Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಸಿರು ಮಾರ್ಗದಲ್ಲಿ ಮೆಟ್ರೋ ಆರು ಬೋಗಿಗಳ...

ಹಸಿರು ಮಾರ್ಗದಲ್ಲಿ ಮೆಟ್ರೋ ಆರು ಬೋಗಿಗಳ ರೈಲು ಮರೀಚಿಕೆ

ವಾರ್ತಾಭಾರತಿವಾರ್ತಾಭಾರತಿ25 Jan 2019 11:05 PM IST
share
ಹಸಿರು ಮಾರ್ಗದಲ್ಲಿ ಮೆಟ್ರೋ ಆರು ಬೋಗಿಗಳ ರೈಲು ಮರೀಚಿಕೆ

ಬೆಂಗಳೂರು, ಜ.25: ನಾಗಸಂದ್ರದಿಂದ ಯಲಚೇನಹಳ್ಳಿಯ ಹಸಿರು ಮಾರ್ಗದಲ್ಲಿ 2018 ರ ಡಿಸೆಂಬರ್ ಅಂತ್ಯದ ವೇಳೆಗೆ ಆರು ಬೋಗಿಗಳ ಮೆಟ್ರೋ ರೈಲು ಸೇವೆ ನೀಡಲಾಗುತ್ತದೆ ಎಂದು ಹೇಳಿದ್ದರೂ, ಹಸಿರು ಮಾರ್ಗದ ಪ್ರಯಾಣಿಕರಿಗೆ ಈಗಲೂ ಮರೀಚಿಕೆ ಆಗಿದೆ.

2018ರ ಡಿಸೆಂಬರ್ ವೇಳೆಗೆ ಹಸಿರು ಮಾರ್ಗದ ಪ್ರಯಾಣಿಕರಿಗೆ ಆರು ಬೋಗಿಗಳ ಮೆಟ್ರೋ ರೈಲು ಸೇವೆ ನೀಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹೇಳಿದ್ದರು. ಆದರೆ, 2019 ರ ಜನವರಿ ಮುಗಿಯುತ್ತಿದ್ದರೂ ಪರೀಕ್ಷಾರ್ಥ ಸಂಚಾರವೇ ನಡೆಯುತ್ತಿದೆ. ಪರಿಣಾಮ ಜನರಿಗೆ ಈ ಸೇವೆ ಲಭ್ಯವಾಗುತ್ತಿಲ್ಲ ಎಂಬ ಕೂಗು ಕೇಳಿಬರುತ್ತಿದೆ.

ಹಸಿರು ಮಾರ್ಗದಲ್ಲಿ ಫೀಕ್ ಅವರ್‌ನಲ್ಲಿ (ಬೆಳಗ್ಗೆ 8.30ರಿಂದ 10.30 ಹಾಗೂ ಸಂಜೆ 4.30ರಿಂದ 6.30) ಒಂದು ಗಂಟೆಗೆ ಸರಾಸರಿ 10 ಸಾವಿರ ಮಂದಿ ಸಂಚರಿಸುತ್ತಾರೆ. ಆದರೆ, ನೇರಳೆ ಮಾರ್ಗದಲ್ಲಿ 19 ಸಾವಿರಕ್ಕೂ ಅಧಿಕ ಮಂದಿ ಸಂಚರಿಸುತ್ತಾರೆ. ಹೀಗಾಗಿ, ನೇರಳೆ ಮಾರ್ಗಕ್ಕೆ ಪ್ರಥಮ ಆದ್ಯತೆ ನೀಡಿದ್ದರು. ಇತ್ತೀಚಿನ ದಿನಗಳಲ್ಲಿ ಹಸಿರು ಮಾರ್ಗದಲ್ಲಿ ರೈಲುಗಳು ಭರ್ತಿ ಆಗುತ್ತಿವೆ. ರೈಲಿನೊಳಗೆ ಕಾಲಿಡಲೂ ಸ್ಥಳ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆರು ಬೋಗಿಗಳ ಮೆಟ್ರೋ ರೈಲು ಸೇವೆಗೆ ನಿಗಮವು ಹಿಂದೇಟು ಹಾಕುತ್ತಿರುವುದು ಎಷ್ಟು ಸರಿ ಎಂದು ಪ್ರಯಾಣಿಕರು ಕೇಳುತ್ತಿದ್ದಾರೆ.

ಆರು ಬೋಗಿಯ ಎರಡು ರೈಲುಗಳು ತಿಂಗಳುಗಳಿಂದ ಪರೀಕ್ಷಾರ್ಥ ಸಂಚಾರ ನಡೆಸುತ್ತಿದ್ದು, ಈ ಪೈಕಿ ಒಂದು ರೈಲು ಹಸಿರು ಮಾರ್ಗದಲ್ಲಿ ಪ್ರಾಯೋಗಿಕವಾಗಿ ಕಾರ್ಯಾಚರಣೆ ಮಾಡುತ್ತಿದೆ. ಪ್ರಸ್ತುತ ಆರು ಬೋಗಿಗಳ ಮೂರು ಮೆಟ್ರೋ ರೈಲುಗಳು ಕಾರ್ಯಾಚರಣೆ ಮಾಡುತ್ತಿವೆ. ಪರೀಕ್ಷಾರ್ಥ ಸಂಚರಿಸುತ್ತಿರುವ ರೈಲುಗಳು ಶೀಘ್ರ ವಾಣಿಜ್ಯ ಸಂಚಾರ ಆರಂಭಿಸಲಿವೆ. ಜನವರಿ ಅಂತ್ಯದೊಳಗೆ ಸೇವೆಗೆ ಅಣಿಗೊಳಿಸುವ ಚಿಂತನೆಯೂ ಇದೆ ಎಂದು ನಿಗಮದ ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X