Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಿಯಾಂಕಾ ಗಾಂಧಿ ಸರಿಯಾದ ಹೆಜ್ಜೆಗಳನ್ನು...

ಪ್ರಿಯಾಂಕಾ ಗಾಂಧಿ ಸರಿಯಾದ ಹೆಜ್ಜೆಗಳನ್ನು ಹಾಕಿದರೆ ‘ಕ್ವೀನ್’ ಆಗುತ್ತಾರೆ: ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ25 Jan 2019 8:35 PM IST
share
ಪ್ರಿಯಾಂಕಾ ಗಾಂಧಿ ಸರಿಯಾದ ಹೆಜ್ಜೆಗಳನ್ನು ಹಾಕಿದರೆ ‘ಕ್ವೀನ್’ ಆಗುತ್ತಾರೆ: ಶಿವಸೇನೆ

ಮುಂಬೈ,ಜ.25: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತನ್ನ ಜವಾಬ್ದಾರಿಯನ್ನು ಅರಿತು ಸರಿಯಾದ ಹೆಜ್ಜೆಗಳನ್ನು ಹಾಕಿದರೆ ಅವರು ‘ಕ್ವೀನ್(ರಾಣಿ)’ ಆಗಿ ಹೊರಹೊಮ್ಮಲಿದ್ದಾರೆ ಎಂದು ಶುಕ್ರವಾರ ಹೇಳಿರುವ ಶಿವಸೇನೆಯು, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲ್ಲಲು ತಾನು ಏನೂ ಮಾಡಲು ಸಿದ್ಧ ಎನ್ನುವುದನ್ನು ತೋರಿಸಿದ್ದಾರೆ ಎಂದು ಹೇಳಿದೆ.

ರಾಹುಲ್ ವೈಫಲ್ಯದಿಂದಾಗಿಯೇ ಪ್ರಿಯಾಂಕಾರನ್ನು ಪಕ್ಷಕ್ಕೆ ವಿಧ್ಯುಕ್ತವಾಗಿ ಸೇರಿಸಿಕೊಳ್ಳಲಾಗಿದೆ ಎಂಬ ಬಿಜೆಪಿ ನಾಯಕರ ಟೀಕೆಗಳಲ್ಲಿ ಹುರುಳಿಲ್ಲ ಎಂದೂ ಸೇನೆ ತನ್ನ ಮುಖವಾಣಿ ‘ಸಾಮನಾ’ದ ಸಂಪಾದಕೀಯದಲ್ಲಿ ಹೇಳಿದೆ.

ರಫೇಲ್ ಯುದ್ಧ ವಿಮಾನಗಳ ಖರೀದಿ ವಿಷಯವನ್ನೆತ್ತುವ ಮೂಲಕ ರಾಹುಲ್ ಸರಕಾರದ ಸಮಸ್ಯೆಗಳನ್ನು ಹೆಚ್ಚಿಸಿದ್ದಾರೆ ಎಂದಿರುವ ಶಿವಸೇನೆ,ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ಕುರಿತು ಮೋದಿ ಸರಕಾರದ ವಿರುದ್ಧ ರಾಹುಲ್ ದಾಳಿಗಳನ್ನು ಕಡೆಗಣಿಸಿದರೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವಿನ ಹೆಗ್ಗಳಿಕೆಯನ್ನು ಅವರಿಗೆ ನೀಡದಿರುವುದು ಸಂಕುಚಿತ ಮನೋಸ್ಥಿತಿಯನ್ನು ತೋರಿಸುತ್ತದೆ ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಕಾಂಗ್ರೆಸ್‌ನ್ನು ದೂರವಿಟ್ಟು ಚುನಾವಣಾ ಮೈತ್ರಿಯನ್ನು ಮಾಡಿಕೊಂಡಿವೆ. ಆದರೂ ಬಹಳಷ್ಟು ಸಹನೆಯನ್ನು ಪ್ರದರ್ಶಿಸಿರುವ ರಾಹುಲ್ ಶಾಂತವಾಗಿಯೇ ಇದ್ದಾರೆ ಎಂದಿರುವ ಅದು,ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಮತ್ತು ಸಾಧ್ಯವಿರುವಲ್ಲೆಲ್ಲ ಎಸ್‌ಪಿ ಮತ್ತು ಬಿಎಸ್‌ಪಿಗಳಿಗೆ ನೆರವಾಗಲಿದೆ ಎಂದು ಪ್ರಕಟಿಸುವ ಮತ್ತು ಇದೇ ವೇಳೆ ಪ್ರಿಯಾಂಕಾರನ್ನು ಮುಖ್ಯವಾಹಿನಿ ರಾಜಕಾರಣಕ್ಕೆ ತರುವ ಮೂಲಕ ಅವರು ತನ್ನ ದಾಳಗಳನ್ನು ಸರಿಯಾಗಿಯೇ ಉರುಳಿಸಿದ್ದಾರೆ ಎಂದಿದೆ.

ಇದು ಕಾಂಗ್ರೆಸ್‌ಗೆ ನೆರವಾಗಲಿದೆ. ಪ್ರಿಯಾಂಕಾರ ರಾಜಕೀಯ ರಂಗಪ್ರವೇಶದ ಕುರಿತು ಪ್ರಧಾನ ಮಂತ್ರಿಗಳೂ ಮಾತನಾಡಬೇಕಾಯಿತು. ಜನರು ಒಂದು ಕುಟುಂಬವನ್ನು ಒಪ್ಪಿಕೊಂಡಿದ್ದರೂ ಕೆಲವರಿಗೇಕೆ ಅಷ್ಟೊಂದು ಹೊಟ್ಟೆಯುರಿಯುತ್ತದೆ ಎಂದು ಸಂಪಾದಕೀಯವು ವ್ಯಂಗ್ಯವಾಡಿದೆ.

ನೆಹರು-ಗಾಂಧಿ ಕುಟುಂಬವು ತನಗೆ ಪ್ರಬಲ ಪ್ರತಿಸ್ಪರ್ಧಿ ಎಂದು ಬಿಜೆಪಿಯು ಭಾವಿಸಿರುವುದರಿಂದ ಅದು ಆ ಕುಟುಂಬದ ಬಗ್ಗೆ ದ್ವೇಷ ಭಾವನೆಗಳನ್ನು ಹೊಂದಿದೆ ಎಂದಿರುವ ಶಿವಸೇನೆ,ಅಧಿಕಾರದಲ್ಲುಳಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ತನಗೆದುರಾಗಿರುವ ತೀವ್ರ ಸವಾಲಿನಿಂದ ಭೀತಿಗೊಂಡಿದೆ ಎಂದಿದೆ.

ಪ್ರಿಯಾಂಕಾ ರೂಪದಲ್ಲಿ ಮತ್ತು ಮಾತುಗಳಲ್ಲಿ ತನ್ನ ಅಜ್ಜಿ ಇಂದಿರಾ ಗಾಂಧಿಯವರನ್ನೇ ಹೋಲುತ್ತಿದ್ದಾರೆ. ಇದು ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಖಂಡಿತ ಲಾಭಗಳನ್ನು ತರಲಿದೆ. ಅವರು ತನ್ನ ದಾಳಗಳನ್ನು ಸರಿಯಾಗಿ ಉರುಳಿಸಿದರೆ ಇಂದಿರಾರಂತೆ ‘ರಾಣಿ’ಯಾಗಿ ಹೊರಹೊಮ್ಮುತ್ತಾರೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X