Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ ನೌಕರರ ಸಂಘದಲ್ಲಿ...

ಕೆಎಸ್ಸಾರ್ಟಿಸಿ ನೌಕರರ ಸಂಘದಲ್ಲಿ ಭ್ರಷ್ಟಾಚಾರ ನಡೆದಿಲ್ಲ: ಜಿ.ಎ.ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ25 Jan 2019 11:13 PM IST
share

ಬೆಂಗಳೂರು, ಜ.25: ಕೆಎಸ್ಸಾರ್ಟಿಸಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಿದ್ದು, ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸಹಕಾರ ಸಂಘದ ಮಾಜಿ ಅಧ್ಯಕ್ಷ ಜಿ.ಎ.ಮಂಜುನಾಥ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸುವವರು ನೇರ ಚರ್ಚೆಗೆ ಬರಬಹುದು. 2005ರಿಂದ 2007ರವರೆ ಕೆಎಸ್ಸಾರ್ಟಿಸಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಾನು ಭ್ರಷ್ಟಾಚಾರ ರಹಿತವಾಗಿ ಕಾರ್ಯ ನಿರ್ವಹಿಸಿದ್ದಕ್ಕೆ ಸೂಕ್ತ ದಾಖಲೆಗಳೂ ಇವೆ. ಸುಖಾಸುಮ್ಮನೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ಇದರಿಂದ ಕಾರ್ಮಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

2007ರಲ್ಲಿ ಕೆಎಸ್ಸಾರ್ಟಿಸಿ ಸೊಸೈಟಿ ಬೋರ್ಡ್, ರಾಜ್ಯ ಸರಕಾರ ಹಾಗೂ ನೆಲಮಂಗಲ ಹೌಸಿಂಗ್ ಬೋರ್ಡ್ ಅನುಮತಿ ಮೇರೆಗೆ ಕರಾರು ಮಾಡಿಕೊಂಡು 110 ಎಕರೆ ಪ್ರದೇಶದಲ್ಲಿ ಸಾರಿಗೆ ನಗರ ಬಡಾವಣೆ ಅಭಿವೃದ್ಧಿ ಬಗ್ಗೆ ಯೋಜನೆ ರೂಪಿಸಲಾಗಿತ್ತು. ಕೆಎಸ್ಸಾರ್ಟಿಸಿ ಹೌಸಿಂಗ್ ಸೊಸೈಟಿಯ ಸಾರಿಗೆ ನಗರ ಬಡಾವಣೆಯಲ್ಲಿ ನಿವೇಶನ ಪಡೆಯಲು 930 ಮಂದಿ ಸದಸ್ಯರ ಪೈಕಿ 580 ಸದಸ್ಯರು ಸಂಪೂರ್ಣ ಹಣ ನೀಡಿದ್ದರು. ಉಳಿದವರು ಅಡ್ವಾನ್ಸ್ ಹಣ ಕಟ್ಟಿದ್ದರು ಎಂದು ತಿಳಿಸಿದರು.

ಒಟ್ಟಾರೆ 110 ಎಕರೆಯಲ್ಲಿ 72 ಎಕರೆ ಮಾತ್ರ ವರ್ಗಾವಣೆಯಾಗಿದೆ. ಈ ವ್ಯವಹಾರದಲ್ಲಿ ಅಡಳಿತ ಮಂಡಳಿ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವುದೆ ಲಾಬಿ ನಡೆದಿಲ್ಲ. ಈ ಯೋಜನೆ ಕಾರಣಾಂತರದಿಂದ ಯಶಸ್ವಿಯಾಗಿ ಅನುಷ್ಠಾನಗೊಳ್ಳಲಿಲ್ಲ. ನೌಕರರ ಹಣಕ್ಕೆ ಯಾವುದೇ ಮೋಸವಾಗುವುದಿಲ್ಲ. ನೆಲಮಂಗಲ ಯೋಜನಾ ಪ್ರಾಧಿಕಾರ ನಿವೇಶನಗಳನ್ನು ಬಿಡುಗಡೆ ಮಾಡಿದೆ. ಆದರೆ ಇನ್ನೂ ಖಾತಾ ಮಾಡಿಕೊಟ್ಟಿಲ್ಲ. ಈ ಯೋಜನೆ ಅನುಷ್ಠಾನಗೊಳ್ಳದಿರಲು ಈಗಿನ ಆಡಳಿತ ಮಂಡಳಿ ನಿರ್ಲಕ್ಷ್ಯ ಕಾರಣ ಎಂದು ದೂರಿದರು.

ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಜ.27ರಂದು ಜರುಗಲಿದೆ. ಈ ಚುನಾವಣೆಯಲ್ಲಿ ನಾನೂ ಸ್ಪರ್ಧಿಸಿದ್ದೇನೆ. ಈ ಹಿನ್ನೆಲೆ ಪ್ರತಿಸ್ಪರ್ಧಿಗಳು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನನ್ನ ಮೇಲೆ ಹೀಗೆ ಆರೋಪಗಳನ್ನು ಮಾಡುತ್ತಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X