Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತದಾನದ ಪವಿತ್ರ ಕಾರ್ಯವನ್ನು ನಿಭಾಯಿಸಿ:...

ಮತದಾನದ ಪವಿತ್ರ ಕಾರ್ಯವನ್ನು ನಿಭಾಯಿಸಿ: ಜನರಿಗೆ ರಾಷ್ಟ್ರಪತಿ ಕರೆ

ವಾರ್ತಾಭಾರತಿವಾರ್ತಾಭಾರತಿ25 Jan 2019 10:24 PM IST
share
ಮತದಾನದ ಪವಿತ್ರ ಕಾರ್ಯವನ್ನು ನಿಭಾಯಿಸಿ: ಜನರಿಗೆ ರಾಷ್ಟ್ರಪತಿ ಕರೆ

ಹೊಸದಿಲ್ಲಿ,ಜ.25: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಮತದಾನದ ಪವಿತ್ರ ಕಾರ್ಯವನ್ನು ನಿಭಾಯಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಜನರಿಗೆ ಕರೆ ನೀಡಿದ್ದಾರೆ. ಈ ಚುನಾವಣೆಯನ್ನು 21ನೇ ಶತಮಾನದ ಉಳಿದ ಭಾಗದಲ್ಲಿ ಭಾರತದ ರೂಪುರೇಶೆ ನಿರ್ಧರಿಸುವ ಶತಮಾನದ ಕ್ಷಣ ಎಂದು ಅವರು ವ್ಯಾಖ್ಯಾನಿಸಿದ್ದಾರೆ. 70ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಕೋವಿಂದ್, ಚುನಾವಣೆ ಎನ್ನುವುದು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ. ಅದು ಸಾಂಘಿಕ ಜಾಣ್ಮೆ ಮತ್ತು ಕ್ರಿಯೆಯನ್ನು ಬಯಸುತ್ತದೆ. 17ನೇ ಲೋಕಸಭೆಯನ್ನು ಚುನಾಯಿಸುವಲ್ಲಿ ನಮ್ಮ ಪ್ರಜಾಪ್ರಭುತ್ವದ ಕಲ್ಪನೆ ಮತ್ತು ಸಿದ್ದಾಂತಗಳು ಕಾರ್ಯತತ್ಪರವಾಗಲಿವೆ ಎಂದು ತಿಳಿಸಿದ್ದಾರೆ. ವೈವಿಧ್ಯತೆ, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿ ಎಂಬ ಮೂರು ತತ್ವಗಳ ಆಧಾರದ ಮೇಲೆ ನಿಂತಿರುವ ಒಳಗೊಳ್ಳುವಿಕೆ ಮತ್ತು ಬಹುಸಂಸ್ಕೃತಿಯ ತತ್ವಕ್ಕೆ ತಲೆಬಾಗದೆ ದೇಶದ ಅಭಿವೃದ್ಧಿ ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಕೋವಿಂದ್ ಅಭಿಪ್ರಾಯಿಸಿದ್ದಾರೆ. ಈ ದೇಶ ಪ್ರತಿಯೊಬ್ಬರಿಗೂ ಸೇರಿದೆ. ಪ್ರತಿ ಸಮೂಹ ಮತ್ತು ಪ್ರತಿ ಸಮುದಾಯ, ಪ್ರತಿ ಪ್ರದೇಶ ಮತ್ತು ಪ್ರತಿ ಗುರುತು. ಈ ದೇಶ ಪ್ರತಿ ಪ್ರಜೆಗೆ ಮತ್ತು ಪ್ರತಿ ವ್ಯಕ್ತಿಗೆ ಸೇರಿದ್ದಾಗಿದೆ. ಭಾರತದ ಬಹುತ್ವ ಅದರ ಅತ್ಯುನ್ನತ ಶಕ್ತಿಯಾಗಿದೆ ಮತ್ತು ಜಗತ್ತಿಗೆ ನೀಡಿದ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ರಾಷ್ಟ್ರಪತಿ ತಿಳಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 21ನೇ ಶತಮಾನದಲ್ಲಿ ಜನಿಸಿರುವವರು ಮೊದಲ ಬಾರಿ ಮತ ಹಾಕಲಿದ್ದಾರೆ. ದಯಮಾಡಿ ನಿಮ್ಮ ಹಕ್ಕನ್ನು ಚಲಾಯಿಸಿ. ನೀವು ಯಾರಿಗೆ ಮತ ಹಾಕುವಿರಿ ಎನ್ನುವುದು ನಿಮಗೆ ಬಿಟ್ಟ ವಿಷಯ. ನಾನು ಮತ ಹಾಕುವಂತೆ ಮನವಿ ಮಾತ್ರ ಮಾಡಬಲ್ಲೆ ಎಂದು ಕೋವಿಂದ್ ಯುವಜನತೆಗೆ ತಿಳಿಸಿದ್ದಾರೆ. ಸಾಮಾನ್ಯ ಜಾತಿ ವಿಭಾಗದ ಆರ್ಥಿಕ ದುರ್ಬಲ ಕುಟುಂಬಗಳಿಗೆ ಶೇ. 10 ಮೀಸಲಾತಿ ಒದಗಿಸಿರುವುದು ಗಾಂಧೀಜಿ ಕನಸಿನ ಭಾರತದತ್ತ ಇಟ್ಟ ಹೆಜ್ಜೆಯಾಗಿದೆ ಎಂದು ಹೇಳಿದ ಕೋವಿಂದ್, ಇದೇ ವೇಳೆ, ಐತಿಹಾಸಿಕವಾಗಿ ಸೌಲಭ್ಯವಂಚಿತವಾಗಿರುವ ಸಮುದಾಯದ ಜನರೊಂದಿಗೆ ನಿರಂತರ ಸಮಾಲೋಚನೆಗಳನ್ನು ನಡೆಸುವ ಅಗತ್ಯದ ಬಗ್ಗೆ ಒತ್ತಿ ಹೇಳಿದ್ದಾರೆ. ಜೊತೆಗಾರಿಕೆ ಎನ್ನುವುದು ಮುಕ್ತ, ಪ್ರಾಮಾಣಿಕ ಮಾತುಕತೆಯಿಂದ ಮತ್ತು ಕಳಂಕವಿಲ್ಲದ ಸಹಾನುಭೂತಿಯಿಂದ ಮಾತ್ರ ಸಾಧ್ಯ. ಇದು ಐತಿಹಾಸಿಕವಾಗಿ ಸೌಲಭ್ಯದಿಂದ ವಂಚಿತರಾಗಿರುವ ಸಮುದಾಯಗಳಿಗೂ ಅನ್ವಯಿಸುತ್ತದೆ. ಈ ಸಮುದಾಯದ ಸಂಕಷ್ಟಗಳನ್ನು ಆಲಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X