Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರದಾದ್ಯಂತ ಉಲ್ಬಣಿಸಿದ ಕಸ...

ಬೆಂಗಳೂರು ನಗರದಾದ್ಯಂತ ಉಲ್ಬಣಿಸಿದ ಕಸ ವಿಲೇವಾರಿ ಸಮಸ್ಯೆ

ಎಲ್ಲೆಂದರಲ್ಲಿ ನಿಂತ ಕಸ ತುಂಬಿದ ಲಾರಿಗಳು

ವಾರ್ತಾಭಾರತಿವಾರ್ತಾಭಾರತಿ25 Jan 2019 11:19 PM IST
share
ಬೆಂಗಳೂರು ನಗರದಾದ್ಯಂತ ಉಲ್ಬಣಿಸಿದ ಕಸ ವಿಲೇವಾರಿ ಸಮಸ್ಯೆ

ಬೆಂಗಳೂರು, ಜ.25: ರಾಜಧಾನಿಯಲ್ಲಿ ಮೂರು ದಿನಗಳಿಂದ ಕಸ ವಿಲೇವಾರಿಯಾಗದೆ ಕಸ ತುಂಬಿದ ಲಾರಿಗಳು ಎಲ್ಲೆಂದರಲ್ಲಿ ನಿಂತಿದ್ದು, ನಗರದಾದ್ಯಂತ ಕಸ ವಿಲೇವಾರಿ ಸಮಸ್ಯೆ ಉಲ್ಬಣಿಸುತ್ತಿದೆ.

ಬೆಳ್ಳಳ್ಳಿ ಕೋರೆಯಲ್ಲಿ ಕಸ ಹಾಕಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ, ನಗರದಲ್ಲಿ ಮೂರು ದಿನಗಳಿಂದ ಕಸ ವಿಲೇವಾರಿಯಾಗಿಲ್ಲ. ಕಸ ತುಂಬಿದ ಲಾರಿಗಳು ಎಲ್ಲೆಂದರಲ್ಲಿ ನಿಂತಿದ್ದು, ನಗರದಾದ್ಯಂತ ಗಬ್ಬು ನಾರುತ್ತಿದೆ. ಅಲ್ಲದೆ, ಕೆಲ ವರ್ಷಗಳ ಹಿಂದೆ ಕಸದ ಅಸಮರ್ಪಕ ವಿಲೇವಾರಿಯಿಂದ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ ಪಡೆದಿದ್ದ ಬಿಬಿಎಂಪಿ ಕಸದ ಸಮಸ್ಯೆ ನಿವಾರಣೆಗೆ ಪೌರ ಕಾರ್ಮಿಕರಿಂದ ಹಿಡಿದು ಬಿಬಿಎಂಪಿಯ ಎಲ್ಲ ಅಧಿಕಾರಿಗಳು ಶ್ರಮವಹಿಸಿದ್ದರು. ಆದರೆ, ಈಗ ಸಮಸ್ಯೆ ಶುರುವಾಗಿ ಮೂರು ದಿನಗಳಾದರೂ ಬಿಬಿಎಂಪಿ ಅಧಿಕಾರಿಗಳು ಕಣ್ಣು ಬಿಟ್ಟಿಲ್ಲ.

ಕಸದ ಸಮಸ್ಯೆ ತೀವ್ರಗೊಂಡ ಹಿನ್ನಲೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಬಿಬಿಎಂಪಿ ಆಯುಕ್ತರು ಹಾಗೂ ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಸದ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದು, ಪರಿಸ್ಥಿತಿ ಕೈ ಮೀರುವ ಮುನ್ನವೇ ಮೇಯರ್, ಉಪಮೇಯರ್ ಬೆಳ್ಳಳ್ಳಿ ಕೋರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳಳ್ಳಿ ಕೋರೆಯಲ್ಲಿ ಕಸ ವಿಲೇವಾರಿ ಸಂಬಂಧ ಘನತ್ಯಾಜ್ಯ ವಿಲೇವಾರಿ ಜಂಟಿ ಆಯುಕ್ತ ಸರ್ಫ್ರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕಸದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡು ನಗರದ ಮಾನ ಮತ್ತೊಮ್ಮೆ ಹರಾಜಾಗುವುದರಲ್ಲಿ ಅನುಮಾನವಿಲ್ಲ ಎಂದು ನಾಗರಿಕರು ದೂರತೊಡಗಿದ್ದಾರೆ.

