವೂ ಮುಖ್ಯ. ಆಹಾರದಲ್ಲಿ ಶಿಸ್ತು, ಯುಕ್ತ ಆಹಾರ ಮತ್ತು ವಿಹಾರದ ಮೂಲಕ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸಮಾಜಕ್ಕೆ ಉಪಕಾರಿ ಆಗಿ ಹಿರಿಯ ನಾಗರಿಕರು ಜೀವನ ನಡೆಸಬೇಕು ಎಂದರು.

ನವಚೇತನ ರಿಟೈರ್‌ಮೆಂಟ್ ರೆಸಿಡೆನ್ಸಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಶ್ಯಾಮ ಭಟ್ ಮಾತನಾಡಿ, ವಿದ್ಯಾಭ್ಯಾಸದ ಬಳಿಕ ಅನೇಕ ವರ್ಷಗಳ ಕಾಲ ಉದ್ಯೋಗ ನಿಮಿತ್ತ ಅಮೆರಿಕಾದಲ್ಲಿ ವಾಸವಿದ್ದ ನಾನು, ಅಲ್ಲಿನ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕರ ಬಡಾವಣೆಯ ವಿಶ್ಲೇಷಣೆ ನಡೆಸಿದ್ದೆ. ಅಮೆರಿಕಾ ಮಾದರಿಯ ಹಿರಿಯ ನಾಗರಿಕರ ಬಡಾವಣೆಯನ್ನು ಭಾರತೀಯ ಸಂಸ್ಕೃತಿಗೆ ಸರಿಹೊಂದುವಂತೆ ನಿರ್ಮಿಸುವ ಕನಸಿತ್ತು. ಆಧುನಿಕ ಜೀವನ ಶೈಲಿ, ಯುವಜನತೆಯಲ್ಲಿ ಆರ್ಥಿಕ ಸ್ವಾತಂತ್ರ್ಯದಿಂದ ಭಾರತದ ಹಳ್ಳಿಗಳೂ ವೃದ್ಧಾಶ್ರಮಗಳಾಗುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X