Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭ್ರಷ್ಟ ಅಧಿಕಾರಿಗಳಿಂದ ಪ್ರಾಥಮಿಕ ಶಿಕ್ಷಣ...

ಭ್ರಷ್ಟ ಅಧಿಕಾರಿಗಳಿಂದ ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ದುರ್ಬಲ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Jan 2019 10:03 PM IST
share
ಭ್ರಷ್ಟ ಅಧಿಕಾರಿಗಳಿಂದ ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ದುರ್ಬಲ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಜ.25: ಶಿಕ್ಷಣ ಇಲಾಖೆಯಲ್ಲಿರುವ ಭ್ರಷ್ಟ ಅಧಿಕಾರಿಗಳಿಂದಲೇ ಪ್ರಾಥಮಿಕ ಶಿಕ್ಷಣವಿಂದು ದುರ್ಬಲವಾಗಲು ಕಾರಣ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಪಾದಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಕ್ಷನ್ ಎಯ್ಡ್ ಸಂಸ್ಥೆ ಆಯೋಜಿಸಿದ್ದ ಎಲ್ಲರಿಗೂ ಗುಣಮಟ್ಟದ ಹಾಗೂ ಸಮಾನ ಶಿಕ್ಷಣಕ್ಕಾಗಿ ಆಂದೋಲನ ಕುರಿತು ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯಲ್ಲಿನ ಬಿಇಒ, ಡಿಡಿಪಿಐ ಸೇರಿದಂತೆ ಶೇ.90 ಕ್ಕೂ ಅಧಿಕ ಅಧಿಕಾರಿಗಳು ಭ್ರಷ್ಟರಾಗಿದ್ದಾರೆ. ಇವರು ನಿಯಮಗಳನ್ನು ಉಲ್ಲಂಘಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಉತ್ತೇಜಿಸುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ತೋರುವ ಕಾಳಜಿಯನ್ನು, ಅಲ್ಲಿ ಸಮಸ್ಯೆ ಎದುರಾದಾಗ ತೋರುವುದಿಲ್ಲ ಎಂದ ಅವರು, ಭ್ರಷ್ಟರಿಗೆ ಕೆಲವು ರಾಜಕಾರಣಿಗಳೂ ಬೆಂಬಲ ನೀಡುತ್ತಿದ್ದಾರೆ ಎಂದು ದೂರಿದರು.

ಪರಿಸರ ಭಾಷೆ(ಮಾತೃಭಾಷೆ)ಯ ಮೂಲಕ ಶಿಕ್ಷಣ ನೀಡುತ್ತಾ ಎಷ್ಟು ಭಾಷೆಗಳನ್ನು ಬೇಕಾದರೂ ಕಲಿಸಲು ಅವಕಾಶವಿದೆ. ಆದರೆ, ಇಂದು ಭಾಷೆಯನ್ನು ಸರಕಾಗಿಸಿಕೊಂಡಿರುವ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರದ ದಂಧೆಯನ್ನಾಗಿ ಮಾಡಿಕೊಂಡಿವೆ. ಖಾಸಗಿ ಶಾಲೆಗಳ ನಡುವೆ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಕುಸಿಯಲು ಸರಕಾರ ಪ್ರಾಥಮಿಕ ಶಿಕ್ಷಣ ನಿರ್ಲಕ್ಷಿಸಿದ್ದೇ ಕಾರಣವಾಗಿದೆ ಎಂದರು.

ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಸರಕಾರಕ್ಕೆ ವರದಿಯೊಂದನ್ನು ಸಲ್ಲಿಸಿದ್ದೆವು. ಆದರೆ, ಇದುವರೆಗೂ ಜಾರಿಯಾಗಿಲ್ಲ ಎಂದ ಅವರು, ಸರಕಾರದ ಮಟ್ಟದ ಅಧಿಕಾರಿಗಳಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಬಲಿಷ್ಠ ಮಾಡಲು ಆಸಕ್ತಿಯಿಲ್ಲ. 2015 ರಲ್ಲಿ ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸಬೇಕು ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, 2017 ರವರೆಗೂ ಅದನ್ನು ಜಾರಿ ಮಾಡಲು ಆಸಕ್ತಿ ತೋರಿಸಿಲ್ಲ. ಅಂದರೆ ಉನ್ನತ ಅಧಿಕಾರಿಗಳ ಮನಸ್ಥಿತಿಯನ್ನು ಇದು ತೋರಿಸುತ್ತದೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಶೇ.25 ಖಾಸಗಿ ಶಾಲೆಗಳು ಕನ್ನಡ ಮಾತಾಡಿದರೆ ದಂಡ ಹಾಕುತ್ತಾರೆ. ಅಂದರೆ ನಾವು ಯಾವ ವ್ಯವಸ್ಥೆಯಲ್ಲಿದ್ದೇವೆ. ಸರಕಾರದ ಆದೇಶ ಉಲ್ಲಂಘನೆ ಮಾಡುವ ಖಾಸಗಿ ಶಾಲೆಗಳ ಮೇಲೆ ಕ್ರಮಕ್ಕೆ ಯಾಕೆ ಯಾರು ಮುಂದಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಖಾಸಗಿ ಶಿಕ್ಷಣ ವ್ಯವಸ್ಥೆಯನ್ನು ಪ್ರೋತ್ಸಾಹಿಸುತ್ತಿವೆ. ಅದರ ಭಾಗವಾಗಿ ಸರಕಾರಗಳು ಭಾಷಾ ಪರವಾಗಿರುವ ಯಾವುದೇ ನೀತಿಗಳನ್ನು ಜಾರಿಗೆ ಹಿಂದೇಟು ಹಾಕುತ್ತಿದೆ. ಕಳೆದ 30 ವರ್ಷಗಳ ಹಿಂದಿನ ಸರೋಜಿನಿ ಮಹಿಷಿ ವರದಿ ಜಾರಿಮಾಡದೇ ನಿರ್ಲಕ್ಷಿಸಿರುವುದು ಇದಕ್ಕೆ ನಿದರ್ಶನ ಎಂದು ಹೇಳಿದರು.

ಆಕ್ಷನ್ ಎಯ್ಡ್ ಸಂಸ್ಥೆಯ ಮುಖ್ಯಸ್ಥೆ ನಂದಿನಿ ಮಾತನಾಡಿ, 18 ವರ್ಷದ ಎಲ್ಲರನ್ನೂ ಮಕ್ಕಳು ಎಂದು ಘೋಷಿಸಿದ್ದೇವೆ. ಆದರೆ, ಶಿಕ್ಷಣದಲ್ಲಿ 14 ವರ್ಷಕ್ಕಷ್ಟೇ ಸೀಮಿತಗೊಳಿಸಿರುವುದು ಸರಿಯಲ್ಲ. ಇದನ್ನು 18 ವರ್ಷದವರೆಗೆ ವಿಸ್ತರಿಸಬೇಕು. ಈ ಸಂಬಂಧ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ತಿದ್ದುಪಡಿ ಅಗತ್ಯವಿದೆ ಎಂದು ಆಗ್ರಹಿಸಿದರು.

ಕೇಂದ್ರೀಯ ಶಾಲೆಗಳಲ್ಲಿ ವಿಶಾಲವಾದ ವಾತಾವರಣ, ಗುಣಮಟ್ಟ ಶಿಕ್ಷಣ, ಅಗತ್ಯ ಶಿಕ್ಷಕರು ಎಲ್ಲವೂ ಸಿಗುತ್ತದೆ. ಅದೇ ರೀತಿ ಸರಕಾರಿ ಶಾಲೆಗಳನ್ನು ಕೇಂದ್ರೀಯ ಮಾದರಿಯಲ್ಲಿ ಮೇಲ್ದರ್ಜೆಗೇರಿಸಬೇಕು. ಅಲ್ಲದೆ, ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸಂಬಂಧಿಸಿದ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಸಲ್ಲಿಸಿರುವ ವರದಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಶಿಕ್ಷಣ ನೀಡುವುದು ಸರಕಾರಗಳ ಜವಾಬ್ದಾರಿಯಾಗಬೇಕು ಹಾಗೂ ಖಾಸಗಿ ಶಾಲೆಗಳನ್ನು ರಾಷ್ಟ್ರೀಕರಣಕ್ಕೆ ಒಳಪಡಿಸಬೇಕು. ಶಿಕ್ಷಣದ ಮಾಧ್ಯಮ ಪೋಷಕರ ಆಯ್ಕೆ ಎಂಬ ಸುಪ್ರೀಂಕೋರ್ಟ್‌ನ ತೀರ್ಪು ಭಾಷಾವಾರು ಪ್ರಾಂತ್ಯದ ಉದ್ದೇಶವನ್ನು ತಲೆಕೆಳಗಾಗಿಸಿದೆ.

-ಎಸ್.ಜಿ.ಸಿದ್ದರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X