ಗಬ್ಬು ನಾರಲು ಶುರುವಾದ ರಾಜಧಾನಿ: ಶಿವಾನಂದ ಸರ್ಕಲ್, ಮಲ್ಲೇಶ್ವರ, ಗಾಂಧಿನಗರ, ಶ್ರೀ ರಾಮಪುರ ಸೇರಿದಂತೆ ನಗರದ ಹಲವೆಡೆ ಮನೆಗಳಿಂದ ತಂದ ಕಸ ರಸ್ತೆಗಳ ಮಧ್ಯೆಯೇ ಇದ್ದು, ಗಲ್ಲಿ-ಗಲ್ಲಿಗಳು ಗಬ್ಬು ನಾರಲು ಶುರುವಾಗಿದೆ. ಕಸದ ಅಸಮರ್ಪಕ ವಿಲೇವಾರಿಯಿಂದ ಪಾಲಿಕೆ ವಿಶ್ವ ಮಟ್ಟದಲ್ಲಿ ಅಪಖ್ಯಾತಿ ಪಡೆದಿತ್ತು. ಮಾಧ್ಯಮಗಳಲ್ಲಿ ಐಟಿ ಸಿಟಿ ಗಾರ್ಬೇಜ್ ಸಿಟಿ ಎಂದು ವರದಿ ಪ್ರಸಾರವಾಗಿದ್ದವು. ಆದರೂ, ಬಿಬಿಎಂಪಿ ಎಚ್ಚೆತ್ತುಕೊಳ್ಳಲಿಲ್ಲ.

ಸಮಸ್ಯೆ ಮುಚ್ಚಿಟ್ಟ ಅಧಿಕಾರಿಗಳು: ನಗರದಲ್ಲಿ ದಿನಕ್ಕೆ ಸಾವಿರಾರು ಟನ್ ಕಸ ಉತ್ಪತ್ತಿಯಾಗುತ್ತಿದ್ದು, ಬಿಬಿಎಂಪಿ ಬೆಳ್ಳಳ್ಳಿ ಕೋರೆ ಸೇರಿ 7 ಕೋರೆಯಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿದೆ. ಬೆಳ್ಳಳ್ಳಿ ಕೋರೆ ದೊಡ್ಡದಿದ್ದು, ಇಲ್ಲಿ ಕಸ ಹಾಕಲು ವಿರೋಧ ವ್ಯಕ್ತವಾಗಿದೆ. ಕಸ ಸಾಗಣೆಯ ಲಾರಿಗಳು ನಿಂತಿದ್ದರೂ, ಪಾಲಿಕೆ ಅಧಿಕಾರಿಗಳು ಈ ವಿಚಾರ ಮುಚ್ಚಿಟ್ಟಿದ್ದರಿಂದ ಕಸದ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ.

ಹೊರವಲಯದ ಗಣಿ ಹೊಂಡಗಳು: ಆನೇಕಲ್ ಬಳಿಯ ಹುಲ್ಲಹಳ್ಳಿ ಮತ್ತು ನೆಲಮಂಗಲ ಬಳಿ ಮಾರೇನಹಳ್ಳಿ ಬಿಬಿಎಂಪಿ ಅಧಿಕಾರಿಗಳು ಜಾಗ ಗುರುತಿಸಿದ್ದಾರೆ. ಅದರಂತೆ ಹುಲ್ಲಹಳ್ಳಿಯಲ್ಲಿ 10 ಎಕರೆ ಮತ್ತು ಮಾರೇನಹಳ್ಳಿಯಲ್ಲಿ 12 ಎಕರೆ ಸ್ಥಗಿತವಾಗಿರುವ ಕಲ್ಲು ಗಣಿಗಾರಿಕೆ ಜಾಗವಿದೆ. ಅಲ್ಲಿ ತ್ಯಾಜ್ಯ ವಿಲೇವಾರಿಗೆ ನಿರ್ಧರಿಸಲಾಗಿದೆ.

ಬಿಬಿಎಂಪಿ ಗುರುತಿಸಿರುವ ಗಣಿಹೊಂಡದಲ್ಲಿ ಮಿಶ್ರ ತ್ಯಾಜ್ಯ ವಿಲೇವಾರಿ ಮಾಡಲು ಇನ್ನೆರಡು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಜೊತೆಗೆ ತ್ಯಾಜ್ಯ ವಿಲೇವಾರಿ ನಂತರ ದುರ್ವಾಸನೆ ಬರದಂತೆ ತಡೆಯಬೇಕಿದೆ. 

ಕಸದ ಸಮಸ್ಯೆ ಪರಿಹಾರಕ್ಕೆ ಆಯುಕ್ತರು ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಸಮಸ್ಯೆ ನಿವಾರಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಮೂಲಕ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕ್ರಮ ವಹಿಸುತ್ತೇವೆ.

-ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X