Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐತಿಹಾಸಿಕ ನಗರ ಬಾರಕೂರನ್ನು ಪ್ರವಾಸೋದ್ಯಮ...

ಐತಿಹಾಸಿಕ ನಗರ ಬಾರಕೂರನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ದಿ

ಬಾರಕೂರು ಕೋಟೆಯಲ್ಲಿ ಆಳುಪೋತ್ಸವ ಉದ್ಘಾಟಿಸಿದ ಜಯಮಾಲಾ

ವಾರ್ತಾಭಾರತಿವಾರ್ತಾಭಾರತಿ25 Jan 2019 9:33 PM IST
share
ಐತಿಹಾಸಿಕ ನಗರ ಬಾರಕೂರನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ದಿ

ಉಡುಪಿ, ಜ.25: ಉಡುಪಿ ಜಿಲ್ಲೆಗೆ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಸೆಳೆ ಯುವ ಕೆಲಸ ಮಾಡಬೇಕು. ಬಾರಕೂರು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಮಾಡಲು ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈಗಾಗಲೇ ಈ ಕುರಿತು ಸರಕಾರದ ಗಮನ ಸೆಳೆಯಲಾಗಿದೆ. ಇದರ ಹಿಂದೆ ನನ್ನ ಉಸಿರು ಕೂಡ ಕೆಲಸ ಮಾಡುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಬಾರ ಕೂರು ಕೋಟೆಯಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಆಳುಪೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಾರಕೂರನ್ನು ಪ್ರವಾಸಿ ತಾಣವಾಗಿ ಮಾಡಿದಾಗ ಆಳುಪೋತ್ಸವವನ್ನು ಶಾಶ್ವತವಾಗಿ ಮಾಡಬಹುದಾಗಿದೆ. ಈ ಮೂಲಕ ತುಳುನಾಡನ್ನು 11ನೆ ಶತ ಮಾನದಿಂದ 14ನೆ ಶತಮಾನದವರೆಗೆ ಒಟ್ಟು ಸಾವಿರ ವರ್ಷಗಳ ಕಾಲ ಆಳ್ವಿಕೆ ನಡೆಸಿದ ಆಳುಪರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.

ಅದ್ಭುತವಾದ ಬೀಚ್, ಪ್ರಕೃತಿ, ದೇವಸ್ಥಾನಗಳು ಸೇರಿದಂತೆ ಹಲವು ಪ್ರವಾಸಿ ತಾಣವನ್ನು ಹೊಂದಿರುವ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ನಮ್ಮ ಮಕ್ಕಳಿಗೆ ಈ ಮೂಲಕ ಹೆಚ್ಚು ಹೆಚ್ಚು ಉದ್ಯೋಗ ಕಲ್ಪಿಸುವ ಕೆಲಸ ಮಾಡಬೇಕಾಗಿದೆ. ಅದಕ್ಕಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಆಳುಪೋತ್ಸವವನ್ನು ಪ್ರತಿವರ್ಷ ಇಲಾಖೆ ಯಿಂದ ಯೋಜನಾಬದ್ದವಾಗಿ ಮಾಡಬೇಕು. ಅದಕ್ಕೆ ಯಾವುದೇ ಹಣದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಬಾರಕೂರು ಪರಂಪರೆ ವ್ಯವಸ್ಥೆಗೆ ಗೌರವ ಸಿಗಬೇಕು ಎಂದು ಹೇಳಿದರು.

ಬಾರಕೂರು ಸಂಸ್ಥಾನದ ಡಾ.ಸಂತೋಷ ಭಾರತಿ ಗುರೂಜಿ ಶುಭಾಶಂಸನೆ ಗೈದರು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷ ಮನೋಹರ್ ಶೆಟ್ಟಿ, ಜಿಪಂ ಸದಸ್ಯ ಸುಧಾಕರ್ ಶೆಟ್ಟಿ, ಬಾರಕೂರು ಗ್ರಾಪಂ ಅಧ್ಯಕ್ಷೆ ಶೈಲಜಾ ಡಿಸೋಜ, ಯಡ್ತಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಬಾರಕೂರು ಚರ್ಚ್‌ನ ಧರ್ಮಗುರು ಫಾ.ಪಿಲಿಫ್ ಮೇರಿ ಅರಾನ್ಹ, ಬಾರಕೂರು ಮಸೀದಿ ಧರ್ಮಗುರು ಮೌಲಾನ ಮುಹಮ್ಮದ್ ರಫೀಕ್, ಬಾರಕೂರು ಶಾಂತರಾಮ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಪಂ ಸಿಇಓ ಸಿಂಧು ರೂಪೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಳುಪೋತ್ಸವ ವಿಶೇಷ ಅಂಚೆ ಲಕೋಟೆಯನ್ನು ಬಿಡು ಗಡೆಗೊಳಿಸಲಾಯಿತು. ಬಾರಕೂರು ಪ್ರದೇಶವನ್ನು ಪ್ರವಾಸೋದ್ಯಮ ತಾಣ ವಾಗಿ ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ವಾಗತಿಸಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ವಂದಿಸಿದರು. ಗಣೇಶ್ ಪ್ರಸಾದ್ ಬೆಂಗಳೂರು ಕಾರ್ಯಕ್ರಮ ನಿರೂಪಿದರು.

ಹೆರಿಟೇಜ್ ವಾಕ್

ಆಳುಪೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಹೆರಿಟೇಜ್ ವಾಕ್‌ಗೆ ಸಚಿವ ಜಯಮಾಲಾ ಬಾರಕೂರಿನ ಐತಿಹಾಸಿಕ ಸ್ಥಳ ಸಿಂಹಾಸನ ಗುಡ್ಡೆಯಲ್ಲಿ ಚಾಲನೆ ನೀಡಿದರು. ಬಳಿಕ ವಿವಿಧ ಜಾನಪದ ತಂಡಗಳನ್ನೊಳಗೊಂಡ ಶೋಭಾಯಾತ್ರೆಯು ಬಾರಕೂರು ಕೋಟೆವರೆಗೆ ಸಾಗಿ ಬಂತು.

ಇದೇ ಸಂದರ್ಭದಲ್ಲಿ ಸಚಿವರು ಹೆರಿಟೇಜ್ ವಾಕ್ ಆಂಡ್ರಾಯಿಡ್ ಆ್ಯಪ್‌ನ್ನು ಬಿಡುಗಡೆಗೊಳಿಸಿದರು. ಬಾರಕೂರು ಕೋಟೆಯಲ್ಲಿ ಹಮ್ಮಿಕೊಳ್ಳ ಲಾದ ಫಲಪುಷ್ಪ ಪ್ರದರ್ಶನಕ್ಕೆ ಸಚಿವರು ಚಾಲನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X